TOP STORIES:

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »