TOP STORIES:

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »