TOP STORIES:

FOLLOW US

ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ ಯುವ ಸಮುದಾಯಕ್ಕೆ ಮಾದರಿ


ಸಿಐಎಸ್‌ಎನಲ್ಲಿ ವಿಶ್ವಕ್ಕೆ ಅಗ್ರಸ್ಥಾನಿ

ಗ್ರಾಮೀಣ ಪ್ರತಿಭೆ ಹೆಬ್ರಿ ಸಪ್ನಾ ಪೂಜಾರಿ ಸಾಧನೆ | ಯುವ ಸಮುದಾಯಕ್ಕೆ ಮಾದರಿ

ಬದುಕಿನಲ್ಲಿ ಆಶಾವಾದವೇ ಛಲಕ್ಕೆ ಮೂಲ ಕಾರಣ. ಛಲವುಳ್ಳ ಬದುಕು ಸಾಧನೆಯ ಮೊದಲ ಹೆಜ್ಜೆ. ಅಂತಹ ಸಾಧನೆಯನ್ನು ಬೆನ್ನತ್ತಿಯಶಸ್ವಿಯಾದವರು ಹೆಬ್ರಿಯ ಸಪ್ನಾ ಪೂಜಾರಿ.

ಹೆಬ್ರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿತ ವಿದ್ಯಾರ್ಥಿನಿಯೊಬ್ಬಳು ಅಂತಾರಾಷ್ಟಿçà ಸಂಸ್ಥೆಯಾದ ಐಸಾಕನಡೆಸಿದ 2022ನೇ ಸಾಲಿನಲ್ಲಿ ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಯಲ್ಲಿ ವಿಶ್ವಕ್ಕೆ ಟಾಪರ್ಆಗಿ ಹೊರಹೊಮ್ಮಿದ್ದಾರೆ. ಇಂತಹ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಅಮೆರಿಕಾದಬೋಸ್ಟನ್‌ನಲ್ಲಿ ಇತ್ತೀಚೆಗೆ ನಡೆದ ಡಿಜಿಟಲ್ ಟ್ರಸ್ಟ್ ವರ್ಲ್ಡ್ ಕಾನ್ಪರೆನ್ಸ್ ನಲ್ಲಿ ಇವರ ಸಾಧನೆಗೆ ಗೌರವ ಸನ್ಮಾನ ಲಭಿಸಿದೆ.

ಉಡುಪಿ ಜಿಲ್ಲೆ ಹೆಬ್ರಿಯ ಲೀಲಾವತಿ ಮತ್ತು ಭೋಜ ಪೂಜಾರಿ ದಂಪತಿಗಳ ಪುತ್ರಿಯಾದ ಸಪ್ನಾ ಅವರ ಹುಟ್ಟೂರು ಪೆರ್ಡೂರಿನಬೆಳ್ಳರ್ಪಾಡಿಯಲ್ಲಿ ಹಾಗೂ ಬೆಳೆದದ್ದು ಹೆಬ್ರಿ ಜರ್ವತ್ತಿನ ಕೂಡು ಕುಟುಂಬದಲ್ಲಿ. ಆರಂಭಿಕ ಪ್ರಾಥಮಿಕ ಶಿಕ್ಷಣವನ್ನು ಊರಿನ ಸರಕಾರಿಶಾಲೆಯಲ್ಲಿ ಪಡೆದರು. ಬಳಿಕ ಮುದ್ರಾಡಿಯ ಎಂಎನ್‌ಡಿಎಸ್‌ಎAನಲ್ಲಿ ಹೈಸ್ಕೂಲ್, ಕಾರ್ಕಳದ ಭುವನೇಂದ್ರ ಕಾಲೇಜಿನಲ್ಲಿಪದವಿಪೂರ್ವ ಶಿಕ್ಷಣ, ಬೆಂಗಳೂರಿನ ಪೆಸಿಟ್‌ನಲ್ಲಿ ಬಿಇ ಶಿಕ್ಷಣ ಮುಗಿಸಿದರು. ಇವರ ಶಿಕ್ಷಣಕ್ಕೆ ಇಡೀ ಕುಟುಂಬ ಸಾಥ್ ನೀಡಿತ್ತು. ಬೆಂಗಳೂರಿಗೆ ತೆರಳಿದ ಸಂದರ್ಭ ಅಮ್ಮ ಕೂಡಾ ಜತೆಯಲ್ಲೇ ವಾಸ್ತವ್ಯ ಹೂಡಿ ಮಗಳ ವಿದ್ಯಾಭ್ಯಾಸಕ್ಕೆ ಬೆನ್ನಲುಬಾಗಿ ನಿಂತಿದ್ದರು. ಸಹೋದರ ಪ್ರಸನ್ನ ಕುಮಾರ್ ಅವರ ಮಾರ್ಗದರ್ಶನದಂತೆ ಶಿಕ್ಷಣದ ಬಳಿಕ ವೃತ್ತಿ ಜೀವನಕ್ಕೆ ಆಯ್ಕೆ ಮಾಡಿಕೊಂಡಿರುವುದು ಐಟಿಕಂಪನಿ.

ಮತ್ತಷ್ಟು ಸಾಧನೆ ತವಕ: ನಾರಾವಿ ತಿರ್ತೊಟ್ಟು ದಿ. ಬಾಬು ಪೂಜಾರಿ ಅವರ ಮೊಮ್ಮಗ ಪ್ರವೀಣ್ ಪೂಜಾರಿ ಅವರನ್ನು ಸಪ್ನಾವಿವಾಹವಾದರು. ಸಾಮಾನ್ಯವಾಗಿ ಉದ್ಯೋಗ ಸಿಕ್ಕ ಬಳಿಕ ಬಹುತೇಕ ಮಂದಿ ನಿರಾಳರಾಗುತ್ತಾರೆ. ಅದರಲ್ಲೂ ಮದುವೆಯಾದಬಳಿಕ ಸಾಕು ಎಂಬ ಭಾವನೆ ಮೂಡುತ್ತದೆ. ಆದರೆ ಸಪ್ನಾ ಅವರಿಗೆ ಮತ್ತಷ್ಟು ಕಲಿಯಬೇಕು, ಹೊಸತನಕ್ಕೆ ತೆರೆದುಕೊಳ್ಳಬೇಕು, ಸಾಧನೆಯ ಮತ್ತೊಂದು ಮಗ್ಗುಲು ಮುಟ್ಟಬೇಕು ಎಂಬ ಕನಸು ಮತ್ತಷ್ಟು ಚಿಗುರೊಡೆಯಿತು. ಇದಕ್ಕೆ ತಂದೆ, ತಾಯಿ, ಗಂಡ, ಅತ್ತೆ, ಮಾವ ಸೇರಿದಂತೆ ಸಂಪೂರ್ಣ ಕುಟುಂಬ ಬೆನ್ನೆಲುಬಾಗಿ ನಿಂತಿತು. ಇದಕ್ಕೆ ಪೂರಕವಾಗಿ ಉದ್ಯೋಗ ಮಾಡುತ್ತಿದ್ದ ಐಟಿ ಅಡಿಟಿಂಗ್ಕ್ಷೇತ್ರದಲ್ಲೇ ಮತ್ತಷ್ಟು ಅಧ್ಯಯನಕ್ಕೆ ಅವಕಾಶ ಸಿಕ್ಕಿತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಸಪ್ನಾ, ಅಧ್ಯಯನದಲ್ಲಿತೊಡಗಿಸಿಕೊಂಡರು. ಸರ್ಟಿಫೈಡ್ ಇನ್ ಫಾರ್ಮೇಶನ್ ಸಿಸ್ಟಮ್ ಅಡಿಟರ್ (ಸಿಐಎಸ್‌ಎ) ಪರೀಕ್ಷೆಗೆ ಸಿದ್ಧತೆ ನಡೆಸಿದರು. ಪರೀಕ್ಷೆಯು ಕಠಿಣ ಹಾಗೂ ಕ್ಲಿಷ್ಟಕರವಾಗಿರುವುದರಿಂದ ವಿಶ್ವದಲ್ಲಿ ಕೆಲವೇ ಕೆಲವು ಮಂದಿ ಬರೆಯುತ್ತಾರೆ. ಪರೀಕ್ಷೆಯಲ್ಲಿ ಸಪ್ನಾಅವರು ವಿಶ್ವಕ್ಕೆ ಟಾಪರ್ ಆಗಿ ಸಾಧನೆ ಮಾಡಿದ ಪ್ರಥಮ ಭಾರತೀಯ ಮಹಿಳೆ. 2022ರಲ್ಲಿ ಇವರ ಜತೆ ಜರ್ಮನಿಯ ಯುವಕನೊಬ್ಬಟಾಪರ್ ಸ್ಥಾನ ಹಂಚಿಕೊAಡಿದ್ದಾರೆ.

ಯುವ ಸಮುದಾಯಕ್ಕೆ ಮಾದರಿ: ಸಪ್ನಾ ಅವರು ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪರೀಕ್ಷೆಯ ಬಗ್ಗೆ ಮಾಹಿತಿಕಲೆಹಾಕಿ, ಬಿಡುವಿನ ಸಮಯದಲ್ಲಿ ತಜ್ಞರಿಂದ ಮಾರ್ಗದರ್ಶನ ಪಡೆದರು. ಒಂದೆಡೆ ಗಂಡ, ಮಕ್ಕಳನ್ನೊಳಗೊಂಡ ಕುಟುಂಬ, ಇನ್ನೊಂದೆಡೆ ಉದ್ಯೋಗ. ಇವೆರಡರ ಮಧ್ಯೆ ಉನ್ನತ ಶಿಕ್ಷಣವನ್ನು ಮುಂದುವರಿಸಿ ಯಶಸ್ಸು ಕಂಡ ಅವರ ಸಾಧನೆ ಯುವ ಸಮಾಜಕ್ಕೆಮಾದರಿಯಾಗಿದೆ.

ನನಗೆ ಬಾಲ್ಯದಿಂದಲೂ ಒಳ್ಳೆಯದಾಗಿ ಕಲಿತು ಸಾಧನೆ ಮಾಡಬೇಕೆಂಬ ಹಂಬಲ ಇತ್ತು. ಅದಕ್ಕೆ ಸರಿಯಾಗಿ ಪ್ರಾಥಮಿಕ ಮತ್ತುಪ್ರೌಢಶಿಕ್ಷಣ ಭದ್ರ ಅಡಿಪಾಯ ಒದಗಿಸಿತು. ಐಟಿ ಕ್ಷೇತ್ರಕ್ಕೆ ಹೋದ ಬಳಿಕ ಸಿಐಎಸ್‌ಎ ಪರೀಕ್ಷೆ ಬಗ್ಗೆ ಆಸಕ್ತಿ ಹುಟ್ಟಿತು. ಕುಟುಂಬ, ಮನೆಯವರ ಪ್ರೋತ್ಸಾಹದಿಂದ ಸಾಧನೆ ಸಾಧ್ಯವಾಗಿದೆ. ಇಂದಿನ ಯುವ ಸಮಾಜಕ್ಕೂ ನನ್ನ ಸಲಹೆ ಅವಕಾಶಗಳನ್ನುಬಳಸಿಕೊಂಡು ಸಾಧನೆ ಮಾಡೋಣ. ಸಾಮಾಜಿಕ ಜಾಲತಾಣದಲ್ಲಿ ಸಮಯ ವ್ಯರ್ಥ ಮಾಡುವ ಬದಲು ಅದರಲ್ಲಿ ಒಳ್ಳೆಯ ಅಂಶಸ್ವೀಕರಿಸಿದಾಗ ಯಾವುದೇ ಕ್ಷೇತ್ರದಲ್ಲಿ ಮುನ್ನಡೆದಾಗ ಯಶಸ್ಸು ನಿಶ್ಚಿತ.

ಸಪ್ನಾ ಪೂಜಾರಿ ಹೆಬ್ರಿ, ಸಿಐಎಸ್‌ಎ ಟಾಪರ್


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »