TOP STORIES:

ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.


ಉಸಿರು ಇರೋ ತನಕ ನಾವು ಪ್ರಪಂಚ ನೋಡ ಬಹುದು, ಉಸಿರು ನಿಂತ ನಂತರ ಜನ ನಮ್ಮನು ನೋಡಬೇಕಾದರೆ ನಾವು ಮಾಡುವ ಸಾಧನೆ ಹಾಗೆ ಇರಬೇಕು.

ಇಲ್ಲೊಬ್ಬರು ಸಕಲ ಕಲಾ ವಲ್ಲಭ ಸಾಧನೆಯ ಪಣ ತೊಟ್ಟು ಹಂತ ಹಂತವಾಗಿ ಸಾಧನೆಯ ಹಾದಿಯಲ್ಲಿ ಎಲ್ಲರ ಮನಗೆದ್ದಿರುವ ತುಳುನಾಡಿನ ಹೆಮ್ಮೆಯ ಮಗ ದೇವಿಕಿರಣ್ ಗಣೇಶಪುರ.

ಕಾಟಿಪಳ್ಳದ ಚಂದ್ರಹಾಸ್ ಕುಕ್ಯಾನ್ ಮತ್ತು ರತ್ನ ಕೋಟ್ಯಾನ್ ದಂಪತಿಗಳ ಮಗ.

ಇವರು ಎಸ್ ಎಸ್ ಎಲ್ ಸಿ ಮಾಡಿರುವ ಇವರಿಗೆ ಎಸ್ಟಿಡಿ ಡ್ರೀಮ್ ಕಲಾವಿದ ಆಗುವ ಬಹು ದೊಡ್ಡ ಕನಸಿದೆ.

ಇವರು ತನ್ನ ಪ್ರಾಥಮಿಕ ವಿದ್ಯಾಬ್ಯಾಸ ವನ್ನು ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢ ಶಾಲೆಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದರು

ಸಂಗೀತ, ಚಿತ್ರಕಲೆ, ಮರುಳಾಕೃತಿ, ನಿರೂಪಣೆ, ನಟನೆ ಎಲ್ಲಾದರಲ್ಲಿಯೂ ಆಸಕ್ತಿ ಹೊಂದಿರುವ ಇವರಿಗೆ ಇವರ ಗುರುಗಳಾದ ಪದ್ಮನಾಭ ಸುರತ್ಕಲ್, ಬೆನ್ನೆಲುಬಾಗಿ ನಿಂತವರು. ಸಂಪೂರ್ಣ ಸಹಕಾರ ನೀಡಿದವರು ಪ್ರಮೀಳಾ ದೀಪಕ್ ಪೆರ್ಮುದೆ, ಸತೀಶ್ ಮುಂಡ್ಕೂರು ಮುಂಬೈ,ಹಾಗೆಯೇ ತಂದೆ ತಾಯಿಯ,ಮಡದಿ,ಮಕ್ಕಳ ಸಂಪೂರ್ಣ ಪ್ರೋತ್ಸಾಹ ಬೆಂಬಲವಿದೆ.

ಇವರ ಕೈಯಿಂದ ಅನೇಕ ಗಣ್ಯ ವ್ಯೆಕ್ತಿಗಳ ಪ್ರತಿರೂಪಗಳು ಅದ್ಭುತವಾಗಿ ಮೂಡಿ ಬಂದಿದೆ ” ಮರಳಾಕೃತಿಯಲ್ಲಿ ಸತತ ನಾಲ್ಕು ಬಾರಿ ಪ್ರಶಸ್ತಿ ತನ್ನ ಮುಡಿಗೆರಿಸಿ ಎಲ್ಲರ ಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾದರು.

ಕಾರ್ಕಳ ಜೈನ ಸ್ವಾಮೀಜಿ, ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶ ಪುರ, ಕರವಳಿ ಫ್ರೆಂಡ್ಸ್ ಕ್ಲಬ್,ಕರ್ನಾಟಕ ಸೇವಾ ವೃಂದ ಸುರತ್ಕಲ್, ಮಣಿಪಾಲದ ಕಾರ್ಯಕ್ರಮದಲ್ಲಿ, ವಿನಾಯಕ ಮಂದಿರ ಕಾಟಿಪಳ್ಳ, ಕುಳಾಯಿ ನಾರಾಯಣ ಗುರು ಸಮಾಜ ಸೇವಾ ಸಂಘ, ರಾಮಾಂಜನೇಯ ವ್ಯಾಯಾಮ ಶಾಲೆ ಕಾಟಿಪಳ್ಳ, ಕುವೈಟ್, ಮುಂಬೈ, ಪಡುಬಿದ್ರೆ, ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ, ಹಿಂದೂ ಧಾರ್ಮಿಕ ಸೇವಾ ಸಮಿತಿ ಗಣೇಶ ಪುರ,ಕೊಟ್ಟಾರ ಕುಕ್ಯಾನ್ ಕುಟುಂಬ, ತ್ರಿಶೂಲ್ ಡ್ಯಾನ್ಸ್ ಕಾಟಿಪಳ್ಳ, ಮುಂಬೈ ಗರಡಿ, ಮಂಗಲಪೇಟೆ, ಕುದ್ರೋಳಿ ದಸರಾ,ಗಣೇಶ ಪುರ ಆದರ್ಶ ಯುವಕ ಮಂಡಲ ಕೈಕಂಬ ಮತ್ತು ಕುಡು ಅರಿ ಸಿನಿಮಾ. ಅನೇಕ ಕಡೆ ಇವರ ಪ್ರತಿಭೆಗೆ ಸನ್ಮಾನಗಳು ಆಗಿದೆ.

ಇವರ ಈ ಪ್ರತಿಭೆ ಅನೇಕ ಪ್ರಶಸ್ತಿ ಪುರಸ್ಕಾರ ದೊರತಿವೆ, ಕಡು ಅರಿ ಮತ್ತು ಕುರು ಕುರು ಎಂಬ ಎರಡು ಆಲ್ಬಮ್ ಸಾಂಗ್ ಹಾಡಿ ಜನ ಮನ ಗೆದ್ದು ತನ್ನದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಕೇವಲ ಹಾಡು ಚಿತ್ರ ಕಲೆ ಮಾತ್ರ ಅಲ್ಲದೆ ನಟನೆಯಲ್ಲಿಯೂ ತನ್ನ ಪ್ರತಿಭೇನ ತೋರಿಸಿದ್ದಾರೆ,ಇವರು ಆ ಒಂದು ಕೆರೆ ಎಂಬ ತುಳು ಕಿರು ಚಿತ್ರ  ಸಂಪೂರ್ಣ ನಾಯಕನಾಗಿ ನಟಿಸಿ ಸೈ ಎಣಿಸಿಕೊಂಡಿದ್ದಾರೆ, ಸಾವಿರಾರು ವೇದಿಕೆ ಹಾಡಿ ದ ಕೀರ್ತಿ ಇವರದು 2000 ಕ್ಕೂ ಹೆಚ್ಚು ರಸಮಂಜರಿ ಕಾರ್ಯಕ್ರಮ, 60 ಕ್ಕೂ ಹೆಚ್ಚು ಕಲಾ ಕುಂಚದಿಂದ ಜನರ ಮನವನ್ನು ಮಂತ್ರ ಮುಗ್ದವಾಗಿಸಿದ ಮಾಂತ್ರಿಕ.

ಇವರು ಹಾಡಿರುವ ಕುಡು ಅರಿ ಹಾಡಿಗೆ ಉತ್ತಮ ಗಾಯಕ ಎಂಬ ಪ್ರಶಸ್ತಿ ಇವರಿಗೆ ದೊರಕಿದೆ. ಹೊರದೇಶಗಳಲ್ಲಿ ತನ್ನ ಗಾಯನ ಹಾಗೂ ಚಿತ್ರ ಕಲೆಯನ್ನು ಪ್ರದರ್ಶಿಸಿ ತುಳುನಾಡಿನ ಹೆಮ್ಮೆಯ ಮಗ ಎಣಿ ಸಿಕೊಂದ್ದಾರೆ.

ಇವರು ಹಾಡಿರುವ ಕೊರಗಜ್ಜ ತುಳು ಭಕ್ತಿ ಗೀತೆ “ಭಕ್ತಿದ ಅಸರ್ “ಸದ್ಯದಲ್ಲಿಯೇ ಬಿಡುಗಡೆ ಆಗಲಿದೆ.

ಇಷ್ಟೇ ಅಲ್ಲದೆ ವಾಹನಗಳಿಗೆ ಸ್ಟಿಕರ್ ಕಟ್ಟಿಗ್ ಬ್ಯಾನರ್ ಬರೆಯುದು ಇವರ ವೃತ್ತಿ ಆಗಿದೆ .

ಇಂತಹ ಒಬ್ಬ ಅದ್ಭುತ ಪ್ರತಿಭೆಯ ಬಗ್ಗೆ ಎಷ್ಟು ಬರೆದರು ಅದು ಮುಗಿಯದ ಅದ್ಯಾಯ , ಎಸ್ ಪಿ ಬಾಲಸುಬ್ರಮಣ್ಯ ಮತ್ತು ಎಸ್ ಜಾನಕಿ ಯವರಿಂದಲೇ ಭೇಷ್ ಎಣಿಸಿಕೊಂಡ ದೇವಿ ಕಿರಣ್ ಇವರ ಕಲಾ ಬದುಕಿಗೆ ಸರಸ್ವತಿ ದೇವಿಯ ಅನುಗ್ರಹ ಸದಾ ಇರಲಿ ಇವರ ಕನಸು ನನಸಾಗಲಿ ಎಂದು ಹಾರೈಸುವ.

✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »