TOP STORIES:

FOLLOW US

ಸಮಾಜಸೇವಕ ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ


ಸಮಾಜಸೇವಕ,ಬಿಲ್ಲವ ಸಮಾಜದ ಬಂಧು ಬಾರ್ಕೂರು ಶಂಕರ ಶಾಂತಿಯ ಮೇಲಾದ ಮಾರಣಾಂತಿಕ ಹಲ್ಲೆ ಖಂಡನೀಯ.ಈ ದುಷ್ಕೃತ್ಯವೆಸಗಿದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ.

ತನ್ನ ಊರಿನಲ್ಲಿ ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು,ನಿಯಮಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ಶಂಕರ ಶಾಂತಿಯವರಿಗೆ ದಿನಾಂಕ; 21-02-2021,ಆದಿತ್ಯವಾರದಂದು ಮನೆಯ ಸಮೀಪ ಒಂದು‌ ಸಭಾಭವನದ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ,ಚಿತ್ರ ಹಿಂಸೆ ನೀಡಿ ಹಲ್ಲೆ ನಡೆಸಲಾಗಿದೆ.

ಅದೇ ಸಮಯ ಬೊಬ್ಬೆ ಕೇಳಿ ಸ್ಥಳಕ್ಕಾಗಮಿಸಿದ ಶಂಕರ ಶಾಂತಿಯವರ ಹೆಂಡತಿಯು ರಕ್ತದ ಮಡುವಿನಲ್ಲಿದ್ದ ತನ್ನ ಗಂಡನನ್ನು ಅಜ್ಜರಕಾಡು ಆಸ್ಪತ್ರೆಗೆ ಸೇರಿಸಿದ್ದಾರೆ.RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಕೆಲವೊಂದು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ಶಂಕರ ಶಾಂತಿ.ರಸ್ತೆ ಸಾರಿಗೆ ಸುರಕ್ಷತೆ ವಿಷಯ,ಕಾಂಕ್ರೀಟ್ ರಸ್ತೆ ಕಳಪೆ ವಿಷಯ,ಬಾರ್ಕೂರು ಜೈನ ಬಸದಿ ಆಕ್ರಮಣ ತೆರವು,ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ,

ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ಮುಂಚೂಣಿಯ ಪ್ರಯತ್ನ ನಿಸ್ವಾರ್ಥದಿಂದ ಶ್ರೀಯುತರಿಂದ ನಡೆಯುತ್ತಿತ್ತು.ರಸ್ತೆ ಬದಿ ಬ್ಯಾನರ್ ಅಳವಡಿಸಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರ ಕುರಿತು ಕ್ರಮಕೈಗೊಂಡಿದ್ದರಿಂದ ದುಷ್ಕರ್ಮಿಗಳಾದ ಪ್ರವೀಣ ಆಚಾರ್ಯ,ಪ್ರಸಾದ್ ಆಚಾರ್ಯ,ಶಾಂತರಾಮ ಶೆಟ್ಟಿ,ಮಂಜಪ್ಪ ಪೂಜಾರಿ,ದಿವಾಕರ ಒಟ್ಟು ಸೇರಿ ಕಬ್ಬಿಣದ ರಾಡ್‌ನಿಂದ ಕೊಲೆಯತ್ನ ನಡೆಸಿರುವುದು ಅತ್ಯಂತ ಕೀಳುಮಟ್ಟದ ಮನುಷ್ಯತ್ವವಿಲ್ಲದ ವರ್ತನೆಯಾಗಿದೆ.ಇದರಲ್ಲಿ ನಮ್ಮ ಸಮಾಜದ ಮಂಜಪ್ಪ ಪೂಜಾರಿ ಸೇರಿದ್ದು ,ಸ್ವಾರ್ಥ ಸಾಧನೆಯಿಂದ ತಪ್ಪು ಯಾರೇ ಮಾಡಿರಲಿ ಅದಕ್ಕೆ ಶಿಕ್ಷೆಯಾಗಲಿ ಎನ್ನುವುದೇ ನಮ್ಮ ಇರಾದೆ. ತಪ್ಪುಗಳನ್ನು, ಸಾರ್ವಜನಿಕ ಅನ್ಯಾಯಗಳನ್ನು ಪ್ರಶ್ನಿಸಿದಾಕ್ಷಣ ಕೊಲೆ ಮಾಡುವ ಮಟ್ಟಕ್ಕೆ ತಲುಪಿರುವುದು ಈ ಪ್ರಜಾಪ್ರಭುತ್ವ ವ್ಯವಸ್ಥೆಯ ದುರಂತವೆ ಸರಿ.

ಇದೀಗ ಅಗರ್ಭ ಶ್ರೀಮಂತಿಕೆಯ ಮತ್ತು ರಾಜಕೀಯ ಪ್ರಭಾವ ಬಳಸಿ ತಪ್ಪಿತಸ್ಥರು ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ.ಇವರನ್ನು ಬಂಧಿಸಿ ಸೂಕ್ತ ಶಿಕ್ಷೆ ವಿಧಿಸುವಂತೆ ಅಗ್ರಹಿಸುತ್ತೇವೆ.ಇಂತಹ ಸಮಾಜ ದ್ರೋಹಿ ಕೆಲಸಮಾಡುವವರನ್ನು ಸುಮ್ಮನೆ ಬಿಟ್ಟರೆ ಮುಂದೆ ಇನ್ನಷ್ಟು ಲೋಕಕಂಠಕರಾಗಿ ಅದೆಷ್ಟೋ ಪಾಪದವರ ಮನೆ ಹಾಳುಮಾಡಲು ಹಿಂಜರಿಯುವುದಿಲ್ಲ‌.

ಪೋಲಿಸ್ ಇಲಾಖೆ ಮತ್ತು ಜನಪ್ರತಿನಿಧಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಶಂಕರ ಶಾಂತಿಗೆ ನ್ಯಾಯ ಒದಗಿಸಬೇಕು ಮತ್ತು ಎಲ್ಲಾ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಸಹಕರಿಸಬೇಕೆಂದು ಕೇಳಿಕೊಳ್ಳುತ್ತೇವೆ.

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಹಾಗೂ ಸರ್ವ ಸದಸ್ಯರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ)


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »