TOP STORIES:

FOLLOW US

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ ಅಮರ್ ರಹೇ


ಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿ೦ಜ.

ನಮ್ಮನ್ನು ಅಗಲಿದ ಸಂತೋಷ್ ಗೆ

ಇದು ಅಕ್ಷರದ ನಮನ  ಅಷ್ಟೇ.

ಶ್ರೀ ಕ್ಷೇತ್ರ ಗೆಜ್ಜೆಗಿರಿ ಸೌಂದರ್ಯವನ್ನು ನೋಡಿದಾಗ ಯಾರನ್ನು ಮೂಕವಿಸ್ಮಿತರನ್ನಾಗಿಸುತ್ತದೆ. ಅಂತಹ ಸುಂದರ ದೇವಸ್ಥಾನದನಿರ್ಮಾಣದ ಆರ್ಕಿಟೆಕ್ಚರ್ ಸಂತೋಷ್ ಕುಮಾರ್ ಕೊಟ್ಟಿಂಜ. ಕೆಲಸವನ್ನು ನಿಷ್ಠೆಯಿಂದ, ಭಕ್ತಿಯಿಂದ ಹಾಗೂಪ್ರಾಮಾಣಿಕತೆಯಿಂದ ಮಾಡಿದ ವ್ಯಕ್ತಿ ಸಂತೋಷ್.

ಅವರು ಕೋಟಿಚೆನ್ನಯ್ಯ , ದೇಯಿ ಬೈದೆತಿ ಬಗ್ಗೆ ಅಧ್ಯಯನ ಮಾಡಿದ್ದರು. ತಜ್ಞರೊಂದಿಗೆ ಸಮಾಲೋಚನೆ ಮಾಡಿದ್ದರು. ಕಾರಣದಿಂದಲೇ ಸರ್ವರೂ ಮೆಚ್ಚುವ ದೇವಸ್ಥಾನದ ನಿರ್ಮಾಣದ ಆರ್ಕಿಟೆಕ್ಚರ್ ಆಗಿ ಅವರು ಯಶಸ್ವಿಯಾಗಿದ್ದರು.

ಅದು ಅಲ್ಲದೆ ಗೆಜ್ಜೆ ಗಿರಿಯ ಮೂಲಕ ಸಮಾಜಕ್ಕೆ ಕೊಡುಗೆ ಕೊಡಬೇಕು ಎಂಬ ಪ್ರಾಮಾಣಿಕ ಆಸೆ ಅವರಲ್ಲಿ ಇತ್ತು. ಮರಣಹೊಂದುವ ಎರಡು ದಿವಸದ ಮುಂದೆ ಅವರೊಂದಿಗೆ ಮಾತನಾಡಲು ಬಂದ ಕ್ಷೇತ್ರದ ಪದಾಧಿಕಾರಿ ಹಾಗೂ ಸಲಹೆಗಾರ ರಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದರು. ಅಂದರೆ ಗೆಜ್ಜೆಗಿರಿ ಬಗ್ಗೆ ಅವರಿಗಿದ್ದ ಕನಸು, ಆಶಯ ಅದನ್ನು ಶಬ್ದಗಳಲ್ಲಿ ವರ್ಣಿಸಲುಅಸಾಧ್ಯ.

ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳ, ಉದ್ಯೋಗ ದೊರಕಿಸುವ ಕಾರ್ಯಕ್ರಮಗಳ

ಮೂಲಕ ಗೆಜ್ಜೆಗಿರಿಯ ಸ್ಥಾಪನೆಯ ನಿಜವಾದ ಉದ್ದೇಶವನ್ನು ಹಾಗೂ ಕೋಟಿಚೆನ್ನಯರ ಆಶಯಗಳನ್ನು ಅನುಷ್ಠಾನಿಸಲು , ಮೂಲಕ

ಸಮಾಜಕ್ಕೆ ಕೊಡುಗೆ ನೀಡಬೇಕು ಎಂಬ ಸ್ಪಷ್ಟ ಕಲ್ಪನೆ ಹೊಂದಿದ್ದ ಸಂತೋಷ್ ನಮ್ಮ ಜೊತೆ ಇಲ್ಲ.

ಅವರೊಬ್ಬ ಕ್ಷೇತ್ರದ ಆರ್ಕಿಟೆಕ್ಚರ್ ಮಾತ್ರ ಆಗಿರಲಿಲ್ಲ, ಅವರು ಕ್ಷೇತ್ರದ ಹಿನ್ನೆಲೆಯ  ಬೌದ್ಧಿಕ ಶಕ್ತಿ ಕೂಡ ಆಗಿದ್ದರು.

ಇಂತಹ ಸಂತೋಷ್ ಕುಮಾರ್ ಕೊಟ್ಟಿಂಜ ನಮ್ಮೊಂದಿಗಿಲ್ಲ. ಆದರೆ ಅವರು ಹಂಚಿಕೊಂಡ ಕನಸು ನಮ್ಮೊಂದಿಗಿದೆ. ಅದನ್ನು ನನಸುಮಾಡುವ ಜವಾಬ್ದಾರಿ ನಮ್ಮ ಮೇಲೆ  ಇದೆ. ಗೆಜ್ಜೆಗಿರಿ ಭಕ್ತರು ಹಾಗೂ ಸರ್ವ ಸಮಾಜ ಎಂದಿಗೂ ಸಂತೋಷ್ ಕುಮಾರ್ಕೊಟ್ಟಿಂಜ ಅವರನ್ನು ನೆನಪಿಸುತ್ತದೆ. ಅವರ ಕನಸನ್ನು ನನಸು ಮಾಡಿದಾಗಲೇ ಅದು ಅವರಿಗೆ ಸಲ್ಲುವ ಬಹುದೊಡ್ಡ ಗೌರವ.

ಮತ್ತೊಮ್ಮೆಅಮರ್ ರಹೇ ಸಂತೋಷ್ ಕುಮಾರ್ ಕೊಟ್ಟಿಂಜ.


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »