TOP STORIES:

ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್


ಸಂಗೀತ ಎಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಎಂತಹ ಕಟು ಮನಸ್ಸನ್ನು ಕೂಡ ಮಂತ್ರ ಮುಗ್ದವಾಗಿಸುವ ಶಕ್ತಿ ಇದೆ. ಹೀಗೆ ಸಂಗೀತದಲ್ಲಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಪುಟಾಣಿ ಪ್ರತಿಭೆ ತನ್ವಿ ಅಮೀನ್

ಉಡುಪಿ ಕೊಡವೂರಿನ ಗಣೇಶ ಮತ್ತು ತ್ರಿವೇಣಿ ಗಣೇಶ್ ದಂಪತಿಗಳ ಮುದ್ದಿನ ಮಗಳು ಇವರಿಗೆ  ಸಿಂಗಿಂಗ್, ಗಿಟಾರ್ ನುಡಿಸುವುದು, ಆಕ್ಟಿಂಗ್ ಹೀಗೆ ಅನೇಕ ಹವ್ಯಾಸ ಇವರಿಗೆ ಇದೆ

ಮೂಲತಃ ಉಡುಪಿಯವರಾದ ಇವರು ಪ್ರಸ್ತುತ ಬೆಹರೈನ್ ನಲ್ಲಿ ಇದ್ದು ಅಲ್ಲಿಯೂ ತನ್ನ ಪ್ರತಿಭೇನ ಬೆಳೆಸುತ್ತಿದ್ದಾರೆ.

*ಒಂದರಿಂದ ನಾಲ್ಕನೇ ತರಗತಿವರೆಗೆ ಕಟಪಾಡಿಯ ಎಸ್ ವಿ ಕೆ ಇಂಗ್ಲಿಷ್ ಮೀಡಿಯಂನಲ್ಲಿ ವಿದ್ಯಾಭ್ಯಾಸ ಮಾಡಿ ನಂತರ ತಂದೆ ತಾಯಿ ಜೊತೆ ಹೊರದೇಶ ದಲ್ಲಿ ಮುಂದಿನ ಶಿಕ್ಷಣ ಆರಂಭಿಸಿದರು ಈಗ ಎಸ್ ಎಸ್ ಎಲ್ ಸಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಸಣ್ಣ ಪ್ರಾಯದಲ್ಲಿ ಹಾಡುವುದು ರೂಡಿ ಮಾಡಿಕೊಂಡ ಇವರಿಗೆ ಸಂಗೀತ ಎಂದರೆ ಪಂಚ ಪ್ರಾಣ. ಬಹುಭಾಷೆಯ  ಗಾಯಕಿ ಹಿಂದಿ, ತುಳು, ಕನ್ನಡ, ಇಂಗ್ಲಿಷ್ ಹೀಗೆ ಎಲ್ಲಾ ಭಾಷೆಯಲ್ಲಿಯೂ ಹಾಡಿ ಸೈ ಎಣಿಸಿಕೊಂಡಿದ್ದಾರೆ.

ಹೊರದೇಶದಲ್ಲಿ ಬಿಲ್ಲವ ಸಂಘ, ಕನ್ನಡ ಸಂಘ, ಹೀಗೆಯೇ ಅನೇಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನಲ್ಲೂ ಪ್ರತಿಭೆ ಇದೆ ಎಂದು ತೋರಿಸಿದ್ದಾರೆ. ಕೇವಲ ಹಾಡುಗಾರ್ತಿ ಮಾತ್ರ ಅಲ್ಲ ಅನೇಕ ವೇದಿಕೆಯಲ್ಲಿ ಡ್ಯಾನ್ಸ್ ಪ್ರೋಗ್ರಾಮ್ ನೀಡಿದ್ದಾರೆ ಮತ್ತು ನಟನೆಯಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ ಡಿಸೆಂಬರ್ ನಲ್ಲಿ ನಡೆದ ಒಂದು ಕಾರ್ಯ ಕ್ರಮ ಒಟ್ರಾಸಿ ಮಂಡೆ ಬೆಚ್ಚ ನಾಟಕದಲ್ಲಿ ನಾಯಕಿ ಪಾತ್ರ ಮಾಡಿ ಜನ ಮನ ಗೆದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾದರು.

ಇವರ ಈ ಸಾಧನೆ ತನ್ನ ಪರಿಶ್ರಮ ಮತ್ತು ತಂದೆ ತಾಯಿಯ ಪ್ರೋತ್ಸಹದಿಂದ ಸಂಗೀತ ವಿದ್ಯಾಭ್ಯಾಸಮಾಡಿ ಫೇಸ್ಬುಕ್ ಲೈವ್ ಪ್ರೋಗ್ರಾಮ್ ನೀಡಿ ಜನರನ್ನು ರಂಜಿಸುತ್ತಿದ್ದಾರೆ. ಇವರು ಭಾಗವಹಿಸಿದ ಹೆಚ್ಚಿನ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕಾರ ದೊರಕಿದೆ. ಇವರ ತಾಯಿ ಗಾಯಕಿ, ಕವನ, ಸಾಹಿತ್ಯಗಾರ ಆಗಿರುವುದರಿಂದ ತಾಯಿಯ ಸಪೋರ್ಟ್ ಸಂಪೂರ್ಣ ಸಿಕ್ಕಿತ್ತು ತನ್ವಿ ಅಮೀನ್ ಇನ್ಸ್ಟ ಗ್ರಾಮ್, ತನ್ವಿ ಅಮೀನ್ ಫೇಸ್ಬುಕ್ ಪೇಜ್, ತನ್ವಿ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಂತಹ ಸೋಶಿಯಲ್ ಮೀಡಿಯಾದಲ್ಲಿ ತನ್ನ ಪ್ರತಿಭೇನ ತೋರಿಸುತ್ತಿದ್ದಾರೆ ಸದ್ಯಕ್ಕೆ ಇವರು ಹಾಡಿರುವ ನ್ಯಾಯದೂತೆ ಕಾರ್ಣಿಕದ ಅಜ್ಜೆ ಸಾಂಗ್ ಬಿಡುಗಡೆಯಾಗಲಿದೆ. ಗಾಂಧಿ ಜಯಂತಿ ದಿನ ಹಾಡಿದ ಸಾಂಗ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಹಿಂದಿ ಮೂವತ್ತು, ಕನ್ನಡ 15, ತುಳು 20, ಇಂಗ್ಲಿಷ್ ಸಾಂಗ್ 10, ಭಕ್ತಿಗೀತೆ 15 ಹೀಗೆ ಒಟ್ಟು ಟೋಟಲ್ 90 ಸಾಂಗ್ ಹಾಡಿರುವ ಹೆಗ್ಗಳಿಕೆ ಇವರದು.

ಇಷ್ಟು ಸಣ್ಣ ಪ್ರಾಯದಲ್ಲಿ ಇಷ್ಟೊಂದು ಸಾಧನೆ ಮಾಡಿರುವ ಇವರಿಗೆ ಮುಂದಿನ ಹಾದಿ ಸುಗಮವಾಗಲಿ ತುಳುನಾಡಿನ ಹೆಸರನ್ನು ಹೊರದೇಶದಲ್ಲಿಯೂ ಬೆಳೆಸಿದ ಇವರಿಗೆ ದೈವ ದೇವರುಗಳ ಅನುಗ್ರಹ ಸದಾ ಇರಲಿ ಎಂದು ಹಾರೈಸುವ.

ಬರಹ: ಪ್ರಶಾಂತ್ ಅಂಚನ್ ಮಸ್ಕತ್ತ್ 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »