TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »