TOP STORIES:

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ


ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ.

ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ್ಯವಾರದಂದು ಮನೆಯ ಸಮೀಪ ಒಂದು‌ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ,ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಲಾಗಿದೆ.

ಅದೇ ಸಮಯ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿಯು ರಕ್ತದ ಮಡುವಿನಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ಸೇರಿಸಿದ್ದಾರೆ.RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ.ರಸ್ತೆ ಸಾರಿಗೆ ಸುರಕ್ಷತೆ ವಿಷಯ,ಕಾಂಕ್ರೀಟ್ ರಸ್ತೆ ಕಳಪೆ ವಿಷಯ,ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು,ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ,

ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ಮುಂಚೂಣಿಯ ಪ್ರಯತ್ನ ನಿಸ್ವಾರ್ಥದಿಂದ ಶ್ರೀಯುತರಿಂದ ನಡೆಯುತ್ತಿತ್ತು.ರಸ್ತೆ ಬದಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ,ಪ್ರಸಾದ್ ಆಚಾರ್ಯ,ಶಾಂತರಾಮ ಶೆಟ್ಟಿ,ಮಂಜಪ್ಪ ಪೂಜಾರಿ,ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್‌ನಿಂದ ಕೊಲೆಯತ್ನ ನಡೆಸಿರುವುದು ಅತ್ಯಂತ ಕೀಳುಮಟ್ಟದ ಮನುಷ್ಯತ್ವವಿಲ್ಲದ ವರ್ತನೆಯಾಗಿದೆ.ಇದರಲ್ಲಿ ನಮ್ಮ ಸಮಾಜದ ಮಂಜಪ್ಪ ಪೂಜಾರಿ ಸೇರಿದ್ದು ,ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ.

ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಅಗ್ರಹಿಸುತ್ತೇವೆ.ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ‌.

ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸಬೇಕು ಮತ್ತು ಎಲ್ಲಾ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »