TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »