TOP STORIES:

ಶ್ರೀ ದೇವದಾಸ್ ಶಾಂತಿಯವರಿಗೆ ತಂತ್ರ ದೀಕ್ಷೆ


ನಮ್ಮ ನಾರಾಯಣ ಗುರು ವೈದಿಕ ಸಮಿತಿಯ(ರಿ.) ಸದಸ್ಯರಾದ ಶ್ರೀ ದೇವದಾಸ್ ಶಾಂತಿಯವರಿಗೆ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಋದಂಭರಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ , ಶ್ರೀ ಮಾತ್ತಾನಂ ಅಶೋಕನ್ ತಂತ್ರಿ ಹಾಗೂ ಶ್ರೀ ಉಷೇಂದ್ರನ್ ತಂತ್ರಿ ಯವರ ನೇತೃತ್ವದಲ್ಲಿ ತಾ. 20-02-2021 ನೇ ಶನಿವಾರ ಕೇರಳದ ಶ್ರೀ ಕ್ಷೇತ್ರ ಮಾತ್ತಾನಂ ಚೆರ್ತಲದಲ್ಲಿ ಜರಗಿತು.


ಶ್ರೀಯುತರು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ, ಶ್ರೀ ನಾರಾಯಣ ಶಾಂತಿಯವರಿಂದ ವೈದಿಕ ಶಿಕ್ಷಣ ಪ್ರಾರಂಭಿಸಿ,

ಕೊಕ್ಕಡ ದಿವಂಗತ ಶ್ರೀ ಅನಂತ ಪದ್ಮನಾಭ ಶಾಸ್ತ್ರಿಯವರಿಂದ ಹಾಗೂ ಶ್ರೀ ಅಮರಸಿಂಹಜ ಇವರಿಂದ ಸಂಸ್ಕೃತ ಶಿಕ್ಷಣ ಪಡೆದು,
ಶ್ರೀ ಕ್ರಷ್ಣಮೂರ್ತಿ ಪೆಜತ್ತಾಯ , ಮಹೇಶ್ ಮೂರ್ತಿ ಐತ್ತಾಳ್, ಭಾಷ್ಯಂ ಸ್ವಾಮಿ ಮತ್ತು ದಿವಂಗತ ಶ್ರೀ ವಿಜಯನ್ ತಂತ್ರಿಯವರಿಂದ ಜ್ಯೋತಿಷ್ಯ ಅಭ್ಯಾಸ ಮಾಡಿದರು.

ಶ್ರೀ ಶ್ರೀನಿವಾಸ ಶಾಸ್ತ್ರಿ , ದಿವಂಗತ ಶ್ರೀ ಸುಬ್ಬರಾವ್ ಮತ್ತು ಶ್ರೀ ದಿವಾಕರ ಅಗ್ನಿಹೋತ್ರಿ ಯವರಿಂದ ವೇದೋಕ್ತ ಪೌರೋಹಿತ್ಯವನ್ನು ಅಭ್ಯಸಿಸಿರುತ್ತಾರೆ.

ಸುಮಾರು 20 ವರ್ಷಗಳ ಕಾಲ, ದಿವಂಗತ ಶ್ರೀ ಮಾತ್ತಾನಂ ವಿಜಯನ್ ತಂತ್ರಿಯವರಿಂದ ಹಾಗೂ , ಅವರ ಶಿಷ್ಯ ಪರಂಪರೆಯಿಂದ ಶಾಸ್ತ್ರೀಯವಾಗಿ ತಂತ್ರೋಕ್ತ ವಿಧಿ ವಿಧಾನಗಳನ್ನು ಅಧ್ಯಯನ ಮಾಡಿರುತ್ತಾರೆ.

ಕರ್ನಾಟಕದ ನಾರಾಯಣ ಗುರು ಪರಂಪರೆಯಲ್ಲಿ ತಂತ್ರಗಮವನ್ನು ಶಾಸ್ತ್ರೋಕ್ತವಾಗಿ ಅಧ್ಯಯನ ಮಾಡಿ ತಂತ್ರ ದೀಕ್ಷೆಯನ್ನು ಪಡೆದ ಮೊದಲಿಗರಾಗಿರುತ್ತಾರೆ.

ತಮ್ಮನ್ನು ನಾರಾಯಣ ಗುರು ವೈದಿಕ ಸಮಿತಿಯು ಹೃತ್ಪೂರ್ವಕವಾಗಿ ಅಭಿನಂದಿಸುತ್ತದೆ.

ನಿಮ್ಮಿಂದ ಅನೇಕ ಧಾರ್ಮಿಕ ಕ್ಷೇತ್ರಗಳಿಗೆ ಸೇವೆ ಲಭಿಸಲಿ ಹಾಗೂ ನಮ್ಮ ಸಮಾಜದ ಯುವ ಪೀಳಿಗೆಗಳಿಗೆ ಮಾರ್ಗದರ್ಶನ ನೀಡುವಂತಹ ಶಕ್ತಿಯನ್ನು ಶ್ರೀ ನಾರಾಯಣ ಗುರುಗಳು ಮತ್ತು ಶ್ರೀ ದೇವರು ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇವೆ.

ನಾರಾಯಣ ಗುರು ವೈದಿಕ ಸಮಿತಿ(ರಿ.) ಕರ್ನಾಟಕ. ಮಂಗಳೂರು


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »