TOP STORIES:

FOLLOW US

ಸೆ.24 ರಂದು ಮಂಗಳೂರಿನ’ಕುಂಜತ್ತಬೈಲಿನಲ್ಲಿ ಬಿಲ್ಲವ ಹಾಸ್ಟೆಲ್’ ಉದ್ಘಾಟನೆ


ಮಂಗಳೂರು: “ಬ್ರಹ್ಮಶ್ರೀ ನಾರಾಯಣಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ,

ಸಂಘಟನೆಯಿಂದ ಬಲಯುತರಾಗಿರಿ ಎಂಬ ಧೈಯೋದ್ದೇಶದೊಂದಿಗೆ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್‌ ನಿಂದ

ಕುಂಜತ್ತಬೈಲಿನಲ್ಲಿ ದಿ.ದಾಮೋದರ ಆರ್. ಸುವರ್ಣ ಸ್ಮಾರಕಬಿಲ್ಲವ ಹಾಸ್ಟೆಲ್ ನಿರ್ಮಿಸಲಾಗಿದ್ದು ಸೆ.24 ರಂದುಲೋಕಾರ್ಪಣೆಗೊಳ್ಳಲಿದೆಎಂದು ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಗರದ ಪುರಭವನದಲ್ಲಿ ಲೋಕಾರ್ಪಣಾ ಸಮಾರಂಭ

ನಡೆಯಲಿದ್ದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ದೀಪ ಪ್ರಜ್ವಲನೆಯನ್ನು ಮಾಜಿಕೇಂದ್ರ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿಯವರು ನಡೆಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‌ಚಂದ್ರಡಿ. ಸುವರ್ಣ ವಹಿಸಲಿದ್ದಾರೆ. ಸ್ಮರಣ ಸಂಚಿಕೆಯನ್ನು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಬಿಡುಗಡೆಗೊಳಿಸಲಿದ್ದಾರೆ.

ಮುಖ್ಯ ಅಥಿತಿಗಳಾಗಿ ಮಾಜಿ ಸಂಸದ ಡಿ.ವಿ. ಸದಾನಂದ ಗೌಡ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವಿ. ಸುನೀಲ್ ಕುಮಾರ್, ಉಮಾನಾಥ್ ಕೋಟ್ಯಾನ್, ವೇದವ್ಯಾಸ್‌ ಕಾಮತ್‌, ಡಾ.ವೈ. ಭರತ್ ಶೆಟ್ಟಿ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಮಾಜಿ ಮೇಯರ್ ಜಯಾನಂದ ಅಂಚನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಮಾಜಿ ಮುಖ್ಯ ಸಚೇತಕ ಕೆ. ವಸಂತ ಬಂಗೇರ, ಮಾಜಿ ಶಾಸಕ ಗೋಪಾಲ ಪೂಜಾರಿ ಉಪಸ್ಥಿತರಿರಲಿದ್ದಾರೆ. ಗೌರವ ಉಪಸ್ಥಿತಿಯಲ್ಲಿ ಉದ್ಯಮಿ ಜಯರಾಮ ಬನಾನ್, ಬನಾನ್, ಸಣ್ಣ ಕೈಗಾರಿಕಾ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಉದಯಚಂದ್ರ ಡಿ. ಸುವರ್ಣ, ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ,ಉದ್ಯಮಿ ಜೆ.ಪಿ. ಸುಧಾಕರ್‌, ಬಿಲ್ಲವ ಚೇಂಬರ್ಆಫ್ ಕಾಮರ್ಸ್ ಅಧ್ಯಕ್ಷ ಎನ್.ಟಿ. ಪೂಜಾರಿ, ಮುಂಬಯಿ ಬಿಲ್ಲವ ಅಸೋಸಿಯೇಶನ್ ಅಧ್ಯಕ್ಷ ಹರೀಶ್ ಜೆ. ಅಮೀನ್, ಬೆಂಗಳೂರು ಬಿಲ್ಲವಅಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ದುಬಾಯಿ ಬಿಲ್ಲವ ಬಳಗಮಹಿಳಾ ವಿಭಾಗದ ಅಧ್ಯಕ್ಷೆ ಗೀತಾ ಸುವರ್ಣ, ಕಾರ್ಪೊರೇಟರ್  ಶರತ್ ಕುಮಾರ್ ಕುಮಾರ್ ಉಪಸ್ಥಿತರಿರಲಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಯಮಿ  ಸುಶೀರ್ ಕುಮಾರ್, ಇಂಜಿನಿಯರ್ ಬಾಬ ಅಲಂಕಾರ್ಅವರನ್ನು ಸನ್ಮಾನಿಸಲಾಗುವುದುಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ಬಿಲ್ಲವರ ಯುನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ಅಖಿಲ ಭಾರತ ಬಿಲ್ಲವರಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ, ಸುಖಲಾಕ್ಷಿ ಸುವರ್ಣ, ಕೋಶಾಧಿಕಾರಿ ಕಾಶೀನಾಥ್, ಜೊತೆ ಕಾರ್ಯದರ್ಶಿಯೋಗೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜೀವನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. 5.25 ಕೋಟಿ ರೂ. ವೆಚ್ಚದ ಕಟ್ಟಡ!

ಮಂಗಳೂರು ನಗರದಿ೦ದ 6 ಕಿ.ಮೀ. ದೂರದ ಕುಂಜತ್ತಬೈಲ್‌ನ ಪ್ರಶಾಂತ ವಾತಾವರಣದಲ್ಲಿ ಸುಮಾರು 1 ಎಕರೆ ವ್ಯಾಪ್ತಿಯಲ್ಲಿ 5.25 ಕೋಟಿ ರೂ. ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಿಸಲಾಗಿದ್ದು ಬಿಲ್ಲವ ಹಾಗೂ ಹಿಂದುಳಿದ ಸಮುದಾಯದಲ್ಲಿ ಉನ್ನತ ವೃತ್ತಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳ ಅನುಕೂಲತೆಗಾಗಿ ಹಾಸ್ಟೆಲ್ ನಿರ್ಮಿಸಲಾಗಿದೆ. ಸುಮಾರು 5 ಮಹಡಿಯ ಕಟ್ಟಡ ಇದಾಗಿದ್ದು ಒಟ್ಟು 19,500 ಚದರ ಅಡಿ ವಿಸ್ತೀರ್ಣ ಹೊಂದಿದೆ. ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಗ್ರಂಥಾಲಯ ಹಾಗೂ ವಸತಿ

ಕೊಠಡಿಗಳು, 1ನೇ ಹಾಗೂ 3ನೇ ಮಹಡಿಯಲ್ಲಿ ವಸತಿ ಕೊಠಡಿ ಮತ್ತು 2ನೇ ಮಹಡಿಯಲ್ಲಿ ಸಭಾಂಗಣ ಒಳಗೊಂಡಿದೆ. ತಳಮಹಡಿಯಲ್ಲಿ ಅಡುಗೆ ಕೋಣೆ, ಉಗ್ರಾಣ ಕೋಣೆಗಳಿವೆ. ಸುಮಾರು 100 ಮಂದಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾದ ವಸತಿ ಸೌಲಭ್ಯವಿದ್ದು ವೃತ್ತಿ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆಯಾಗಿದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »