TOP STORIES:

ಸೈಬರ್ ಅಟ್ಯಾಕ್‌ಗಳನ್ನು ಕಡಿಮೆ ಮಾಡಲು ಆಪಲ್ ತರುತ್ತಿದೆ ಹೊಸ ಲಾಕ್‌ಡೌನ್ ಮೋಡ್


ವಾಷಿಂಗ್ಟನ್: ಆಪಲ್ ಕಂಪನಿ ತನ್ನ ಐಫೋನ್, ಪ್ಯಾಡ್, ಹಾಗೂ ಮ್ಯಾಕ್ ಸಾಧನಗಳಿಗಾಗಿ ಹೊಸ ಭದ್ರತಾ ಫೀಚರ್‌ಅನ್ನುಹೊರತರುತ್ತಿದೆ. ಇದು ಮುಖ್ಯವಾಗಿ ಉನ್ನತ ಪ್ರೊಫೈಲ್ ಬಳಕೆದಾರರ ಮೇಲಿನ ಉದ್ದೇಶಿತ ಸೈಬರ್ ಅಟ್ಯಾಕ್‌ಗಳನ್ನು ತಡೆಯಲುವಿನ್ಯಾಸಗೊಳಿಸಲಾಗಿದೆ.

ಲಾಕ್‌ಡೌನ್ ಮೋಡ್ ಹೆಸರಿನ ಹೊಸ ಐಚ್ಛಿಕ(ಆಪ್ಶನಲ್) ಫೀಚರ್, ಕೆಲವು ಉನ್ನತ ವ್ಯಕ್ತಿಗಳು ತಮ್ಮ ಆಪಲ್ ಡಿವೈಸ್‌ಗಳಲ್ಲಿಬಳಸಬಹುದಾಗಿದ್ದು, ಇದು ಸೈಬರ್ ಅಟ್ಯಾಕ್‌ಗಳಿಂದ ರಕ್ಷಣೆ ನೀಡುತ್ತದೆ ಎಂದು ಕಂಪನಿ ತಿಳಿಸಿದೆ. ಇದು ಬಳಕೆದಾರರಸಾಧನಗಳನ್ನು ಹ್ಯಾಕ್ ಮಾಡುವುದನ್ನು ಕಡಿಮೆಗೊಳಿಸುತ್ತದೆ ಎಂದು ಹೇಳಿದೆ.

ಕಳೆದ ಹಲವು ವರ್ಷಗಳಿಂದ ಉನ್ನತ ವ್ಯಕ್ತಿಗಳ ಡಿವೈಸ್‌ಗಳನ್ನು ಹ್ಯಾಕ್ ಮಾಡಿರುವಂತಹ ಹಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಕಂಪನಿ ಸ್ಪೈವೇರ್ ನಂತಹ ದಾಳಿಯನ್ನು ಕಡಿಮೆ ಮಾಡುವ ಉದ್ದೇಶದಿಂದ ಹೊಸ ಫೀಚರ್ ಅನ್ನು ಹೊರತಂದಿದೆಎಂದು ತಿಳಿಸಿದೆ.

ಪ್ರಪಂಚದಾದ್ಯಂತ ಸುಮಾರು 150 ದೇಶಗಳಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳನ್ನು ಗುರಿಪಡಿಸಿಕೊಂಡು ಸೈಬರ್ ದಾಳಿಗಳುನಡೆಯುತ್ತವೆ. ಇದಕ್ಕಾಗಿ ಲಾಕ್‌ಡೌನ್ ಮೋಡ್ ಫೀಚರ್ ಅನ್ನು ತರಲಾಗಿದ್ದು, ಇದನ್ನು ಬಳಕೆದಾರರಿಗೆ ತಿಳಿಸುವ ವ್ಯವಸ್ಥೆಯನ್ನುಮಾಡಲಾಗುತ್ತಿದೆ ಎಂದು ಹೇಳಿದೆ.

ವಿಡಿಯೋ ಸಿಸಿ ಟಿ

ವರದಿಗಳ ಪ್ರಕಾರ ಲಾಕ್‌ಡೌನ್ ಮೋಡ್, ಆಪಲ್ ಡಿವೈಸ್‌ಗಳಲ್ಲಿ ಮೆಸೇಜಿಂಗ್ ಆಪ್‌ಗಳ ಅಟ್ಯಾಚ್‌ಮೆಂಟ್‌ಗಳನ್ನು ಬ್ಲಾಕ್ಮಾಡುತ್ತದೆ. ಇವು ಹ್ಯಾಕರ್‌ಗಳಿಗೆ ಡಿವೈಸ್‌ಗಳನ್ನು ಹ್ಯಾಕ್‌ಮಾಡಲು ಲಭ್ಯವಿರುವ ಸುಲಭದ ಹಾಗೂ ಮುಖ್ಯವಾದ ವಿಧಾನವಾಗಿದೆ.

ಆಪಲ್ ಮುಂಬರುವ ಐಒಎಸ್ 16, ಐಪ್ಯಾಡ್ ಐಎಸ್ 16 ಹಾಗೂ ಮ್ಯಾಕ್ ಒಎಸ್‌ಗಳಲ್ಲಿ ನವೀಕರಣದ ಭಾಗವಾಗಿ ಲಾಕ್‌ಡೌನ್ಮೋಡ್‌ಅನ್ನು ಬಿಡುಗಡೆ ಮಾಡಲು ಯೋಜಿಸಿದೆ. ಫೀಚರ್ ಸದ್ಯ ಬೀಟಾ ಆವೃತ್ತಿಯಲ್ಲಿ ಪರೀಕ್ಷೆ ನಡೆಯುತ್ತಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »