TOP STORIES:

FOLLOW US

ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಸಾಧನೆಯ ಹಾದಿಯಲ್ಲಿ ಬಿಲ್ಲವ ಪ್ರತಿಭೆ ಅಂಚನ್ ಗೀತಾ


“ಅನುಭವಕ್ಕಿಂತ ಮಿಗಿಲಾದುದು ಏನು ಇಲ್ಲ ” ಎಂಬ ಮಾತಿದೆ ಅಂತೆಯೇ ತಾನು ಅನುಭವಿಸಿದ ನೋವು , ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಬಿಲ್ಲವ ಪ್ರತಿಭೆ ಅಂಚನ್ ಗೀತಾ.ಇವರು ಅಣ್ಣಿ ಅಂಚನ್ ಹಾಗೂ ಶ್ರೀಮತಿ ಭವಾನಿ ಪೂಜಾರ್ತಿಯವರ ಪುತ್ರಿ. ಹುಟ್ಟಿದ್ದು ಮಾಯಾನಗರಿ ಮುಂಬಯಿಯಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಂಬಯಿಯಲ್ಲಿ , ಪ್ರೌಢ ಶಿಕ್ಷಣವನ್ನು ನೀರುಡೆಯಲ್ಲಿ, ಪಿಯುಸಿ ಯನ್ನು ಕಟೀಲು ಕಾಲೇಜಿನಲ್ಲಿ ಪೂರೈಸಿ ನಂತರ ಆಳ್ವಾಸ್ ನಲ್ಲಿ ಪತ್ರಿಕೋದ್ಯಮ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ನಂತರ ಮೈಸೂರಿನಲ್ಲಿ ಎಂ.ಎ ಜರ್ನಲಿಸಂ , ಬೆಂಗಳೂರಿನಲ್ಲಿ ಎಂ.ಎ ಇಂಗ್ಲಿಷ್ ಲಿಟರೇಚರ್ ಮುಗಿಸಿ ಇವರು ಸತತ ಮೂರು ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

“ಯಾವುದೇ ಯಶಸ್ವಿನ ದಾರಿಯ ಪ್ರಾರಂಭ ಮೊದಲು ಶೂನ್ಯದಿಂದಲೇ ಆರಂಭವಾಗುವುದು.” ಅಂತೆಯೇ 2010 ರಲ್ಲಿ ಏಕಾಂಗಿಯಾಗಿ ಬೆಂಗಳೂರಿನತ್ತ ಪಯಣಿಸಿದ ಗೀತಾರವರಿಗೆ ಆಗ ಬೆಂಗಳೂರು ನಗರ ಜೀವನದ ಅರಿವೇ ಇರಲಿಲ್ಲ ಆ ಸಂದರ್ಭದಲ್ಲಿ ಸಹಕರಿಸಿದ ಅವರ ಜರ್ನಲಿಸಂ ಶಿಕ್ಷಕಿ ಮೌಲ್ಯ ಜೀವನ್ ರವನ್ನು ಪ್ರತಿ ಬಾರಿ ಸ್ಮರಿಸುತ್ತಾರೆ. ಮುಂದೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲಿ ಒಂದು ಕೋರ್ಸ್ ಶಿಕ್ಷಣ ಪಡೆಯುತ್ತಿರುವಾಗ ಬೆಳಗ್ಗೆ ಕ್ಲಾಸ್ ಪಡೆದು ಮಧ್ಯಾಹ್ನದ ನಂತರ ಏರ್ ಟೇಲ್ ಕಂಪನಿಯ ಲ್ಲಿ ಕೆಲಸ ಮಾಡುವ ಮೂಲಕ ಬೆಂಗಳೂರಿನಲ್ಲಿ ಜೀವನ ನಡೆಸಿದರು.

ಅಂಚನ್ ಗೀತಾರವರು ತಮ್ಮ ಜೀವನದ ಪ್ರತಿ ಕಷ್ಟ , ನೋವನ್ನು ಮರೆಸುತ್ತಿದ್ದದ್ದು ಅದು ನನ್ನ ತಂದೆ ತಾಯಿ ಹಾಗೂ ಸಹೋದರಿಯರ ಪ್ರೀತಿ, ಮತ್ತು ಸದಾ ಧೈರ್ಯ ತುಂಬೋ ಸ್ನೇಹಿತೆಯರು ಎಂದು ಹೇಳುತ್ತಾರೆ. ಅಲ್ಲದೆ ನನ್ನ ತಂದೆ ತಾಯಿ ಅನುಭವಿಸಿದ ನೋವು ನನಗೆ ಆತ್ಮವಿಶ್ವಾಸವನ್ನು ಕಲಿಸಿಕೊಟ್ಟಿದೆ ಎನ್ನುತ್ತಾರೆ. ಮುಂದೆ 2010 ರಿಂದ ಮಾಧ್ಯಮದಲ್ಲಿ ತಮ್ಮ ಪಯಣ ಆರಂಭಿಸಿದ ಇವರು ಸುಮಾರು 9 ವರ್ಷಗಳ ಕಾಲ ಸುವರ್ಣ ನ್ಯೂಸ್, ಕಸ್ತೂರಿ ನ್ಯೂಸ್, ಪ್ರಜಾ ಟಿವಿ ಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇವರು ಮಾಡೆಲಿಂಗ್ ಕ್ಷೇತ್ರದಲ್ಲೂ ಮಿಂಚಿದ್ದು ಹೆಮ್ಮೆಯ ಸಂಗತಿಯಾಗಿದೆ.ಅಷ್ಟೇ ಅಲ್ಲದೆ ತುಳು ,ಕನ್ನಡ ಸಿನಿಮಾದಲ್ಲಿ ಅಭಿನಯಿಸಿರುವ ಇವರು ಸುವರ್ಣದಲ್ಲಿ ಪ್ರಸಾರವಾಗುತ್ತಿದ್ದ ಶ್ ರಿಯಾಲಿಟಿ ಶೋ ನಲ್ಲೂ ಭಾಗವಹಿಸಿದ್ದಾರೆ. ಬಾಲಿವುಡ್ ತಾರೆಯರಾದ ಅನಿಲ್ ಕಪೂರ್, ಸುನಿಲ್ ಶೆಟ್ಟಿ ಯವರ ಜೊತೆ ಇಂಟರ್ ವ್ಯೂ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ. ಅಷ್ಟೆಅಲ್ಲ ಇವರ ಹಲವಾರು ಕವನ ಸಂಕಲನಗಳು ಬಿಡುಗಡೆಯಾಗಿದೆ.

ಪ್ರಸ್ತುತ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪತಿ ರವಿ ಶಿವರಾಮ್ ಪ್ರತಿ ಹೆಜ್ಜೆಯಲ್ಲೂ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎನ್ನುತ್ತಾರೆ‌. ಅಲ್ಲದೆ ತಮ್ಮ ಸಂಬಳದಲ್ಲಿ ಒಂದಷ್ಟು ಪಾಲನ್ನು ವೃಧ್ದಾಶ್ರಮಕ್ಕೆ ನೀಡುತ್ತಿದ್ದು ಇದು ಇವರ ಸಮಾಜಪರ ಕಾಳಜಿಯನ್ನು ಪ್ರತಿನಿಧಿಸುತ್ತದೆ.

ಹೀಗೆ ಸಾಧನೆಯ ಹಾದಿಯಲಿ ಸಾಗುತ್ತಿರುವ ಅಂಚನ್ ಗೀತಾರವರ ಬದುಕು ಉಜ್ವಲವಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದೇ ನಮ್ಮೆಲ್ಲರ ಆಶಯ.

Email us: billavaswarriors@gmail.com


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »