TOP STORIES:

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ ಯುವ ಸಮುದಾಯಕ್ಕೆ ಮಾದರಿ


ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ

ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ | ಯುವ ಸಮುದಾಯಕ್ಕೆ ಮಾದರಿ

ಬದುಕಿನಲ್ಲಿ ಆಶಾವಾದವೇ ಛಲಕ್ಕೆ ಮೂಲ ಕಾರಣ. ಛಲವುಳ್ಳ ಬದುಕು ಸಾಧನೆಯ ಮೊದಲ ಹೆಜ್ಜೆ. ಅಂತಹ ಸಾಧನೆಯನ್ನು ಬೆನ್ನತ್ತಿಯಶಸ್ವಿಯಾದವರು ಹೆಬ್ರಿಯ ಸಪ್ನಾ ಪೂಜಾರಿ.

ಹೆಬ್ರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿಯೊಬ್ಬಳು ಅಂತಾರಾಷ್ಟಿçà ಸಂಸ್ಥೆಯಾದ ಐಸಾಕನಡೆಸಿದ 2022ನೇ ಸಾಲಿನಲ್ಲಿ ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಯಲ್ಲಿ ವಿಶ್ವಕ್ಕೆ ಟಾಪರ್ಆಗಿ ಹೊರಹೊಮ್ಮಿದ್ದಾರೆ. ಇಂತಹ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಮೆರಿಕಾದಬೋಸ್ಟನ್‌ನಲ್ಲಿ ಇತ್ತೀಚೆಗೆ ನಡೆದ ಡಿಜಿಟಲ್ ಟ್ರಸ್ಟ್ ವರ್ಲ್ಡ್ ಕಾನ್ಪರೆನ್ಸ್ ನಲ್ಲಿ ಇವರ ಸಾಧನೆಗೆ ಗೌರವ ಸನ್ಮಾನ ಲಭಿಸಿದೆ.

ಉಡುಪಿ ಜಿಲ್ಲೆ ಹೆಬ್ರಿಯ ಲೀಲಾವತಿ ಮತ್ತು ಭೋಜ ಪೂಜಾರಿ ದಂಪತಿಗಳ ಪುತ್ರಿಯಾದ ಸಪ್ನಾ ಅವರ ಹುಟ್ಟೂರು ಪೆರ್ಡೂರಿನಬೆಳ್ಳರ್ಪಾಡಿಯಲ್ಲಿ ಹಾಗೂ ಬೆಳೆದದ್ದು ಹೆಬ್ರಿ ಜರ್ವತ್ತಿನ ಕೂಡು ಕುಟುಂಬದಲ್ಲಿ. ಆರಂಭಿಕ ಪ್ರಾಥಮಿಕ ಶಿಕ್ಷಣವನ್ನು ಊರಿನ ಸರಕಾರಿಶಾಲೆಯಲ್ಲಿ ಪಡೆದರು. ಬಳಿಕ ಮುದ್ರಾಡಿಯ ಎಂಎನ್‌ಡಿಎಸ್‌ಎAನಲ್ಲಿ ಹೈಸ್ಕೂಲ್, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿಪದವಿಪೂರ್ವ ಶಿಕ್ಷಣ, ಬೆಂಗಳೂರಿನ ಪೆಸಿಟ್‌ನಲ್ಲಿ ಬಿಇ ಶಿಕ್ಷಣ ಮುಗಿಸಿದರು. ಇವರ ಶಿಕ್ಷಣಕ್ಕೆ ಇಡೀ ಕುಟುಂಬ ಸಾಥ್ ನೀಡಿತ್ತು. ಬೆಂಗಳೂರಿಗೆ ತೆರಳಿದ ಸಂದರ್ಭ ಅಮ್ಮ ಕೂಡಾ ಜತೆಯಲ್ಲೇ ವಾಸ್ತವ್ಯ ಹೂಡಿ ಮಗಳ ವಿದ್ಯಾಭ್ಯಾಸಕ್ಕೆ ಬೆನ್ನಲುಬಾಗಿ ನಿಂತಿದ್ದರು. ಸಹೋದರ ಪ್ರಸನ್ನ ಕುಮಾರ್ ಅವರ ಮಾರ್ಗದರ್ಶನದಂತೆ ಶಿಕ್ಷಣದ ಬಳಿಕ ವೃತ್ತಿ ಜೀವನಕ್ಕೆ ಆಯ್ಕೆ ಮಾಡಿಕೊಂಡಿರುವುದು ಐಟಿಕಂಪನಿ.

ಮತ್ತಷ್ಟು ಸಾಧನೆ ತವಕ: ನಾರಾವಿ ತಿರ್ತೊಟ್ಟು ದಿ. ಬಾಬು ಪೂಜಾರಿ ಅವರ ಮೊಮ್ಮಗ ಪ್ರವೀಣ್ ಪೂಜಾರಿ ಅವರನ್ನು ಸಪ್ನಾವಿವಾಹವಾದರು. ಸಾಮಾನ್ಯವಾಗಿ ಉದ್ಯೋಗ ಸಿಕ್ಕ ಬಳಿಕ ಬಹುತೇಕ ಮಂದಿ ನಿರಾಳರಾಗುತ್ತಾರೆ. ಅದರಲ್ಲೂ ಮದುವೆಯಾದಬಳಿಕ ಸಾಕು ಎಂಬ ಭಾವನೆ ಮೂಡುತ್ತದೆ. ಆದರೆ ಸಪ್ನಾ ಅವರಿಗೆ ಮತ್ತಷ್ಟು ಕಲಿಯಬೇಕು, ಹೊಸತನಕ್ಕೆ ತೆರೆದುಕೊಳ್ಳಬೇಕು, ಸಾಧನೆಯ ಮತ್ತೊಂದು ಮಗ್ಗುಲು ಮುಟ್ಟಬೇಕು ಎಂಬ ಕನಸು ಮತ್ತಷ್ಟು ಚಿಗುರೊಡೆಯಿತು. ಇದಕ್ಕೆ ತಂದೆ, ತಾಯಿ, ಗಂಡ, ಅತ್ತೆ, ಮಾವ ಸೇರಿದಂತೆ ಸಂಪೂರ್ಣ ಕುಟುಂಬ ಬೆನ್ನೆಲುಬಾಗಿ ನಿಂತಿತು. ಇದಕ್ಕೆ ಪೂರಕವಾಗಿ ಉದ್ಯೋಗ ಮಾಡುತ್ತಿದ್ದ ಐಟಿ ಅಡಿಟಿಂಗ್ಕ್ಷೇತ್ರದಲ್ಲೇ ಮತ್ತಷ್ಟು ಅಧ್ಯಯನಕ್ಕೆ ಅವಕಾಶ ಸಿಕ್ಕಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಪ್ನಾ, ಅಧ್ಯಯನದಲ್ಲಿತೊಡಗಿಸಿಕೊಂಡರು. ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಗೆ ಸಿದ್ಧತೆ ನಡೆಸಿದರು. ಪರೀಕ್ಷೆಯು ಕಠಿಣ ಹಾಗೂ ಕ್ಲಿಷ್ಟಕರವಾಗಿರುವುದರಿಂದ ವಿಶ್ವದಲ್ಲಿ ಕೆಲವೇ ಕೆಲವು ಮಂದಿ ಬರೆಯುತ್ತಾರೆ. ಪರೀಕ್ಷೆಯಲ್ಲಿ ಸಪ್ನಾಅವರು ವಿಶ್ವಕ್ಕೆ ಟಾಪರ್ ಆಗಿ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ. 2022ರಲ್ಲಿ ಇವರ ಜತೆ ಜರ್ಮನಿಯ ಯುವಕನೊಬ್ಬಟಾಪರ್ ಸ್ಥಾನ ಹಂಚಿಕೊAಡಿದ್ದಾರೆ.

ಯುವ ಸಮುದಾಯಕ್ಕೆ ಮಾದರಿ: ಸಪ್ನಾ ಅವರು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆಯ ಬಗ್ಗೆ ಮಾಹಿತಿಕಲೆಹಾಕಿ, ಬಿಡುವಿನ ಸಮಯದಲ್ಲಿ ತಜ್ಞರಿಂದ ಮಾರ್ಗದರ್ಶನ ಪಡೆದರು. ಒಂದೆಡೆ ಗಂಡ, ಮಕ್ಕಳನ್ನೊಳಗೊಂಡ ಕುಟುಂಬ, ಇನ್ನೊಂದೆಡೆ ಉದ್ಯೋಗ. ಇವೆರಡರ ಮಧ್ಯೆ ಉನ್ನತ ಶಿಕ್ಷಣವನ್ನು ಮುಂದುವರಿಸಿ ಯಶಸ್ಸು ಕಂಡ ಅವರ ಸಾಧನೆ ಯುವ ಸಮಾಜಕ್ಕೆಮಾದರಿಯಾಗಿದೆ.

ನನಗೆ ಬಾಲ್ಯದಿಂದಲೂ ಒಳ್ಳೆಯದಾಗಿ ಕಲಿತು ಸಾಧನೆ ಮಾಡಬೇಕೆಂಬ ಹಂಬಲ ಇತ್ತು. ಅದಕ್ಕೆ ಸರಿಯಾಗಿ ಪ್ರಾಥಮಿಕ ಮತ್ತುಪ್ರೌಢಶಿಕ್ಷಣ ಭದ್ರ ಅಡಿಪಾಯ ಒದಗಿಸಿತು. ಐಟಿ ಕ್ಷೇತ್ರಕ್ಕೆ ಹೋದ ಬಳಿಕ ಸಿಐಎಸ್‌ಎ ಪರೀಕ್ಷೆ ಬಗ್ಗೆ ಆಸಕ್ತಿ ಹುಟ್ಟಿತು. ಕುಟುಂಬ, ಮನೆಯವರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ಇಂದಿನ ಯುವ ಸಮಾಜಕ್ಕೂ ನನ್ನ ಸಲಹೆ ಅವಕಾಶಗಳನ್ನುಬಳಸಿಕೊಂಡು ಸಾಧನೆ ಮಾಡೋಣ. ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದರಲ್ಲಿ ಒಳ್ಳೆಯ ಅಂಶಸ್ವೀಕರಿಸಿದಾಗ ಯಾವುದೇ ಕ್ಷೇತ್ರದಲ್ಲಿ ಮುನ್ನಡೆದಾಗ ಯಶಸ್ಸು ನಿಶ್ಚಿತ.

ಸಪ್ನಾ ಪೂಜಾರಿ ಹೆಬ್ರಿ, ಸಿಐಎಸ್‌ಎ ಟಾಪರ್


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »