TOP STORIES:

FOLLOW US

ಸಂಭ್ರಮ ಪುರಸ್ಕಾರ” (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆ


ಬಂಟ್ವಾಳ: ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಇನ್ನಿತರ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜಸೇವೆಗೈಯುತ್ತಿರುವ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ಸಂಭ್ರಮಾಚರಣೆಯ ಸಂದರ್ಭದಲ್ಲಿ ನೀಡುವ ಸಂಭ್ರಮಪುರಸ್ಕಾರ (ಪತ್ರಿಕೋದ್ಯಮ)ಕ್ಕೆ ಪತ್ರಕರ್ತ ವಿಷ್ಣುಗುಪ್ತ ಪುಣಚ (ರಮೇಶ್.ಕೆ ಪುಣಚ) ಆಯ್ಕೆಯಾಗಿದ್ದಾರೆ.

ವರ್ಷಂಪ್ರತಿ ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ

ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ನೀಡುತ್ತಿದೆ.

ಸಾಹಿತ್ಯ, ಬರವಣಿಗೆ ಕ್ಷೇತ್ರದಲ್ಲಿವಿಷ್ಣುಗುಪ್ತ ಪುಣಚಎಂಬ ಕಾವ್ಯನಾಮದಿಂದ ನಾಡಿನಾದ್ಯಂತ ಚಿರಪರಿಚಿತರಾಗಿರುವ ರಮೇಶ್ಕೋಡಂದೂರು ಅವರು ಬಂಟ್ವಾಳ ತಾಲೂಕಿನ ಪುಣಚ ಗ್ರಾಮದವರು.

ಪತ್ರಿಕಾ ಕ್ಷೇತ್ರದಲ್ಲಿ ಪತ್ರಕರ್ತರಾಗಿ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿದ್ದಾರೆ. ಸುದ್ದಿ ಬಿಡುಗಡೆ, ಮೈಸೂರು ಆಂದೋಲನ, ಉಷಾ ಕಿರಣ, ಪ್ರಜಾವಾಣಿ, ವಿಜಯಕರ್ನಾಟಕ, ನಮ್ಮ ಬಂಟ್ವಾಳ ಇತ್ಯಾದಿ ಪತ್ರಿಕೆಗಳಲ್ಲಿ ದುಡಿದಿದ್ದಾರೆ. ಇದಲ್ಲದೇ ರಂಗಭೂಮಿ, ಬೀದಿನಾಟಕ, ಹಲವಾರು ತುಳು ಸಾಮಾಜಿಕ ನಾಟಕಗಳಲ್ಲಿ ನಟಿಸಿದ್ದಾರೆ. ಕನ್ನಡ, ತುಳು ಭಾಷೆಗಳ ಜಿಲ್ಲಾ ಮಟ್ಟದ, ರಾಜ್ಯ ಮಟ್ಟದಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ. ರಾಜ್ಯ ಮಟ್ಟದ ಲೇಖನ, ಕಥೆ, ಕವನ, ಚುಟುಕುಇನ್ನಿತರ ಸಾಹಿತ್ಯ  ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ, ಬಹುಮಾನಗಳನ್ನು ಪಡೆದಿದ್ದಾರೆ.

ಪುಣಚ ಮಂಗಳ ಕಲಾ ಸಾಹಿತ್ಯ ವೇದಿಕೆಯ ಮೂಲಕ ಹತ್ತಾರು ರಾಜ್ಯ ಮಟ್ಟದ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನುಸಂಘಟಿಸಿದ್ದಾರೆ.

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಬಂಟ್ವಾಳ ಪ್ರೆಸ್ ಕ್ಲಬ್ ಉಪಾಧ್ಯಕ್ಷರಾಗಿ ಸಂಘವನ್ನುಮುನ್ನಡೆಸಿದ್ದಾರೆ.

ಬಂಗ್ಲೆ ಮೈದಾನದಲ್ಲಿ .24ರಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್  ತನ್ನ  38ನೇ ವಾರ್ಷಿಕ ಸಂಭ್ರಮ ಆಚರಣೆಯಲ್ಲಿ ಪುರಸ್ಕಾರ ಪ್ರದಾನನಡೆಯಲಿದೆ. ಇದೇ ಸಂದರ್ಭದಲ್ಲಿ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭವೂ ನಡೆಯಲಿದೆ.


Share:

More Posts

Category

Send Us A Message

Related Posts

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »