TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »