TOP STORIES:

FOLLOW US

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ


ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ.

ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ್ಯವಾರದಂದು ಮನೆಯ ಸಮೀಪ ಒಂದು‌ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ,ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಲಾಗಿದೆ.

ಅದೇ ಸಮಯ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿಯು ರಕ್ತದ ಮಡುವಿನಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ಸೇರಿಸಿದ್ದಾರೆ.RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ.ರಸ್ತೆ ಸಾರಿಗೆ ಸುರಕ್ಷತೆ ವಿಷಯ,ಕಾಂಕ್ರೀಟ್ ರಸ್ತೆ ಕಳಪೆ ವಿಷಯ,ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು,ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ,

ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ಮುಂಚೂಣಿಯ ಪ್ರಯತ್ನ ನಿಸ್ವಾರ್ಥದಿಂದ ಶ್ರೀಯುತರಿಂದ ನಡೆಯುತ್ತಿತ್ತು.ರಸ್ತೆ ಬದಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ,ಪ್ರಸಾದ್ ಆಚಾರ್ಯ,ಶಾಂತರಾಮ ಶೆಟ್ಟಿ,ಮಂಜಪ್ಪ ಪೂಜಾರಿ,ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್‌ನಿಂದ ಕೊಲೆಯತ್ನ ನಡೆಸಿರುವುದು ಅತ್ಯಂತ ಕೀಳುಮಟ್ಟದ ಮನುಷ್ಯತ್ವವಿಲ್ಲದ ವರ್ತನೆಯಾಗಿದೆ.ಇದರಲ್ಲಿ ನಮ್ಮ ಸಮಾಜದ ಮಂಜಪ್ಪ ಪೂಜಾರಿ ಸೇರಿದ್ದು ,ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ.

ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಅಗ್ರಹಿಸುತ್ತೇವೆ.ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ‌.

ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸಬೇಕು ಮತ್ತು ಎಲ್ಲಾ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Share:

More Posts

Category

Send Us A Message

Related Posts

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »