TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »