TOP STORIES:

”ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಸಂದೇಶ”, ಮಮತೆಯ ಮಾತೃ ಹೃದಯ…ಇಲ್ಲಿದೆ ಸ್ವಲ್ಪ ವಿವರಣೆ


ವಾಟ್ಸ್ ಪ್ ಕೃಪೆ

ಮೊಬೈಲ್ ನಲ್ಲಿ ಬಂದದ್ದನ್ನೆಲ್ಲಾ ಇನ್ನೊಬ್ಬರಿಗೆ ಹಂಚುವ ಮೊದಲು ನೂರು ಸಲ ಆಲೋಚಿಸ ಬೇಕಾದೀತೇ?
ಸಜ್ಜಿಗೆ ಬಣಲೆಡ್ ಉಂಡು ವೈರಲ್ ಆದ ಶಬ್ದ ಸಂದೇಶದ ಒಂದು ವಿಮರ್ಶೆ ಹೀಗಿದೆ.

ನಿಮ್ಮ ಕಣ್ಣಿನ ನೇರಕ್ಕೆ ಕಂಡದನ್ನು ಮಾತ್ರ ಸಮರ್ಥನೆ ಮಾಡುವುದು ಒಳಿತಲ್ಲ ಎಂಬುವುದು ನನ್ನ ಅಭಿಪ್ರಾಯ.
ಹೀಗಿದೆ ಆ ಬರಹ

ವೈರಲ್ ಆದ ಆಡಿಯೋದಲ್ಲಿ… ಮಗ ಕರೆ ಮಾಡಿ ಏನು ಹೇಳುತ್ತಿದ್ದಾನೆ ಎಂದು ಸರಿಯಾಗಿ ಕೇಳದಿದ್ದರು ಇನ್ನೊಂದು ಕಡೆಯಿಂದ ಮಮತೆಯ ಮಾತೃ ಹೃದಯ ತನ್ನ ಮಗು ಹಸಿವಿಗಾಗಿಯೇ ಕರೆ ಮಾಡಿರಬಹುದೇನೋ ಎಂದು ಊಹಿಸಿ ಬಾಣಲೆಯಲ್ಲಿ ಸಜ್ಜಿಗೆ ಇದೆ ತಿನ್ನು ಮಗನೇ ಎನ್ನುವ ಆಡಿಯೋ ಟ್ರೋಲ್ ಆಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ನನ್ನ ಸ್ವಲ್ಪ ವಿವರಣೆ .

ಆ ಘಟನೆಯ ತಾಯಿಯನ್ನು ಹತ್ತಿರದಿಂದ ನೋಡಿದವನು ನಾನು…. ತನ್ನ ಗಂಡ ಅನಾರೋಗ್ಯದಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸ್ವ-ಸಹಾಯ ಸಂಘದಿಂದ, ಪರಿಚಯಸ್ತರಿಂದ ಸಾಲ ಮಾಡಿ ಬದುಕಿಸಲು ಕೈ ಮೀರಿ ಪ್ರಯತ್ನ ಮಾಡಿದರೂ ಉಳಿಸಲು ಅಸಾಧ್ಯವಾಗಿ, ಮನೆಯ ಆಧಾರ ಸ್ತಂಭ ಕುಸಿದಾಗ ನನ್ನ ಮಕ್ಕಳ ಬೇಕು ಬೇಡಗಳನ್ನು ಪೂರೈಸಿ, ಎಲ್ಲರಂತೆ ತನ್ನ ಮಕ್ಕಳನ್ನು ವಿದ್ಯಾಭ್ಯಾಸ ಮಾಡಿಸುವ ಕನಸು ಕಾಣುವ ತಾಯಿ ಆಕೆ.

ಪತಿಯ ಅನಾರೋಗ್ಯದ ಸಂದರ್ಭದಲ್ಲಿ ಮಾಡಿದ ಸಾಲವನ್ನು ತೀರಿಸಲು ರಾತ್ರಿ ಹಗಲು ಬೀಡಿ ಕಟ್ಟಿ ತನ್ನ ಇಬ್ಬರು ಸಣ್ಣ ಮಕ್ಕಳನ್ನು ಸಾಕುವ ಕಷ್ಟದ ಜೀವನ ನಡೆಸುತ್ತಿದ್ದಾರೆ.

ಇನ್ನೊಂದು ಕಡೆ ಕೋರೊನ, ಈ ಕೋರೊನದಿಂದಾಗಿ ಸ್ವಲ್ಪ ದಿನ ಬೀಡಿ ಉದ್ಯಮವು ನಿಂತಿತು., ಬೀಡಿಯ ಆದಾಯವು ನಿಂತಿತು.

ಮಕ್ಕಳಿಗೆ ಮೊಬೈಲ್ ನೀಡಬಾರದು ನಿಜ ಅದು ತಿಳಿದೂ ಆಕೆ ತನ್ನ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗ ಬಾರದೆಂದು, ಮೊಬೈಲ್ ಬಳಕೆಯ ಮಾಹಿತಿ ಗೊತ್ತಿಲ್ಲದ ಆಕೆ ಮಗನಿಗೆ online class ಗಾಗಿ ಸಣ್ಣ Touch ಮೊಬೈಲ್ ನೀಡಿದಳು… ಆತ ಮೊಬೈಲ್ ಸಿಕ್ಕ ಖುಷಿಯಲ್ಲಿ online class ಹಾಗೂ ಗೇಮ್ ಆಡುತ್ತಿದ್ದ.. ಮತ್ತೊಂದು ವಿಷಯ ಏನೆಂದರೆ ಆ ಮೊಬೈಲ್ ನಲ್ಲಿ ಎಲ್ಲ ಕರೆಗಳು Record ಆಗುತಿತ್ತು ಅದು ಕೂಡ ಈ ಘಟನೆಯ ನಂತರವೇ ತಿಳಿದದ್ದು.

ಆ ತಾಯಿಯ ಮಗನೂ ಸಹ ಮೊಬೈಲ್ ಬಳಕೆಯ ಪೂರ್ಣ ಪ್ರಮಾಣದ ಮಾಹಿತಿ ಇಲ್ಲದವ.. ಜೋಕುಲಾಟಿಕೆ ಎಂಬಂತೆ ಮೊಬೈಲ್ ನಲ್ಲಿದ್ದ ಪದ್ಯ ಹಾಗೂ call record ನ್ನೂ ಸಹ ತನ್ನ whatsappನಲ್ಲಿ ಗೆಳೆಯರಿಗೆ ಕಳುಹಿಸಿದ್ದಾನೆ.. ಆದು ಒಬ್ಬರಿಂದ ಒಬ್ಬರಿಗೆ forward ಆಗುತ್ತಲೇ ಹೋಯಿತು.

ಆ ತಾಯಿಯ ಸ್ವರ ಬಲ್ಲವರು ಆಕೆಯನ್ನು ಕರೆ ಮಾಡಿ ವಿಚಾರಿಸುತ್ತಿರುವಾಗ ಆಕೆ “ಕೊರೊನಾ ಸುರುವಾದ್ ಮಗಕ್ ಸಾಲೆ ಸುರುವಾವಂದೆ, ಮೊಬೈಲ್ ಡ್ ಪಾಠ ಮಲ್ಪುವೆರ್ ಗೆ, ಮೊಬೈಲ್ ಕೊರ್ದು ಈತ್ ಮಾತ ಮಲ್ತ್ ಪಾಡಿಯೆ.. ನನ ಪೋನು ಮುಟ್ಪರೆ ಬುಡ್ಪುಜಿ…” ಎಂದು ತುಂಬಾ ನೊಂದುಕೊಳ್ಳುತ್ತಿದ್ದಾಳೆ.

ಇಲ್ಲಿ ತಪ್ಪು ಯಾರದು..?ಕೊರೊನದ್ದಾ? ಮಕ್ಕಳಿಗೆ online class ಪ್ರಾರಂಭ ಮಾಡಿದ ಸರಕ್ಕಾರದ್ದೋ? ಮಗನಿಗೆ ವಿದ್ಯಾಭ್ಯಾಸಕ್ಕೆ ತೊಂದರೆ ಆಗ ಬಾರದೆಂದು ಮೊಬೈಲ್ ಕೊಟ್ಟ ತಾಯಿಯದ್ದೋ? auto call record ಆಗುತ್ತಿದ್ದ ಮೊಬೈಲಿದ್ದೋ? ಮೊಬೈಲ್ ಬಳಕೆ ಸರಿಯಾಗಿ ಗೊತ್ತಿಲ್ಲದೆ ಎಲ್ಲವನ್ನೂ ಕಳುಹಿಸಿದ ಮಗನದ್ದೊ? ಸ್ವೀಕರಿಸಿದವರು ಕೇಳಿ ಆನಂದಿಸಿ ಎಲ್ಲರೂ ಖುಷಿ ಪಡೆಯಲಿ ಎಂದು ಒಬ್ಬರಿಂದ ಒಬ್ಬರಿಗೆ forward ಈಗಲೂ ಮಾಡುತ್ತಿರುವವರದ್ದೊ? ಎಂಬುವುದನ್ನು ನೀವು ನಿರ್ಧರಿಸಿ.


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »