TOP STORIES:

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »