TOP STORIES:

FOLLOW US

ಸಾವಿರಾರು ಮಕ್ಕಳಿಗೆ ತಗುಲಿದೆ ಕಣ್ಣು ಬೇನೆ ( ಐ ವೈರಸ್): ಪೋಷಕರಿಗೆ ಮಕ್ಕಳ ತಜ್ಞ ವೈದ್ಯರು ಹೇಳಿದ್ದೇನು…? ತಂದೆ ತಾಯಿ ಓದಲೇಬೇಕಾದ ಸ್ಟೋರಿ


ಪ್ರತಿಯೊಬ್ಬರಿಗೂ ಕಣ್ಣು (Eye) ಬೇಕು. ಇಡೀ ಪ್ರಪಂಚ ನೋಡಲು ನೇತ್ರ (Eye) ಅವಶ್ಯಕ. ಕಣ್ಣು (Eye) ಇಲ್ಲ ಅಂದರೆ ಪ್ರಪಂಚವನ್ನೇ ಊಹಿಸಿಕೊಳ್ಳಲು ಸಾಧ್ಯವಿಲ್ಲ. ಆದ್ರೆ, ಮಕ್ಕಳ ಕಣ್ಣಿಗೆ ಏನಾದರೂ ಆದರೆ ಪೋಷಕರು ಹೆದರದೇ ಇರುತ್ತಾರಾ? ಭಯಆಗಿಯೇ ಆಗುತ್ತದೆ. ಈಗ ಸಾವಿರಾರು ಮಕ್ಕಳಿಗೆ ಕಣ್ಣು (Eye) ಬೇನೆ ಅಥವಾ ವೈರಸ್ ಕಾಡಲಾರಂಭಿಸಿದೆ. ಈಗಾಗಲೇಸಾವಿರಾರು ಮಕ್ಕಳನ್ನು ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಬಂದಿದ್ದಾರೆ

ಬಾರಿ ದಾವಣಗೆರೆ ಜಿಲ್ಲೆ ಥೇಟ್ ಮಲೆನಾಡಿನಂತಾಗಿದೆ. ಜಿಟಿ ಜಿಟಿ ಮಳೆ ಸುರಿಯುತ್ತಲೇ ಇದೆ. ಚಳಿ, ಜ್ವರ, ಶೀತ, ಕೆಮ್ಮು, ತಲೆನೋವು ಎಲ್ಲರಿಗೂ ಕಾಡುತ್ತದೆ. ಈಗ ಮಕ್ಕಳಲ್ಲಿ ಕಾಣಿಸಿಕೊಂಡಿರುವ ಕಣ್ಣಿನ ಬೇನೆ ಪೋಷಕರು ತಲ್ಲಣಗೊಳ್ಳುವಂತೆ ಮಾಡಿದೆ. ಆತಂಕವೂ ಹೆಚ್ಚಾಗಿದೆ.

ಏನಿದು ಕಣ್ಣು (Eye) ಬೇನೆ…?

ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬಂದಿರುವ ಕಣ್ಣು ಬೇನೆ ಅಥವಾ ವೈರಸ್ ನಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಎದ್ನೋ ಬಿದ್ನೋ ಎಂಬಂತೆ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ.

ಮಳೆಗಾಲದ ವೇಳೆ ಸಾಮಾನ್ಯವಾಗಿ ಕಂಡು ಬರುವ ಮದ್ರಾಸ್ ರೀತಿಯಾದ ಒಂದು ವೈರಸ್ ಇದೆ. ಜಿಲ್ಲೆಯಲ್ಲಿ ಸಾವಿರಾರುಮಕ್ಕಳಲ್ಲಿ ಬೇನೆ ಕಂಡು ಬಂದಿದೆ. ಆಸ್ಪತ್ರೆಗಳ ಮುಂದೆ ಪೋಷಕರು ಮಕ್ಕಳನ್ನು ಕರೆದೊಯ್ದು ವೈದ್ಯರ ಬಳಿ ತೋರಿಸಿದ್ದಾರೆ. ವಾತಾವರಣ ತಂಪಾಗಿರುವ ಕಾರಣ ಒಬ್ಬರಿಂದ ಒಬ್ಬರಿಗೆ ಸೋಂಕು ಬೇಗನೇ ಹರಡುತ್ತದೆ. ದಾವಣಗೆರೆಯಲ್ಲಿ ಕಳೆದ 20 ದಿನಗಳಿಂದಲೂ ಉತ್ತಮ ಮಳೆಯಾಗುತ್ತಿದೆ. ಆಗೊಮ್ಮೆ ಈಗೊಮ್ಮೆ ಬಿಸಿಲು ಬಂದರೂ ವಾತಾವರಣ ಕೂಲ್ ಕೂಲ್ ಆಗಿದೆ.

ಮಕ್ಕಳಲ್ಲಿ ವೇಗವಾಗಿ ಹರಡಲು ಕಾರಣವೇನು…?

ಮಕ್ಕಳನ್ನು ಶಾಲೆಗೆ ಕಳುಹಿಸುವುದರಿಂದ ಆಗಾಗ್ಗೆ ಕಣ್ಣು ಮುಟ್ಟಿಕೊಳ್ಳುತ್ತಾರೆ. ಜೊತೆಗೆ ಮಕ್ಕಳ ಜೊತೆ ಆಟವಾಡುತ್ತಾರೆ. ಇಲ್ಲಿ ಅಂತರಕಡಿಮೆ ಇರುತ್ತದೆ. ಮಕ್ಕಳು ಸ್ವಲ್ಪ ಕಣ್ಣು ನೋವಾದರೂ ಉಜ್ಜಿಕೊಳ್ಳುತ್ತಾರೆ. ವಾತಾವರಣವೂ
ತಂಪಾಗಿರುವ ಕಾರಣಕ್ಕೆ ವೇಗವಾಗಿ ಸೋಂಕು ಹರಡುತ್ತಿದೆ.

ಡಾ. ಹೆಚ್. ಎಂ. ರವೀಂದ್ರನಾಥ್, ದೃಷ್ಟಿ (Eye) ತಜ್ಞರು:

ದೃಷ್ಟಿಆಸ್ಪತ್ರೆಯ ತಜ್ಞ ವೈದ್ಯರಾದ ಡಾ. ಹೆಚ್. ಎಂ. ರವೀಂದ್ರನಾಥ್ ಅವರ ಬಳಿ ಈಗಾಗಲೇ 450 ರಿಂದ 500 ಮಕ್ಕಳನ್ನುನೋಡಿದ್ದಾರೆ. ಆಸ್ಪತ್ರೆಗೆ ಕರೆತಂದ ಪೋಷಕರು ಮಕ್ಕಳ ಕಣ್ಣಿನ ಭಾವು ಹೆಚ್ಚಾಗಿರುವ ಕಾರಣ ಆತಂಕಕ್ಕೆ ಒಳಗಾಗಿದ್ದರು.
ಮಾತ್ರವಲ್ಲ, ಮಕ್ಕಳಲ್ಲಿ ಶೀತ, ಜ್ವರ, ಸ್ವಲ್ಪ ಕೆಮ್ಮು, ತಲೆನೋವು, ಮೈ ಕೈ ಸುಸ್ತು ಎಂದು ಮಕ್ಕಳು ಹೇಳಿದ್ದಾರೆ. ಏನೂ ತೊಂದರೆ ಇಲ್ಲಎಂದು ಸ್ಪಷ್ಟಪಡಿಸಿದ್ದಾರೆ.

ದೃಷ್ಟಿ(Eye)ಗೆ ತೊಂದರೆ ಇಲ್ಲ, ಪೋಷಕರು ಹೆದರಬೇಕಿಲ್ಲ:

ಮಳೆಗಾಲದ ವೇಳೆ ಸಾಮಾನ್ಯವಾಗಿ ಹರಡುವ ವೈರಸ್ ಇದಾಗಿದೆ. ಮದ್ರಾಸ್ ನಂತೆ ಪರಿಣಾಮಕಾರಿಯಾಗಿಲ್ಲ. ಯಾವುದೇಸಮಸ್ಯೆಯೂ ಆಗಲ್ಲ. ಪೋಷಕರು ಹೆದರುವ ಅವಶ್ಯಕೆ ಇಲ್ಲ. ಇದೊಂದು ವೈರಸ್. ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈಗತಂಪು ವಾತಾವರಣ ಹೆಚ್ಚಾಗಿದೆ. ವೇಳೆ ವೈರಸ್ ಹೆಚ್ಚಾಗಿ ಹರಡುತ್ತದೆ ಅಷ್ಟೇ. ವೈರಸ್ ನಿಂದ ಯಾವ ತೊಂದರೆಯೂ ಇಲ್ಲ. ಯಾರಿಗೂ ದೃಷ್ಟಿ ಸಮಸ್ಯೆ ಬರುವುದಿಲ್ಲ. ಬಾರಿ ಕಾಣಿಸಿಕೊಂಡಿರುವ ವೈರಸ್ ಶಕ್ತಿ ಶಾಲಿಯಾಗಿಲ್ಲ. ಮದ್ರಾಸ್ ರೀತಿಯಲ್ಲಿಯೇಒಂದು ರೀತಿಯ ವೈರಸ್ ಇದು ಎಂದು ಹೇಳಿದ್ದಾರೆ.

ಆದ್ರೆ, ಈಗ ಕಾಣಿಸಿಕೊಂಡಿರುವ ವೈರಸ್ ಮೈಲ್ಡ್ ಆಗಿದೆ. ಕಣ್ಣಿಗೆ ಮತ್ತು ದೃಷ್ಟಿಗೆ ತೊಂದರೆ ಆಗುವಂಥದ್ದು ಯಾರಿಗೂ ಆಗಿಲ್ಲ. ಪೋಷಕರು ಭಯ ಪಡಬಾರದು. ಆಸ್ಪತ್ರೆಗೆ ಕರೆದುಕೊಂಡು ಹೋಗುವ ಅವಶ್ಯಕತೆ ಇಲ್ಲ. ನಾನು ಸಹ 450 ರಿಂದ 500 ಮಕ್ಕಳನ್ನುನೋಡಿದ್ದೇನೆ. ಪದೇ ಪದೇ ಹೇಳುತ್ತೇನೆ. ಪೋಷಕರು ಯಾವುದೇ ರೀತಿಯ ಆತಂಕ, ಭಯ ಪಡಬಾರದು ಎಂದು ಧೈರ್ಯಹೇಳಿದ್ದಾರೆ.

ಎನ್. ಕೆ. ಕಾಳಪ್ಪನವರ್, ಮಕ್ಕಳ ತಜ್ಞ ವೈದ್ಯರು:

ಮಕ್ಕಳ ಕಣ್ಣಿನಲ್ಲಿಪಿಸಿರು ಬರುತ್ತದೆ. ಸ್ವಲ್ಪ ನೋವು ಇರುತ್ತದೆ. ಮಳೆ ಹೆಚ್ಚಿರುವುದರಿಂದ ವಾತಾವರಣಕ್ಕೆ ಹೆಚ್ಚು ಹರಡುತ್ತದೆ. ವೈರಸ್ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ವೈರಲ್ ಫೀವರ್ ಬರುತ್ತಿದೆ. ಜೊತೆಗೆ ಕಣ್ಣು ಬೇನೆ ಸಹ ಬರುತ್ತಿದೆ. ಮೈಕೈ ನೋವು, ತಲೆನೋವುಶೀತ, ಸ್ವಲ್ಪ ಕೆಮ್ಮು ಬರುತ್ತಿದೆ. ಆಮೇಲೆ ಕಣ್ಣಿನ ಬೇನೆ ಶುರುವಾಗುತ್ತದೆ ಎಂದು ತಿಳಿಸಿದ್ದಾರೆ.

ರೋಗ ಗುಣ ಲಕ್ಷಣಗಳೇನು…?

ಕಣ್ಣಿನಲ್ಲಿ ಪಿಸುರು ಬರುವುದು.
ಕಣ್ಣು ಭಾವು ಬರುವುದು.
ಮೂರರಿಂದ ಐದು ದಿನ ಇರುತ್ತದೆ
ಐದು ದಿನಗಳ ಬಳಿಕ ಸರಿ ಹೋಗುತ್ತದೆ.
ಇದು ಕಣ್ಣಿನ ತುರಿಕೆ ಅಲ್ಲ
ಕಣ್ಣು ಕೆಂಪಗಾಗುತ್ತದೆ.
ಬೇರೆ ರೋಗ ಲಕ್ಷಣಗಳು ಕಂಡು ಬರುತ್ತಿಲ್ಲ

ಪೋಷಕರು ಏನು ಮಾಡಬೇಕು…?

ಮೇಲಿಂದ ಮೇಲೆ ಕೈ ತೊಳೆಯಬೇಕು.
ಕಣ್ಣು ಆಗಾಗ್ಗೆ ಮುಟ್ಟುಕೊಳ್ಳಬಾರದು.
ಸ್ಯಾನಿಟೈಸರ್ ಬಳಕೆ ಮಾಡುವುದು ಒಳ್ಳೆಯದು

ಫಿಲ್ಟರ್ (ಶುದ್ಧ) ನೀರನ್ನೇ ಬಳಸಬೇಕು.

ಸೋಂಕಿತ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ

ಕಣ್ಣುಗಳನ್ನು ಮುಟ್ಟಿದಾಗಮುಟ್ಟುವ ಮುನ್ನ ಕೈತೊಳೆದುಕೊಳ್ಳಬೇಕು

ಡ್ರಾಪ್ಸ್, ಬೆಡ್ ಶೀಟ್, ಟವೆಲ್, ಸೌಂದರ್ಯವರ್ಧಕ, ಮೊಬೈಲ್ ಪೋನ್ ಪ್ರತ್ಯೇಕವಾಗಿ ಬಳಸಿ

– *ಕಣ್ಣು ಒರೆಸಲು ಕರವಸ್ತ್ರಗಳ ಬದಲಿಗೆ ಟಿಶ್ಯೂ ಪೇಪರ್ ಬಳಸಿದರೆ ಉತ್ತಮ

ವೈದ್ಯರು ನೀಡುವ ಸಲಹೆ ಏನು..?

ನಗರದ ನಾನಾ ಕಣ್ಣಿನ ಆಸ್ಪತ್ರೆಗಳಲ್ಲಿ ಕೆಲ ದಿನಗಳಿಂದ ನೂರಾರು ಮಕ್ಕಳು ಕಣ್ಣಿನ ಬೇನೆ ಚಿಕಿತ್ಸೆಗಾಗಿ ಮಕ್ಕಳನ್ನು ಕರೆತರುತ್ತಿದ್ದಾರೆ. ದಿನೇ ದಿನೇ ಆಸ್ಪತ್ರೆಗೆ ಕರೆದುಕೊಂಡು ಬರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೆಲವೆಡೆ ಹಿರಿಯರಲ್ಲಿಯೂ ಕಾಣಿಸಿಕೊಂಡಿದೆ. ಜೊತೆಗೆ ಹಾಸ್ಟೆಲ್ ಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಬೇಗನೇ ಕಣ್ಣಿನ ಬೇನೆ ಕಾಣಿಸಿಕೊಳ್ಳುತ್ತಿದೆ. ಊಟ, ಕೊಠಡಿಗಳಲ್ಲಿ ಮೂರರಿಂದನಾಲ್ಕು ವಿದ್ಯಾರ್ಥಿಗಳು ಇರುವುದರಿಂದ ಬೇಗನೇ ಒಬ್ಬರಿಂದ ಒಬ್ಬರಿಗೆ ಸೋಂಕು ತಗುಲುತ್ತಿದೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಕಣ್ಣಿನ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಬಿಸಿಲಿನಲ್ಲಿ ಒಂದು ರೀತಿಯ ಸಮಸ್ಯೆಯಾದರೆಮಳೆಗಾಲದಲ್ಲಿ ಒಂದು ರೀತಿಯ ಸಮಸ್ಯೆ ಕಾಡುತ್ತದೆ. ಕಣ್ಣಿನ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಕೆಲವೊಂದು ಬ್ಯಾಕ್ಟೀರಿಯಾ ಹಾಗುವೈರಾಣುಗಳು ಹೆಚ್ಚು ಕ್ರಿಯಾಶೀಲವಾಗಿರುತ್ತವೆ. ಕಣ್ಣು ಕೆಂಪಾಗುವುದು ಸಹ ಕಂಡು ಬರುತ್ತದೆ.

ಪೋಷಕರು ಏನು ಹೇಳುತ್ತಾರೆ…?

ನಗರದ ಹಲವು ಶಾಲಾ ಕಾಲೇಜುಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಕಣ್ಣಿನ ಬೇನೆ ಕಾಣಿಸಿಕೊಂಡಿದೆ ಎಂಬ ಮಾಹಿತಿ ಕೇಳುತ್ತಿದ್ದಂತೆಆತಂಕ ಶುರುವಾಗಿತ್ತು. ಆದ್ರೆ, ಮಕ್ಕಳು ಸುಸ್ತಾಗುತ್ತದೆ ಎನ್ನುತ್ತಾರೆ. ಕೆಲ ಮಕ್ಕಳ ಕಣ್ಣು ಊತುಕೊಂಡಿವೆ. ಕೆಂಪಾಗಾಗಿವೆ, ಪಿಸಿರುಜಾಸ್ತಿ ಬರುತ್ತಿತ್ತು. ಆತಂಕಕ್ಕೂ ಕಾರಣ ಆಗಿತ್ತು. ಸಾವಿರಾರು ಮಕ್ಕಳಿಗೆ ಸೋಂಕು ತಗುಲಿದ್ದು, ವೈದ್ಯರ ಬಳಿ ತೋರಿಸಿದ ಬಳಿಕನಿಟ್ಟುಸಿರುಬಿಟ್ಟಿದ್ದೇವೆ ಎನ್ನುತ್ತಾರೆ ಪೋಷಕರು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »