TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಗೆ ಮರದ ಕಡ್ಚಿಲ್ ಅಳವಡಿಕೆ


ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ದೇಯಿ ಬೈದ್ಯೆತಿ ಧರ್ಮ ಚಾವಡಿಯ ಒಳಾಂಗಣದ ಸುತ್ತು ಆವರಣಕ್ಕೆ ಮರದ ಕಡ್ಚಿಲ್ ಅಳವಡಿಸಲಾಗಿದೆ.

ಈಗ ಪಾವನ ಸಾನಿಧ್ಯದ ಸೌಂದರ್ಯ ಮತ್ತು ಧಾರ್ಮಿಕ ಕಳೆ ಇಮ್ಮಡಿಯಾಗಿದೆ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಆದಿ ದೈವ ಧೂಮಾವತಿ ಕ್ಷೇತ್ರ – ಸಾಯನ ಬೈದ್ಯರ ಗುರು ಪೀಠಬಡಗನ್ನೂರು ಗ್ರಾಮ, ಪಡುಮಲೆ, ಪುತ್ತೂರು ತಾಲೂಕು ದ.ಕ. ಯಲ್ಲಿದೆ.

ಐದು ಶತಮಾನಗಳ ಹಿಂದೆ ತುಳುನಾಡ ಮಣ್ಣಲ್ಲಿ ಅವತಾರ ತಾಳಿದ ಯಮಳ ವೀರರು ಕೋಟಿ-ಚೆನ್ನಯರು ನಾಡಿನಾದ್ಯಂತ 250 ಕ್ಕಿಂತಲೂ ಅಧಿಕ ಗರೋಡಿಗಳಲ್ಲಿ ಆರಾಧನೆ ಪಡೆಯುತ್ತಾ ಬಂದಿದ್ದು, ಇದೇ ಮೊದಲ ಬಾರಿಗೆ ತಮ್ಮ ಹುಟ್ಟೂರಿನಲ್ಲಿ ಉಪಾಸನೆ ಪಡೆಯುವ ಸುವರ್ಣ ಕಾಲ ಕೂಡಿ ಬಂದಿದೆ. ಹುಟ್ಟೂರಿನ ಈ ಆರಾಧನೆಯು, ಸ್ವತಃ ಕೋಟಿ ಚೆನ್ನಯರ ಮೂಲಸ್ಥಾನವಾದ ಗೆಜ್ಜೆಗಿರಿ ನಂದನ ಬಿತ್ತ್ ಲ್ ನಲ್ಲಿ ನಡೆಯುವ ಮೂಲಕ ಸಮಸ್ತ ಭಕ್ತರ ಪಾಲಿಗೆ ಸಂಭ್ರಮದ ಕ್ಷಣ ಎದುರಾಗಿದೆ. ಅದರಲ್ಲೂ ವಿಶೇಷವಾಗಿ ಮಾತೆ ದೇಯಿ ಬೈದ್ಯೆತಿ, ಗುರು ಸಾಯನ ಬೈದ್ಯರ ಸಹಿತ ಕೌಟುಂಬಿಕ ಚೌಕಟ್ಟಿನಲ್ಲಿ ನಡೆಯುವ ಮೂಲಸ್ಥಾನದ ಆರಾಧನೆ ಕೋಟಿ-ಚೆನ್ನಯರ ಉಪಾಸನಾ ಪರಂಪರೆಯಲ್ಲೇ ಕಲಶಪ್ರಾಯವಾಗಿ ಕಂಗೊಳಿಸಲಿದೆ.
ಕೋಟಿ ಚೆನ್ನಯರು ನಲಿದಾಡಿದ ಮಣ್ಣಿನಲ್ಲಿ.ಗೆಜ್ಜೆಗಿರಿ ನಂದನ ಬಿತ್ತಿಲ್ ಅವಳಿ ವೀರರ ಜನ್ಮದ ಮೂಲ ನೆಲೆ. ಅವರ ತರವಾಡು ಕ್ಷೇತ್ರ, ಮಾತ್ರವಲ್ಲ ಸ್ವತಃ ಕೋಟಿ-ಚೆನ್ನಯರು ಬಾಳಿ ಬೆಳಗಿದ ತಾಣ. ಮಾವ ಸಾಯನ ಬೈದ್ಯರ ಕರ್ಮಭೂಮಿಯೂ ಇದೇ, ಮಾತೆ ದೇಯಿ ಬೈದ್ಯೆತಿಗೆ ಪುನರ್ಜನ್ಮ ನೀಡಿದ ಮೂಲ ಸ್ಥಾನವೂ ಇದೇ. ಈ ಎಲ್ಲ ದೈವಾಂಶ ಸಂಭೂತರಿಂದ ಉಪಾಸನೆ ಪಡೆದ ಧೂಮಾವತಿ ದೈವದ ತಾಣವೂ ಇದೇ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »