TOP STORIES:

ಶ್ರೀ ಗೆಜ್ಜೆಗಿರಿ ನೂತನ ಮೇಳಕ್ಕೆ ಶ್ರೀ ಕೆ ಚಿತ್ತರಂಜನ್ ಗರೋಡಿ ಅವರ ಭಕ್ತಿಯ ಸೇವೆ


ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಚೌಕಿ ಪೂಜೆಯ ದೇವರ ಬೆಳ್ಳಿಯ ಎರಡು ಕಿರೀಟ ಮತ್ತು ಬೆಳ್ಳಿಯ ಸುದರ್ಶನ ಚಕ್ರದ ಸಂಪೂರ್ಣ ವೆಚ್ಚ ಶ್ರೀ ಕೆ. ಚಿತ್ತರಂಜನ್ ಗರೋಡಿ ಮತ್ತು ಅವರ ಧರ್ಮಪತ್ನಿ ಶ್ರೀಮತಿ ಸುಲೋಚನ ಅಮ್ಮ ಅವರ ಭಕ್ತಿಯ ಸೇವೆ

ತಾನು ಸಂಪಾದಿಸಿರುವ ಮುಕ್ಕಾಲು ಭಾಗವನ್ನು ಶೈಕ್ಷಣಿಕವಾಗಿ, ಧಾರ್ಮಿಕ ಶ್ರದ್ಧಾ ಕೇಂದ್ರಗಳಿಗೆ, ಸಮಾಜಕ್ಕೆ ಅರ್ಪಿಸಿ ರುವ ಕಲಿಯುಗದ ಮಹಾ ಧಾನಶೂರೆಂದೆ ಪ್ರಖ್ಯಾತಿಯನ್ನು ಪಡೆದವರು ಶ್ರೀ ಕೆ. ಚಿತ್ತರಂಜನ್ ಗರೋಡಿ. ಶ್ರೀಯುತರು ದೇಯಿ ಬೈದೆತಿ-ಕೋಟಿ-ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಅಡಿಪಾಯದ ರೂವಾರಿ ಗಳು.

ಮಂಗಳೂರಿನ ಹೃದಯ ಭಾಗದಲ್ಲಿರುವ ಐತಿಹಾಸಿಕ ಪ್ರಸಿದ್ಧ ಕಾರಣಿಕದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಾ.. ತುಳುನಾಡಿನ ಅದೆಷ್ಟೋ ಗರಡಿ ಕ್ಷೇತ್ರ, ದೈವ-ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ ಗಳು ಮಾತ್ರವಲ್ಲದೇ ಸಾವಿರಾರು ಮಕ್ಕಳ ವಿದ್ಯಾಭ್ಯಾಸಕ್ಕೆ ದಾರಿದೀಪವಾಗಿ, ಕೊಡುಗೈ ಧಾನಿಗಳಾಗಿ ಅನೇಕ ಸಮಾಜಸೇವೆಯಲ್ಲಿ ಪಾಲ್ಗೊಂಡು, ಅದೆಷ್ಟೋ ಜನರ ಮತ್ತು ಸಮಾಜದ ಬಗ್ಗೆ ಕಾಳಜಿ ಹಾಗು ಅವರ ಸಮಸ್ಯೆಯಯನ್ನು ಬಗೆಹರಿಸಲು ಸದಕಾಲ ಶ್ರಮಿಸಿರುವ ಶ್ರೀಯುತರ ಸಾಧನೆ ತುಂಬಾ ಮೆಚ್ಚುವಂತದ್ದು. ಪ್ರಸ್ತುತ ಶ್ರೀ ಆದಿ ಧೂಮಾವತಿ, ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಗೌರವ ಸಲಹೆಗಾರರಾಗಿ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸುತ್ತಾ, ಗೆಜ್ಜೆಗಿರಿ ಕ್ಷೇತ್ರದ ಪುನರುತ್ಥಾನಕ್ಕೆ ನೀಡಿರುವ ಸೇವೆಯನ್ನೂ ಸ್ಮರಿಸುತ್ತ ಶ್ರೀಯುತರಿಗೆ ಇನ್ನಷ್ಟು ಕಾಲ ಸರ್ವರ ಹಾರೈಕೆಗಳೊಂದಿಗೆ ಆಯುರಾರೋಗ್ಯ ಸುಖ, ಶಾಂತಿ ನೆಮ್ಮದಿಯ ಜೀವನವನ್ನು ಆ ಭಗವಂತನು ಹಾಗು ಕ್ಷೇತ್ರದ ಶಕ್ತಿಗಳು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ(ರಿ) ಗೆಜ್ಜೆಗಿರಿ ಮತ್ತು ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಪರವಾಗಿ ಧನ್ಯವಾದಗಳು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »