TOP STORIES:

ಸಣ್ಣ ಮಗುವಿಗೆ ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!


ತಾಯ ಹಾಲಿಗಿಂತಲೂ ‘ಇಪ್ಪೆ’ ಹಣ್ಣಿನ ರಸವೇ ಶ್ರೇಷ್ಠ!

ನೀವಿದನ್ನು ನಂಬಲೇಬೇಕು! HONEY TREE ಎಂದು ಇಂಗ್ಲೀಷ್ ನಲ್ಲಿ ಕರೆಯಲ್ಪಡುವ ಮಾದಕ ಅಂಶಗಳುಳ್ಳ, ಆದಿವಾಸಿಗಳು ಪೂಜಿಸುವ ಒಂದು ಪವಿತ್ರ ಮರ. BUTTER TREE ಎಂದೂ ಕರೆಯುತ್ತಾರೆ. ಕನ್ನಡದಲ್ಲಿ ಇಪ್ಪೆ ಮರ ಎಂದು, ತಮಿಳಿನಲ್ಲಿ ಇಲ್ಲಿಪ್ಪೆ, ತೆಲುಗಿನಲ್ಲಿ ಇಪ್ಪಿ ಎಂದು, ಹಿಂದಿಯಲ್ಲಿ ಮೊಹ್ವ, ಸಂಸ್ಕ್ರತದಲ್ಲಿ ಮಧೂಕ, ಮಂಗಳೂರು ಮತ್ತು ಉಡುಪಿ ಆಸುಪಾಸಿನಲ್ಲಿ ‘ನಾನಿಲ್ ಮರ’ ಎಂದೂ ಕರೆಯುತ್ತಾರೆ. ಮೋಹ, ಮಹಲ, ಇಲುಪ, ಪೂನಮ, ಮಹುವಾ ಎಂದೂ ನಾನಾ ಭಾಷೆಗಳಲ್ಲಿ ಕರೆಯುವುದುಂಟು. ಇದರ ವೈಜ್ಙಾನಿಕ ಹೆಸರು ‘ಬ್ಯಾಸ್ಸಿಯ ಲ್ಯಾಟಿಫೂಲಿಯಾ’. ಇದು ‘ಸಪೋಟೇಸಿ’ ಕುಟುಂಬ ವರ್ಗಕ್ಕೆ ಸೇರಿದೆ.

ಇದು ಎಲೆ ಉದುರುವ ಮರದ ಜಾತಿಗೆ ಸೇರಿದೆ. ಸುಮಾರು 12 ರಿಂದ 20 ಮೀ ಎತ್ತರ ಬೆಳೆಯುವ ಇಪ್ಪೆ ಮರ, ಒಣ ಹವೆ ಮತ್ತು ತೇವ ಹವೆಯ ಕಾಡುಗಳಲ್ಲಿ ಬಿಡಿ ಬಿಡಿಯಾಗಿ ಬೆಳೆಯುತ್ತದೆ. ಕರ್ನಾಟಕದಲ್ಲಿ ಪಶ್ಚಮ ಘಟ್ಟದ ಕಾಡು ಹೊಳೆಯ ಸಮೀಪದಲ್ಲಿ ಹೆಚ್ಚಾಗಿ ಬೆಳೆಯುತ್ತದೆ. ತೊಗಟೆ ತಿಳಿ ಕಪ್ಪು ಅಥವಾ ಬೂದು ಬಣ್ಣದಿಂದ ಕೂಡಿದ್ದು, ಗೆಲ್ಲುಗಳು ಚದುರಿ ಚದುರಿದಂತೆ ಇದ್ದು ನೋಡಲು ತುಂಬಾ ಆಕರ್ಷಕವಾಗಿರುತ್ತದೆ.

ಚಳಿಗಾಲ ಬಂತೆಂದರೆ ಈ ಮರ ವಿಶಿಷ್ಟವಾದ ಕಟು ಮಧುರ ಹೂವಿನ ಪರಿಮಳವನ್ನು ಸೂಸುತ್ತದೆ. ನೇರವಾದ ಕಾಂಡದ ಮೇಲೆ ಕೊಂಬೆಗಳು ಮತ್ತು ತುದಿ ಚೂಪಾಗಿರುವ ಎಲೆಗಳು – ಛತ್ರಿಗಳು ಬಿಡಿಸಿಟ್ಟಂತೆ ಹರಡಿಕೊಂಡಿರುತ್ತದೆ. ವರ್ಷಕ್ಕೊಮ್ಮೆ ಎಲೆ ಉದಿರುವ ಈ ಮರ, ಹೊಸ ಚಿಗುರು ಬಂದಾಗ ತಾಮ್ರಗೆಂಪು ಬಣ್ಣದಿಂದ ನಳನಳಿಸುತ್ತದೆ.  ಈ ಸಮಯದಲ್ಲಿ ಬಸ್ತಾರ್ ನ ಆದಿವಾಸಿಗಳು ಮತ್ತು ಮಧ್ಯಪ್ರದೇಶದ ಗೊಂಡ ಆದಿಮಾಸಿಗಳು ಆ ಮರವನ್ನು ಪೂಜಿಸುತ್ತಾರೆ.

ಹೊಸ ಚಿಗುರು ಮಾಗಿ ಎಲೆ ದಪ್ಪಗಾದ ಕೂಡಲೇ ಮರ ಹೂ ಬಿಡಲು ಆರಂಭಿಸುತ್ತದೆ. ಈ ಹೂಗಳು ಮಾಸಲು ಬಣ್ಣವನ್ನು ಹೊಂದಿದ್ದು, ಕೊಂಬೆಯ ತುದಿಯಲ್ಲಿ ಜೋತು ಬಿದ್ದಿರುತ್ತದೆ. ಈ ಹೂವಿನ ಪುಷ್ಪಪಾತ್ರೆಯ ಭಾಗ ಹಣ್ಣಾಗಿ ತಿನ್ನಲು ರುಚಿಯಾಗಿರುತ್ತದೆ. ಹಕ್ಕಿಗಳು ಮತ್ತು ಕಾಡು ಪ್ರಾಣಿಗಳಿಗೂ ಈ ಹಣ್ಣು ಬಹಳ ಪ್ರಿಯ. ಇಪ್ಪೆ ಹಣ್ಣಿನಿಂದ ಆದಿವಾಸಿಗಳು ಹೆಂಡವನ್ನು ತಯಾರಿಸುತ್ತಾರೆ. ಇದರ ಬೀಜದಿಂದ ಎಣ್ಣೆ ತೆಗೆದು ಅಡುಗೆಗೆ ಉಪಯೋಗಿಸುತ್ತಾರೆ.  ಕಾಡಿನಲ್ಲಿ ಆಹಾರಕ್ಷಾಮ ಉಂಟಾದಾಗ ಆದಿವಾಸಿಗಳಿಗೆ ಈ ಮರದ ಹೂವು ಹಣ್ಣುಗಳೇ ಆಹಾರ. ಗೊಂಡ ಆದಿವಾಸಿಗಳಲ್ಲಿ ಚಳಿಗಾಲದಲ್ಲಿ ಮಗು ಜನಿಸಿದರೆ, ತಾಯ ಹಾಲಿಗೂ ಮೊದಲು ಇಪ್ಪೆ ಹಣ್ಣಿನ ರಸವನ್ನು ನೆಕ್ಕಿಸುತ್ತಾರೆ. ಯಾಕೆಂದರೆ ಅದು ಆದಿವಾಸಿಗಳ ಪಾಲಿನ ಪವಿತ್ರ ಮತ್ತು ಆರಾಧನೀಯ ಮರ.

(ಸಂಗ್ರಹ)

PC: Dinesh bangera irvattur


Related Posts

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »