TOP STORIES:

FOLLOW US

ಸಮಾಜದ ಸಮಸ್ಯೆಗಳ ಧ್ವನಿಯಾಗುವ ಪೊಲೀಸ್ ಅಧಿಕಾರಿ ಶ್ರೀಮತಿ ರೀನಾ ಸುವರ್ಣ ACP


ನೊಂದವರ ಕಣ್ಣೀರು ಒರೆಸಿ, ಸ್ನೇಹಭಾವದ ಬೀಜವನ್ನು ಬಿತ್ತಿ, ಹಿಂಸಾಚಾರ ತಡೆಯುವಲ್ಲಿ ರಕ್ಷಾಕವಚವಾಗಿ, ನ್ಯಾಯ ನೀತಿ ಧರ್ಮವನ್ನು ಪೋಷಿಸಿ, ಅನ್ಯಾಯವನ್ನು ಮೆಟ್ಟಿ, ಸಮಸ್ಯೆಗಳನ್ನು ಸಹನೆ ತಾಳ್ಮೆಯಿಂದ ಸ್ವೀಕರಿಸಿ ಜನರ ಸೇವೆಗೈವ ನಿಷ್ಠಾವಂತ ಪೊಲೀಸ್ ಅಧಿಕಾರಿಣಿ ಯೇ ನಮ್ಮ “ಶ್ರೀಮತಿ ರೀನಾ ಸುವರ್ಣ. ಎನ್. ”

ವಿಶ್ವ ಕಂಡ ಮಹಾನ್ ಸಾಹಿತಿ ಲಿಯೋ ಟಾಲಸ್ಟಾಯ್ ಹೇಳುತ್ತಾರೆ. “ಜೀವನದಲ್ಲಿ ಅತ್ಯಂತ ಶ್ರೇಯಸ್ಕರವಾದುದು ಎಂದರೆ ಮನುಕುಲದ ಒಳಿತಿಗಾಗಿ ಶ್ರಮಿಸುವುದು. “ಎಂದು. ಜನರ ಸೇವೆಯ ಜೊತೆಗೆ ಸಮಾಜದ ಕೆಲವು ಸಮಸ್ಯೆಗಳಿಗೆ ಧ್ವನಿಯಾಗಿ ಪರಿಹರಿಸಲು “ಅಧಿಕಾರ ” ಮತ್ತು “ಜವಾಬ್ದಾರಿ ” ಇರಲೇಬೇಕು. ಎಂಬ ನಿಲುವಲ್ಲಿ ಇವರು ಪೊಲೀಸ್ ಅಧಿಕಾರಿಯಾಗಿದ್ದು ಹೆಮ್ಮೆಯ ವಿಚಾರ.

ಶ್ರೀಮತಿ. ರೀನಾ ಸುವರ್ಣ.ಎನ್. ಡಿವೈ ಎಸ್ ಪಿ, ಸಿಐಡಿ ಬೆಂಗಳೂರು, ಕರ್ನಾಟಕ ರಾಜ್ಯ ಪೊಲೀಸ್ ಸೇವೆ. ಇವರು ವಿದ್ಯಾರ್ಥಿ ಜೀವನದಲ್ಲಿಯೇ ಪ್ರತಿಭಾನ್ವಿತೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಷಯದಲ್ಲಿ ಎಮ್. ಎ. ಪದವಿಯಲ್ಲಿ, “ಚಿನ್ನದ ಪದಕ” ಗಳಿಸಿದ ಇವರು, ಮೌಂಟ್ ಕಾರ್ಮೆಟ್ ಕಾಲೇಜಿನಲ್ಲಿ ಬಿ.ಎ ಯಲ್ಲಿ “ಕಾಲೇಜಿನ ಅತ್ಯುತ್ತಮ ಹೊರಹೋಗುವ ವಿದ್ಯಾರ್ಥಿನಿ “ಎಂಬ ಪ್ರಶಸ್ತಿಗೆ ಭಾಜನರು.

ಬಾಲ್ಯದಿಂದಲೂ ಪುಸ್ತಕಗಳಲ್ಲಿದ್ದ ಅಪಾರ ಪ್ರೇಮ, ಓದುವ ಛಲವೇ ಇವರನ್ನು ಇಂದು ಅತ್ಯಂತ ಶ್ರೇಷ್ಠ ಸಾಧಕರ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದು ಎಂದರೆ ತಪ್ಪಲ್ಲ..

“ಹಗಲೆನ್ನದೆ ಇರುಳೆನ್ನದೆ, ಉಪಚಾರಗಳ ಹಂಗಿಲ್ಲದೆ ಜನರಿಗಾಗಿ ದುಡಿವ ಮಹಿಳಾ ಪೊಲೀಸ್ ಅಧಿಕಾರಿ ಎಲ್ಲರಿಗೂ ಸ್ಪೂರ್ತಿಯ ಸೆಲೆ. “ಇವರ ಕಾರ್ಯವೈಖರಿ ಅದ್ಭುತವೇ ಸರಿ.

2014 ರಲ್ಲಿ ಡಿವೈಎಸ್ಸ್ಪಿ ಯಾಗಿ ಕರ್ತವ್ಯಕ್ಕೆ ಸೇರಿದ ಇವರು ” ಬೆಂಗಳೂರು ಗ್ರಾಮೀಣ ಪ್ರೊಬೆಷನರಿ ಐಜಿ ದಕ್ಷಿಣ ಶ್ರೇಣಿ “ಯಿಂದ ಮೂರು ಮೆಚ್ಚುಗೆ ಪತ್ರಗಳನ್ನು ಗಳಿಸಿರುತ್ತಾರೆ.

ಹೊಸಕೋಟೆ ಪೊಲೀಸ್ ಠಾಣೆಯ ಉಸ್ತುವಾರಿ ವಹಿಸಿಕೊಂಡ ಸಮಯದಲ್ಲಿ ಕೇವಲ ಎರಡೇ ತಿಂಗಳಲ್ಲಿ 11 ಕಾಣೆಯಾದ ಪ್ರಕರಣಗಳನ್ನು ಪತ್ತೆ ಮಾಡಿರುತ್ತಾರೆ. ಅನೇಕಲ್ ಅಟ್ಟಿಬೆಲೆಯಲ್ಲಿ 280 ಕಿ.ಗ್ರಾ ಗಾಂಜಾವನ್ನು ವಶಪಡಿಸಿಕೊಂಡಿದ್ದೂ ನಮ್ಮ ಮಹಿಳಾ ಸಾಧಕಿ “ಶ್ರೀಮತಿ.ರೀನಾ ಸುವರ್ಣ” ರವರೆ. ತಾನು ಉರಿದು ಸೇವೆಯೇ ಸರ್ವಸ್ವವೆಂದು ಕರ್ತವ್ಯ ನಿರ್ವಹಿಸುವ ಇವರು ಸಮಾಜಘಾತುಕ ಶಕ್ತಿಗಳನ್ನು ಹಿಮ್ಮೆಟ್ಟಿಸುವಲ್ಲಿ ಬಹಳ ಶ್ರಮ ಪಟ್ಟಿರುತ್ತಾರೆ..

ಜಿಗಾನಿಯಲ್ಲಿ ಅರ್ಧ ದಿನದಲ್ಲಿ ಗುರುತಿಸಲೂ ಆಗದ ಮೃತದೇಹವನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಅಂದಿನ ಉಡುಪಿ ಎಸ್.ಪಿ ಲಕ್ಷ್ಮಣ ನಿಂಬರ್ಗಿ ಯವರಿಂದ ಮೆಚ್ಚುಗೆ ಪಡೆದವರು ನಮ್ಮ ಶ್ರೀಮತಿ. ರೀನಾ ಸುವರ್ಣ ರವರು.

ಇದಲ್ಲದೆ ಹೊಸ್ಕೊಟ್ ನಲ್ಲಿ 6 ಗಂಟೆಯ ಒಳಗೆ “ಪೊಕ್ಸೋ ” ಪ್ರಕರಣವನ್ನು ಪತ್ತೆಹಚ್ಚಿದ ಅದ್ಭುತ ಪತ್ತೇದಾರಿ ಪೊಲೀಸ್ ಇವರು.
“ಆರಕ್ಷಕರಿಲ್ಲದ ಸಮಾಜವನ್ನು ಊಹಿಸಲು ಸಾಧ್ಯವೇ ಹೇಳಿ???. ಸೇವೆಯುದ್ದಕ್ಕೂ ಸವಾಲುಗಳೇ, ಸಾವಿನಂಚಿಗೂ ತಲುಪುವ ಕ್ಲಿಷ್ಟ ಕಠಿಣ ಪ್ರಕರಣಗಳೇ, ದುರ್ವಿಧಿಯ ಸನ್ನಿವೇಶಗಳೇ.. ”

ಹೆಣ್ಣು ಬಲಹೀನ, ದುರ್ಬಲಳು, ಅವಲಂಬಕಿ ಎನ್ನುವ ಈ ಸಮಾಜಕ್ಕೆ ತಕ್ಕ ಪ್ರತಿ ಉತ್ತರವೇ ಡಿವೈ ಎಸ್ ಪಿ,ಶ್ರೀಮತಿ ರೀನಾ ಸುವರ್ಣ, ಎನ್.

ನಗರಸಭೆಯ ಬೆಂಬಲದೊಂದಿಗೆ ಹೊಸ್ಕೊಟ್ ನ ಪ್ರಮುಖ ಜಂಕ್ಷನ್ ಗಳಲ್ಲಿ ಸಿ.ಸಿ. ಟಿ. ವಿ. ಯನ್ನು ಅಳವಡಿಸಿ ಅನ್ಯಾಯಕ್ಕೆ ಪ್ರತಿಧ್ವನಿಯಾದವರು ಇವರು. ಅದಷ್ಟೇ ಅಲ್ಲದೇ, ಡ್ರಗ್ಸ್ ಮಾಫಿಯಾ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಮತ್ತು ಮಾನವ ಕಳ್ಳ ಸಾಗಣೆ ವಿರುದ್ಧ ಛಲಬಿಡದೆ ಹೋರಾಡುವ ಧೀಮಂತ ಪೊಲೀಸ್ ನಮ್ಮ ರೀನಾ ಸುವರ್ಣ.

ಒತ್ತಡಗಳನ್ನು, ಸವಾಲುಗಳನ್ನು ತನಗಿರುವ ಅವಕಾಶಗಳೆಂದು ಸ್ವೀಕರಿಸಿ ದುಡಿಯುವ ಇವರು ಪ್ರಸ್ತುತ ಎಸಿಪಿ ಯಾಗಿ ಜೆಸಿ ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

“ಆಡಿಕೊಳ್ಳುವವರ ಮುಂದೆ ಜಾರಿ ಬೀಳದೆ ತಲೆಯೆತ್ತಿ ನಡೆದು ಕೆಚ್ಚೆದೆಯಿಂದ ನಡೆಯುತ, ಜೀವನದಲ್ಲಿ ಮಹತ್ತರವಾದುದನ್ನು ಸಾಧಿಸಿ ಬದುಕಿಗೊಂದು ಸಾರ್ಥಕತೆ ಒದಗಿಸಿಕೊಡಬೇಕು. ಆಗಲೇ ಬದುಕಿಗೊಂದು ಬೆಲೆಯೂ, ನೆಲೆಯೂ… ”

“ಪೊಲೀಸ್ ಸ್ವಸ್ಥ ಸಮಾಜದ ಭದ್ರತೆ ವಹಿಸಿ ಹಗಲಲ್ಲಿ ಸೂರ್ಯನಂತೆ, ರಾತ್ರಿ ಚಂದ್ರನಂತೆ ಸಮಾಜಕ್ಕಾಗಿ ದುಡಿಯುವ ಏಕೈಕ ಸರ್ಕಾರಿ ನೌಕರ.. ”
.
ಎಲ್ಲಾ ನಿಷ್ಠಾವಂತ ಪೊಲೀಸ್ ರಿಗೆ, ಮುಂದೆ “ಪೊಲೀಸ್ ಅಧಿಕಾರಿಣಿ ” ಯಾಗುವ ಛಲತೊಟ್ಟ ಹುಡುಗಿಯಿಂದ ಈ ಬರಹ ಅರ್ಪಣೆ..

Credits: ಚೈತ್ರ ಕಬ್ಬಿನಾಲೆ

Email us: billavaswarriors@gmail.com

www.billavaswarriors.com


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »