TOP STORIES:

ಸುವರ್ಣ ನ್ಯೂಸ್ ವರದಿಗಾರ ಭರತ್ ರಾಜ್ ಸನಿಲ್ ಗೆ TNIT ಬೆಸ್ಟ್ ರಿಪೋರ್ಟರ್ ಪ್ರಶಸ್ತಿ


ಮಾಧ್ಯಮ ಕ್ಷೇತ್ರದ ಸಾಧನೆಗೆ ಮಂಗಳೂರಿನ ಭರತ್ ರಾಜ್ ಗೆ ಬೆಸ್ಟ್ ರಿಪೋರ್ಟರ್ ಪ್ರಶಸ್ತಿ

ಮಂಗಳೂರು: ಮಾಧ್ಯಮ ಕ್ಷೇತ್ರದ ಸಾಧನೆ ಪರಿಗಣಿಸಿ ಕೊಡಲಾಗುವ ದಿ ನ್ಯೂ ಇಂಡಿಯನ್ ಟೈಮ್ಸ್ ಅವಾರ್ಡ್ಸ್ ನಲ್ಲಿ (The New India Time Award) ಏಷ್ಯಾನೆಟ್ ಸುವರ್ಣ ನ್ಯೂಸ್ ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರ ಭರತ್ ರಾಜ್ ಗೆ ಉತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಒಲಿದಿದೆ.

x

 

ಸತತ ನಾಲ್ಕನೇ ಆವೃತ್ತಿಯ TNIT ಮೀಡಿಯಾ ಅವಾರ್ಡ್ಸ್ ಕಾರ್ಯಕ್ರಮ ಬೆಂಗಳೂರಿನ (Bengaluru ) ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು. ಮಂಗಳೂರಿನ ಕುಂಪಲ ನಿವಾಸಿಯಾದ ಭರತ್ ರಾಜ್.ಕೆ.ಸನಿಲ್, ಪ್ರಸ್ತುತ ಏಷ್ಯಾನೆಟ್ ಸುವರ್ಣ ನ್ಯೂಸ್ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ಕಾಲಿಟ್ಟು 12 ವರ್ಷ ಸಂದಿದ್ದು, ಜಯಕಿರಣ ಕನ್ನಡ ದಿನಪತ್ರಿಕೆಯಲ್ಲಿ 5 ವರ್ಷ, ಬಿಟಿವಿ ನ್ಯೂಸ್ ನಲ್ಲಿ 3 ವರ್ಷ, ಪ್ರಸ್ತುತ ಏಷ್ಯಾನೆಟ್ ಸುವರ್ಣ ನ್ಯೂಸ್ ನಲ್ಲಿ 4 ವರ್ಷದಿಂದ ವರದಿಗಾರನಾಗಿದ್ದಾರೆ. ದ‌.ಕ ಜಿಲ್ಲೆಯ ಮಂಗಳೂರು ತಾಲೂಕಿನ ಪಂಡಿತ್ ಹೌಸ್ ನಲ್ಲಿ ಹುಟ್ಟಿದ ಭರತ್ ರಾಜ್, ಪ್ರಸ್ತುತ ಮಂಗಳೂರು ತಾಲೂಕಿನ ಕುಂಪಲ ಎಂಬಲ್ಲಿ ವಾಸ. ಎಸ್ಸೆಸ್ಸೆಲ್ಸಿವರೆಗೆ ಮಂಗಳೂರು ತಾಲೂಕಿನ ಬಬ್ಬುಕಟ್ಟೆ ಪ್ರೌಢಶಾಲೆಯಲ್ಲಿ ಶಿಕ್ಷಣ. ಆ ಬಳಿಕ ಉಳ್ಳಾಲದ ಭಾರತ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ. ಪಿಯುಸಿ ವೇಳೆ ಬೆಳಿಗ್ಗೆ ಹಾಲು ಪೇಪರ್ ಹಾಕಿಕೊಂಡು ದುಡಿಮೆ. ನಂತರ ಕುಟುಂಬದ ತೀವ್ರ ಆರ್ಥಿಕ ಸಮಸ್ಯೆಯಿಂದ ಓದು ಮುಂದುವರೆಸಲಾಗದೇ ಕೊರಿಯರ್ ಡೆಲಿವರಿ ಬಾಯ್ ಕೆಲಸಕ್ಕೆ ಸೇರ್ಪಡೆ. ಈ ವೇಳೆ ಓದಿನ ಆಸಕ್ತಿ ಇದ್ದ ಕಾರಣ ಮಂಗಳೂರಿನ ಬೆಸೆಂಟ್ ಸಂಜೆ ಕಾಲೇಜಿನಲ್ಲಿ ರಾತ್ರಿ ಕಲಿಕೆಯಲ್ಲಿ ದ್ವಿತೀಯ ಪಿಯುಸಿ ಪೂರ್ಣ. ಹಗಲಿನಲ್ಲಿ ಕೆಲಸ ‌ಮುಂದುವರೆಸಿಕೊಂಡೇ ಪಿಯುಸಿ ಪೂರ್ಣ. ಸಂಜೆ ಕಾಲೇಜಿನ ಶಿಕ್ಷಣದ ಜೊತೆಗೆ ಬೇರೆ ಬೇರೆ ಕ್ಷೇತ್ರಗಳಲ್ಲಿ ದುಡಿಮೆ.

ಪತ್ರಿಕೋದ್ಯಮಕ್ಕೆ ಪ್ರವೇಶ:

ಹಗಲು ಕೆಲಸ, ಸಂಜೆ ಕಾಲೇಜಿನಲ್ಲಿ ಪಿಯುಸಿ ಮಾಡುತ್ತಿದ್ದಾಗಲೇ ಪತ್ರಿಕೋದ್ಯಮದ ಕಡೆಗೆ ಸೆಳೆತ. ಸಂಜೆ ಕಾಲೇಜಿನಲ್ಲಿ ಪಿಯುಸಿ ಮುಗಿದ ಬೆನ್ನಲ್ಲೇ ಮಂಗಳೂರಿನ ಜಯಕಿರಣ ದಿನಪತ್ರಿಕೆಯಲ್ಲಿ ರಾತ್ರಿ ಉಪಸಂಪಾದಕನಾಗಿ ಕೆಲಸಕ್ಕೆ ಸೇರ್ಪಡೆ. 18ನೇ ವಯಸ್ಸಿನಲ್ಲೇ ಜಯಕಿರಣ ಪತ್ರಿಕೆಯಲ್ಲಿ ಉಪಸಂಪಾದಕ ವೃತ್ತಿ ಆರಂಭ. ಎರಡು ವರ್ಷ ಉಪಸಂಪಾದಕನಾಗಿದ್ದವನಿಗೆ ವರದಿಗಾರನಾಗಿ ಭಡ್ತಿ. ಆ ಬಳಿಕ ಅದೇ ಪತ್ರಿಕೆಯಲ್ಲಿ ಮೂರು ವರ್ಷಗಳ ಕಾಲ ಮಂಗಳೂರು ನಗರ ವರದಿಗಾರನಾಗಿ ಕೆಲಸ. ‌ಸುಮಾರು ಐದು ವರ್ಷಗಳ ಕಾಲ ಜಯಕಿರಣ ಪತ್ರಿಕೆಯಲ್ಲಿ ಕೆಲಸ ಮಾಡಿದ ಅನುಭವ. ಈ ಹೊತ್ತಲ್ಲೇ 2014ರಲ್ಲಿ ಆರಂಭವಾದ ಕನ್ನಡ ನ್ಯೂಸ್ ಚಾನೆಲ್ ಬಿಟಿವಿ ನ್ಯೂಸ್ ಗೆ ದ.ಕ ಜಿಲ್ಲಾ ವರದಿಗಾರನಾಗಿ ಆಯ್ಕೆ. ಬಿಟಿವಿ ಜಿಲ್ಲಾ ‌ವರದಿಗಾರನಾಗಿ ಸುಮಾರು ಮೂರು ವರ್ಷಗಳ ಕಾಲ ಸೇವೆ. ಆ ಬಳಿಕ 2017ರಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಸೇರ್ಪಡೆ. ಪ್ರಸ್ತುತ ನಾಲ್ಕು ವರ್ಷಗಳಿಂದ ಏಷ್ಯಾನೆಟ್ ಸುವರ್ಣ ‌ನ್ಯೂಸ್ ನಲ್ಲಿ ದ.ಕ ಜಿಲ್ಲಾ ವರದಿಗಾರರಾಗಿ ಕಾರ್ಯ. 18 ವರ್ಷ ವಯಸ್ಸಿನಲ್ಲಿ ‌ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿ ನಿರಂತರ 12 ವರ್ಷಗಳಿಂದ ಉಪಸಂಪಾದಕ ಕೆಲಸ ಹಾಗೂ ಹಲವು ವರ್ಷಗಳ ಕಾಲ ದ‌.ಕ ಜಿಲ್ಲೆಯ ಜಿಲ್ಲಾ ವರದಿಗಾರನಾಗಿ ಕಾರ್ಯ. ಬಿಟಿವಿ ನ್ಯೂಸ್ ಅವಧಿಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ಮೊಟ್ಟ ಮೊದಲ ಮುಖಾಮುಖಿ ಟಿವಿ ಸಂದರ್ಶನ ನಡೆಸಿದ್ದು, ಈ ವೇಳೆ ಬಿಟಿವಿ ನ್ಯೂಸ್ ನಿರೂಪಕ ಕೆಲಸಕ್ಕೆ ಅವಕಾಶ. ಹೀಗಾಗಿ ಬೆಂಗಳೂರಿನ ಬಿಟಿವಿ ಕಚೇರಿಯಲ್ಲಿ ಕೆಲ ಕಾಲ ನಿರೂಪಕ ತರಬೇತಿ ಪಡೆದಿದ್ದು, ಕಾರಣಾಂತರಗಳಿಂದ ಸುವರ್ಣ ನ್ಯೂಸ್ ದ‌‌.ಕ ಜಿಲ್ಲಾ ವರದಿಗಾರನಾಗಿ ಅವಕಾಶ ಸಿಕ್ಕ ಹಿನ್ನೆಲೆ ಮತ್ತೆ ಮಂಗಳೂರಿನಲ್ಲೇ ಕಾರ್ಯ. ವರದಿಗಾರನಾಗಿದ್ದುಕೊಂಡೇ ಕಲ್ಲಡ್ಕ ಪ್ರಭಾಕರ ಭಟ್, ಪೇಜಾವರ ವಿಶ್ವೇಶತೀರ್ಥ ಸ್ವಾಮೀಜಿ, ಮೋಹನ್ ಆಳ್ವಾ ಸೇರಿದಂತೆ ಕರಾವಳಿಯ ಹಲವು ಪ್ರಮುಖರ ಮುಖಾಮುಖಿ ಸಂದರ್ಶನ ನಡೆಸಿದ ಹೆಗ್ಗಳಿಕೆ.
ಸದ್ಯ ಟಿಐಎನ್ ಟಿ ಅವಾರ್ಡ್ಸ್‌ನಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ಗೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.2017ರಿಂದ ಆರಂಭವಾದ ಟಿಎನ್ ಐಟಿ ಮೀಡಿಯಾ ಅವಾರ್ಡ್ಸ್ ಸತತ 3 ವರ್ಷ ಯಶಸ್ವಿಯಾಗಿ ನಡೆದಿತ್ತು. 2019-20 ನೇ ಸಾಲಿನ ಪ್ರಶಸ್ತಿ ಪ್ರಧಾನಕ್ಕೆ ಕೊರೋನಾ ಅಡ್ಡಿಯಾಗಿತ್ತು. ಅನಿವಾರ್ಯವಾಗಿ ಕಾರ್ಯಕ್ರಮವನ್ನು ರದ್ದು ಮಾಡಲಾಗಿತ್ತು. ಇದೀಗ ಒಂದು ವರ್ಷದ ಅವಾರ್ಡ್ಸ್ ಬ್ರೇಕ್ ನ ಬಳಿಕ 2020-21 ನೇ ಸಾಲಿನ ಕಾರ್ಯಕ್ರಮವನ್ನು ಅರ್ಥಾತ್ 4 ನೇ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ನಡೆಸಲಾಗಿದೆ. ಮಾಧ್ಯಮ ಕ್ಷೇತ್ರದ ಸಾಧಕರನ್ನು ಗೌರವಿಸುವ ಟಿಎನ್ ಐಟಿ ಮೀಡಿಯಾ ಅವಾರ್ಡ್ಸ್ ನಲ್ಲಿ ಟಿವಿ ನಿರೂಪಕರು, ವರದಿಗಾರರು, ವಿಡಿಯೋ ಎಡಿಟರ್ ಗಳು, ವಾಯ್ಸ್ ಓವರ್ ಆರ್ಟಿಸ್ಟ್, ಕ್ಯಾಮರಾಮನ್ ಗಳು ಸೇರಿದಂತೆ ವಿವಿಧ ಕೆಟಗರಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ. ಜೊತೆಗೆ ಕೆಲವು ವಿಶೇಷ ಅವಾರ್ಡ್ಸ್ ಸಹ ನೀಡಲಾಗುತ್ತದೆ. ಎಲ್ಲಾ ವಿಭಾಗದಲ್ಲಿಯೂ ಪುರುಷ ಮತ್ತು ಮಹಿಳಾ ಸಾಧಕರನ್ನು ಗೌರವಿಸಲಾಗುತ್ತಿದೆ. ಈ ಬಾರಿಯ ಕಾರ್ಯಕ್ರಮದಲ್ಲಿ ಚಿತ್ರ ನಟರಾದ ರಾಘವೇಂದ್ರ ರಾಜ್ ಕುಮಾರ್, ನೆನಪಿರಲಿ ಪ್ರೇಮ್, ವಷಿಷ್ಠ ಸಿಂಹ, ಮೇಘನಾ ಗಾಂವ್ಕರ್, ನಿಖಿಲ್ ಕುಮಾರಸ್ವಾಮಿ, ದೊಡ್ಡಣ್ಣ, ಗಾಯಕಿ ಶಮಿತಾ ಮಲ್ನಾಡ್, ಸಾಹಿತಿ ದೊಡ್ಡರಂಗೇಗೌಡರು, ಸಿದ್ದಗಂಗಾ ಮಠದ ಶ್ರೀಗಳು ಸೇರಿ ಹಲವು ಗಣ್ಯರು ಹಾಜರಿದ್ದರು. ಇತರೆ ವಾಹಿನಿಗಳ ಹಲವಾರು ಮಂದಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿ ಪಡೆದರು.


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »