TOP STORIES:

FOLLOW US

ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಸಾಧನೆಯ ಹಾದಿಯಲ್ಲಿ ಬಿಲ್ಲವ ಪ್ರತಿಭೆ ಅಂಚನ್ ಗೀತಾ


“ಅನುಭವಕ್ಕಿಂತ ಮಿಗಿಲಾದುದು ಏನು ಇಲ್ಲ ” ಎಂಬ ಮಾತಿದೆ ಅಂತೆಯೇ ತಾನು ಅನುಭವಿಸಿದ ನೋವು , ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಬಿಲ್ಲವ ಪ್ರತಿಭೆ ಅಂಚನ್ ಗೀತಾ.ಇವರು ಅಣ್ಣಿ ಅಂಚನ್ ಹಾಗೂ ಶ್ರೀಮತಿ ಭವಾನಿ ಪೂಜಾರ್ತಿಯವರ ಪುತ್ರಿ. ಹುಟ್ಟಿದ್ದು ಮಾಯಾನಗರಿ ಮುಂಬಯಿಯಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಂಬಯಿಯಲ್ಲಿ , ಪ್ರೌಢ ಶಿಕ್ಷಣವನ್ನು ನೀರುಡೆಯಲ್ಲಿ, ಪಿಯುಸಿ ಯನ್ನು ಕಟೀಲು ಕಾಲೇಜಿನಲ್ಲಿ ಪೂರೈಸಿ ನಂತರ ಆಳ್ವಾಸ್ ನಲ್ಲಿ ಪತ್ರಿಕೋದ್ಯಮ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ನಂತರ ಮೈಸೂರಿನಲ್ಲಿ ಎಂ.ಎ ಜರ್ನಲಿಸಂ , ಬೆಂಗಳೂರಿನಲ್ಲಿ ಎಂ.ಎ ಇಂಗ್ಲಿಷ್ ಲಿಟರೇಚರ್ ಮುಗಿಸಿ ಇವರು ಸತತ ಮೂರು ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

“ಯಾವುದೇ ಯಶಸ್ವಿನ ದಾರಿಯ ಪ್ರಾರಂಭ ಮೊದಲು ಶೂನ್ಯದಿಂದಲೇ ಆರಂಭವಾಗುವುದು.” ಅಂತೆಯೇ 2010 ರಲ್ಲಿ ಏಕಾಂಗಿಯಾಗಿ ಬೆಂಗಳೂರಿನತ್ತ ಪಯಣಿಸಿದ ಗೀತಾರವರಿಗೆ ಆಗ ಬೆಂಗಳೂರು ನಗರ ಜೀವನದ ಅರಿವೇ ಇರಲಿಲ್ಲ ಆ ಸಂದರ್ಭದಲ್ಲಿ ಸಹಕರಿಸಿದ ಅವರ ಜರ್ನಲಿಸಂ ಶಿಕ್ಷಕಿ ಮೌಲ್ಯ ಜೀವನ್ ರವನ್ನು ಪ್ರತಿ ಬಾರಿ ಸ್ಮರಿಸುತ್ತಾರೆ. ಮುಂದೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲಿ ಒಂದು ಕೋರ್ಸ್ ಶಿಕ್ಷಣ ಪಡೆಯುತ್ತಿರುವಾಗ ಬೆಳಗ್ಗೆ ಕ್ಲಾಸ್ ಪಡೆದು ಮಧ್ಯಾಹ್ನದ ನಂತರ ಏರ್ ಟೇಲ್ ಕಂಪನಿಯ ಲ್ಲಿ ಕೆಲಸ ಮಾಡುವ ಮೂಲಕ ಬೆಂಗಳೂರಿನಲ್ಲಿ ಜೀವನ ನಡೆಸಿದರು.

ಅಂಚನ್ ಗೀತಾರವರು ತಮ್ಮ ಜೀವನದ ಪ್ರತಿ ಕಷ್ಟ , ನೋವನ್ನು ಮರೆಸುತ್ತಿದ್ದದ್ದು ಅದು ನನ್ನ ತಂದೆ ತಾಯಿ ಹಾಗೂ ಸಹೋದರಿಯರ ಪ್ರೀತಿ, ಮತ್ತು ಸದಾ ಧೈರ್ಯ ತುಂಬೋ ಸ್ನೇಹಿತೆಯರು ಎಂದು ಹೇಳುತ್ತಾರೆ. ಅಲ್ಲದೆ ನನ್ನ ತಂದೆ ತಾಯಿ ಅನುಭವಿಸಿದ ನೋವು ನನಗೆ ಆತ್ಮವಿಶ್ವಾಸವನ್ನು ಕಲಿಸಿಕೊಟ್ಟಿದೆ ಎನ್ನುತ್ತಾರೆ. ಮುಂದೆ 2010 ರಿಂದ ಮಾಧ್ಯಮದಲ್ಲಿ ತಮ್ಮ ಪಯಣ ಆರಂಭಿಸಿದ ಇವರು ಸುಮಾರು 9 ವರ್ಷಗಳ ಕಾಲ ಸುವರ್ಣ ನ್ಯೂಸ್, ಕಸ್ತೂರಿ ನ್ಯೂಸ್, ಪ್ರಜಾ ಟಿವಿ ಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇವರು ಮಾಡೆಲಿಂಗ್ ಕ್ಷೇತ್ರದಲ್ಲೂ ಮಿಂಚಿದ್ದು ಹೆಮ್ಮೆಯ ಸಂಗತಿಯಾಗಿದೆ.ಅಷ್ಟೇ ಅಲ್ಲದೆ ತುಳು ,ಕನ್ನಡ ಸಿನಿಮಾದಲ್ಲಿ ಅಭಿನಯಿಸಿರುವ ಇವರು ಸುವರ್ಣದಲ್ಲಿ ಪ್ರಸಾರವಾಗುತ್ತಿದ್ದ ಶ್ ರಿಯಾಲಿಟಿ ಶೋ ನಲ್ಲೂ ಭಾಗವಹಿಸಿದ್ದಾರೆ. ಬಾಲಿವುಡ್ ತಾರೆಯರಾದ ಅನಿಲ್ ಕಪೂರ್, ಸುನಿಲ್ ಶೆಟ್ಟಿ ಯವರ ಜೊತೆ ಇಂಟರ್ ವ್ಯೂ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ. ಅಷ್ಟೆಅಲ್ಲ ಇವರ ಹಲವಾರು ಕವನ ಸಂಕಲನಗಳು ಬಿಡುಗಡೆಯಾಗಿದೆ.

ಪ್ರಸ್ತುತ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪತಿ ರವಿ ಶಿವರಾಮ್ ಪ್ರತಿ ಹೆಜ್ಜೆಯಲ್ಲೂ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎನ್ನುತ್ತಾರೆ‌. ಅಲ್ಲದೆ ತಮ್ಮ ಸಂಬಳದಲ್ಲಿ ಒಂದಷ್ಟು ಪಾಲನ್ನು ವೃಧ್ದಾಶ್ರಮಕ್ಕೆ ನೀಡುತ್ತಿದ್ದು ಇದು ಇವರ ಸಮಾಜಪರ ಕಾಳಜಿಯನ್ನು ಪ್ರತಿನಿಧಿಸುತ್ತದೆ.

ಹೀಗೆ ಸಾಧನೆಯ ಹಾದಿಯಲಿ ಸಾಗುತ್ತಿರುವ ಅಂಚನ್ ಗೀತಾರವರ ಬದುಕು ಉಜ್ವಲವಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದೇ ನಮ್ಮೆಲ್ಲರ ಆಶಯ.

Email us: billavaswarriors@gmail.com


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »