TOP STORIES:

ಸಮಾಜದ ಸಮಸ್ಯೆಗಳ ಧ್ವನಿಯಾಗುವ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ACP


ನೊಂದವರ ಕಣ್ಣೀರು ಒರೆಸಿ, ಸ್ನೇಹಭಾವದ ಬೀಜವನ್ನು ಬಿತ್ತಿ, ಹಿಂಸಾಚಾರ ತಡೆಯುವಲ್ಲಿ ರಕ್ಷಾಕವಚವಾಗಿ, ನ್ಯಾಯ ನೀತಿ ಧರ್ಮವನ್ನು ಪೋಷಿಸಿ, ಅನ್ಯಾಯವನ್ನು ಮೆಟ್ಟಿ, ಸಮಸ್ಯೆಗಳನ್ನು ಸಹನೆ ತಾಳ್ಮೆಯಿಂದ ಸ್ವೀಕರಿಸಿ ಜನರ ಸೇವೆಗೈವ ನಿಷ್ಠಾವಂತ ಪೊಲೀಸ್ ಅಧಿಕಾರಿಣಿ ಯೇ ನಮ್ಮ “ಶ್ರೀಮತಿ ರೀನಾ ಸುವರ್ಣ. ಎನ್. ”

ವಿಶ್ವ ಕಂಡ ಮಹಾನ್ ಸಾಹಿತಿ ಲಿಯೋ ಟಾಲಸ್ಟಾಯ್ ಹೇಳುತ್ತಾರೆ. “ಜೀವನದಲ್ಲಿ ಅತ್ಯಂತ ಶ್ರೇಯಸ್ಕರವಾದುದು ಎಂದರೆ ಮನುಕುಲದ ಒಳಿತಿಗಾಗಿ ಶ್ರಮಿಸುವುದು. “ಎಂದು. ಜನರ ಸೇವೆಯ ಜೊತೆಗೆ ಸಮಾಜದ ಕೆಲವು ಸಮಸ್ಯೆಗಳಿಗೆ ಧ್ವನಿಯಾಗಿ ಪರಿಹರಿಸಲು “ಅಧಿಕಾರ ” ಮತ್ತು “ಜವಾಬ್ದಾರಿ ” ಇರಲೇಬೇಕು. ಎಂಬ ನಿಲುವಲ್ಲಿ ಇವರು ಪೊಲೀಸ್ ಅಧಿಕಾರಿಯಾಗಿದ್ದು ಹೆಮ್ಮೆಯ ವಿಚಾರ.

ಶ್ರೀಮತಿ. ರೀನಾ ಸುವರ್ಣ.ಎನ್. ಡಿವೈ ಎಸ್ ಪಿ, ಸಿಐಡಿ ಬೆಂಗಳೂರು, ಕರ್ನಾಟಕ ರಾಜ್ಯ ಪೊಲೀಸ್ ಸೇವೆ. ಇವರು ವಿದ್ಯಾರ್ಥಿ ಜೀವನದಲ್ಲಿಯೇ ಪ್ರತಿಭಾನ್ವಿತೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಮ್. ಎ. ಪದವಿಯಲ್ಲಿ, “ಚಿನ್ನದ ಪದಕ” ಗಳಿಸಿದ ಇವರು, ಮೌಂಟ್ ಕಾರ್ಮೆಟ್ ಕಾಲೇಜಿನಲ್ಲಿ ಬಿ.ಎ ಯಲ್ಲಿ “ಕಾಲೇಜಿನ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿನಿ “ಎಂಬ ಪ್ರಶಸ್ತಿಗೆ ಭಾಜನರು.

ಬಾಲ್ಯದಿಂದಲೂ ಪುಸ್ತಕಗಳಲ್ಲಿದ್ದ ಅಪಾರ ಪ್ರೇಮ, ಓದುವ ಛಲವೇ ಇವರನ್ನು ಇಂದು ಅತ್ಯಂತ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದು ಎಂದರೆ ತಪ್ಪಲ್ಲ..

“ಹಗಲೆನ್ನದೆ ಇರುಳೆನ್ನದೆ, ಉಪಚಾರಗಳ ಹಂಗಿಲ್ಲದೆ ಜನರಿಗಾಗಿ ದುಡಿವ ಮಹಿಳಾ ಪೊಲೀಸ್ ಅಧಿಕಾರಿ ಎಲ್ಲರಿಗೂ ಸ್ಪೂರ್ತಿಯ ಸೆಲೆ. “ಇವರ ಕಾರ್ಯವೈಖರಿ ಅದ್ಭುತವೇ ಸರಿ.

2014 ರಲ್ಲಿ ಡಿವೈಎಸ್ಸ್ಪಿ ಯಾಗಿ ಕರ್ತವ್ಯಕ್ಕೆ ಸೇರಿದ ಇವರು ” ಬೆಂಗಳೂರು ಗ್ರಾಮೀಣ ಪ್ರೊಬೆಷನರಿ ಐಜಿ ದಕ್ಷಿಣ ಶ್ರೇಣಿ “ಯಿಂದ ಮೂರು ಮೆಚ್ಚುಗೆ ಪತ್ರಗಳನ್ನು ಗಳಿಸಿರುತ್ತಾರೆ.

ಹೊಸಕೋಟೆ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡ ಸಮಯದಲ್ಲಿ ಕೇವಲ ಎರಡೇ ತಿಂಗಳಲ್ಲಿ 11 ಕಾಣೆಯಾದ ಪ್ರಕರಣಗಳನ್ನು ಪತ್ತೆ ಮಾಡಿರುತ್ತಾರೆ. ಅನೇಕಲ್ ಅಟ್ಟಿಬೆಲೆಯಲ್ಲಿ 280 ಕಿ.ಗ್ರಾ ಗಾಂಜಾವನ್ನು ವಶಪಡಿಸಿಕೊಂಡಿದ್ದೂ ನಮ್ಮ ಮಹಿಳಾ ಸಾಧಕಿ “ಶ್ರೀಮತಿ.ರೀನಾ ಸುವರ್ಣ” ರವರೆ. ತಾನು ಉರಿದು ಸೇವೆಯೇ ಸರ್ವಸ್ವವೆಂದು ಕರ್ತವ್ಯ ನಿರ್ವಹಿಸುವ ಇವರು ಸಮಾಜಘಾತುಕ ಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಬಹಳ ಶ್ರಮ ಪಟ್ಟಿರುತ್ತಾರೆ..

ಜಿಗಾನಿಯಲ್ಲಿ ಅರ್ಧ ದಿನದಲ್ಲಿ ಗುರುತಿಸಲೂ ಆಗದ ಮೃತದೇಹವನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಅಂದಿನ ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ಯವರಿಂದ ಮೆಚ್ಚುಗೆ ಪಡೆದವರು ನಮ್ಮ ಶ್ರೀಮತಿ. ರೀನಾ ಸುವರ್ಣ ರವರು.

ಇದಲ್ಲದೆ ಹೊಸ್ಕೊಟ್ ನಲ್ಲಿ 6 ಗಂಟೆಯ ಒಳಗೆ “ಪೊಕ್ಸೋ ” ಪ್ರಕರಣವನ್ನು ಪತ್ತೆಹಚ್ಚಿದ ಅದ್ಭುತ ಪತ್ತೇದಾರಿ ಪೊಲೀಸ್ ಇವರು.
“ಆರಕ್ಷಕರಿಲ್ಲದ ಸಮಾಜವನ್ನು ಊಹಿಸಲು ಸಾಧ್ಯವೇ ಹೇಳಿ???. ಸೇವೆಯುದ್ದಕ್ಕೂ ಸವಾಲುಗಳೇ, ಸಾವಿನಂಚಿಗೂ ತಲುಪುವ ಕ್ಲಿಷ್ಟ ಕಠಿಣ ಪ್ರಕರಣಗಳೇ, ದುರ್ವಿಧಿಯ ಸನ್ನಿವೇಶಗಳೇ.. ”

ಹೆಣ್ಣು ಬಲಹೀನ, ದುರ್ಬಲಳು, ಅವಲಂಬಕಿ ಎನ್ನುವ ಈ ಸಮಾಜಕ್ಕೆ ತಕ್ಕ ಪ್ರತಿ ಉತ್ತರವೇ ಡಿವೈ ಎಸ್ ಪಿ,ಶ್ರೀಮತಿ ರೀನಾ ಸುವರ್ಣ, ಎನ್.

ನಗರಸಭೆಯ ಬೆಂಬಲದೊಂದಿಗೆ ಹೊಸ್ಕೊಟ್ ನ ಪ್ರಮುಖ ಜಂಕ್ಷನ್ ಗಳಲ್ಲಿ ಸಿ.ಸಿ. ಟಿ. ವಿ. ಯನ್ನು ಅಳವಡಿಸಿ ಅನ್ಯಾಯಕ್ಕೆ ಪ್ರತಿಧ್ವನಿಯಾದವರು ಇವರು. ಅದಷ್ಟೇ ಅಲ್ಲದೇ, ಡ್ರಗ್ಸ್ ಮಾಫಿಯಾ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮತ್ತು ಮಾನವ ಕಳ್ಳ ಸಾಗಣೆ ವಿರುದ್ಧ ಛಲಬಿಡದೆ ಹೋರಾಡುವ ಧೀಮಂತ ಪೊಲೀಸ್ ನಮ್ಮ ರೀನಾ ಸುವರ್ಣ.

ಒತ್ತಡಗಳನ್ನು, ಸವಾಲುಗಳನ್ನು ತನಗಿರುವ ಅವಕಾಶಗಳೆಂದು ಸ್ವೀಕರಿಸಿ ದುಡಿಯುವ ಇವರು ಪ್ರಸ್ತುತ ಎಸಿಪಿ ಯಾಗಿ ಜೆಸಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

“ಆಡಿಕೊಳ್ಳುವವರ ಮುಂದೆ ಜಾರಿ ಬೀಳದೆ ತಲೆಯೆತ್ತಿ ನಡೆದು ಕೆಚ್ಚೆದೆಯಿಂದ ನಡೆಯುತ, ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಿ ಬದುಕಿಗೊಂದು ಸಾರ್ಥಕತೆ ಒದಗಿಸಿಕೊಡಬೇಕು. ಆಗಲೇ ಬದುಕಿಗೊಂದು ಬೆಲೆಯೂ, ನೆಲೆಯೂ… ”

“ಪೊಲೀಸ್ ಸ್ವಸ್ಥ ಸಮಾಜದ ಭದ್ರತೆ ವಹಿಸಿ ಹಗಲಲ್ಲಿ ಸೂರ್ಯನಂತೆ, ರಾತ್ರಿ ಚಂದ್ರನಂತೆ ಸಮಾಜಕ್ಕಾಗಿ ದುಡಿಯುವ ಏಕೈಕ ಸರ್ಕಾರಿ ನೌಕರ.. ”
.
ಎಲ್ಲಾ ನಿಷ್ಠಾವಂತ ಪೊಲೀಸ್ ರಿಗೆ, ಮುಂದೆ “ಪೊಲೀಸ್ ಅಧಿಕಾರಿಣಿ ” ಯಾಗುವ ಛಲತೊಟ್ಟ ಹುಡುಗಿಯಿಂದ ಈ ಬರಹ ಅರ್ಪಣೆ..

Credits: ಚೈತ್ರ ಕಬ್ಬಿನಾಲೆ

Email us: billavaswarriors@gmail.com

www.billavaswarriors.com


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »