TOP STORIES:

ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಸಾಧನೆಯ ಹಾದಿಯಲ್ಲಿ ಬಿಲ್ಲವ ಪ್ರತಿಭೆ ಅಂಚನ್ ಗೀತಾ


“ಅನುಭವಕ್ಕಿಂತ ಮಿಗಿಲಾದುದು ಏನು ಇಲ್ಲ ” ಎಂಬ ಮಾತಿದೆ ಅಂತೆಯೇ ತಾನು ಅನುಭವಿಸಿದ ನೋವು , ಸೋಲನ್ನು ಪಾಠವನ್ನಾಗಿ, ಗೆಲುವು, ಸಹಕಾರವನ್ನು ಮಾರ್ಗದರ್ಶನವನ್ನಾಗಿ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ಬಿಲ್ಲವ ಪ್ರತಿಭೆ ಅಂಚನ್ ಗೀತಾ.ಇವರು ಅಣ್ಣಿ ಅಂಚನ್ ಹಾಗೂ ಶ್ರೀಮತಿ ಭವಾನಿ ಪೂಜಾರ್ತಿಯವರ ಪುತ್ರಿ. ಹುಟ್ಟಿದ್ದು ಮಾಯಾನಗರಿ ಮುಂಬಯಿಯಲ್ಲಿ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮುಂಬಯಿಯಲ್ಲಿ , ಪ್ರೌಢ ಶಿಕ್ಷಣವನ್ನು ನೀರುಡೆಯಲ್ಲಿ, ಪಿಯುಸಿ ಯನ್ನು ಕಟೀಲು ಕಾಲೇಜಿನಲ್ಲಿ ಪೂರೈಸಿ ನಂತರ ಆಳ್ವಾಸ್ ನಲ್ಲಿ ಪತ್ರಿಕೋದ್ಯಮ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ನಂತರ ಮೈಸೂರಿನಲ್ಲಿ ಎಂ.ಎ ಜರ್ನಲಿಸಂ , ಬೆಂಗಳೂರಿನಲ್ಲಿ ಎಂ.ಎ ಇಂಗ್ಲಿಷ್ ಲಿಟರೇಚರ್ ಮುಗಿಸಿ ಇವರು ಸತತ ಮೂರು ಪದವಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

“ಯಾವುದೇ ಯಶಸ್ವಿನ ದಾರಿಯ ಪ್ರಾರಂಭ ಮೊದಲು ಶೂನ್ಯದಿಂದಲೇ ಆರಂಭವಾಗುವುದು.” ಅಂತೆಯೇ 2010 ರಲ್ಲಿ ಏಕಾಂಗಿಯಾಗಿ ಬೆಂಗಳೂರಿನತ್ತ ಪಯಣಿಸಿದ ಗೀತಾರವರಿಗೆ ಆಗ ಬೆಂಗಳೂರು ನಗರ ಜೀವನದ ಅರಿವೇ ಇರಲಿಲ್ಲ ಆ ಸಂದರ್ಭದಲ್ಲಿ ಸಹಕರಿಸಿದ ಅವರ ಜರ್ನಲಿಸಂ ಶಿಕ್ಷಕಿ ಮೌಲ್ಯ ಜೀವನ್ ರವನ್ನು ಪ್ರತಿ ಬಾರಿ ಸ್ಮರಿಸುತ್ತಾರೆ. ಮುಂದೆ ಬೆಂಗಳೂರಿನ ಭಾರತೀಯ ವಿದ್ಯಾಭವನದಲಿ ಒಂದು ಕೋರ್ಸ್ ಶಿಕ್ಷಣ ಪಡೆಯುತ್ತಿರುವಾಗ ಬೆಳಗ್ಗೆ ಕ್ಲಾಸ್ ಪಡೆದು ಮಧ್ಯಾಹ್ನದ ನಂತರ ಏರ್ ಟೇಲ್ ಕಂಪನಿಯ ಲ್ಲಿ ಕೆಲಸ ಮಾಡುವ ಮೂಲಕ ಬೆಂಗಳೂರಿನಲ್ಲಿ ಜೀವನ ನಡೆಸಿದರು.

ಅಂಚನ್ ಗೀತಾರವರು ತಮ್ಮ ಜೀವನದ ಪ್ರತಿ ಕಷ್ಟ , ನೋವನ್ನು ಮರೆಸುತ್ತಿದ್ದದ್ದು ಅದು ನನ್ನ ತಂದೆ ತಾಯಿ ಹಾಗೂ ಸಹೋದರಿಯರ ಪ್ರೀತಿ, ಮತ್ತು ಸದಾ ಧೈರ್ಯ ತುಂಬೋ ಸ್ನೇಹಿತೆಯರು ಎಂದು ಹೇಳುತ್ತಾರೆ. ಅಲ್ಲದೆ ನನ್ನ ತಂದೆ ತಾಯಿ ಅನುಭವಿಸಿದ ನೋವು ನನಗೆ ಆತ್ಮವಿಶ್ವಾಸವನ್ನು ಕಲಿಸಿಕೊಟ್ಟಿದೆ ಎನ್ನುತ್ತಾರೆ. ಮುಂದೆ 2010 ರಿಂದ ಮಾಧ್ಯಮದಲ್ಲಿ ತಮ್ಮ ಪಯಣ ಆರಂಭಿಸಿದ ಇವರು ಸುಮಾರು 9 ವರ್ಷಗಳ ಕಾಲ ಸುವರ್ಣ ನ್ಯೂಸ್, ಕಸ್ತೂರಿ ನ್ಯೂಸ್, ಪ್ರಜಾ ಟಿವಿ ಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇವರು ಮಾಡೆಲಿಂಗ್ ಕ್ಷೇತ್ರದಲ್ಲೂ ಮಿಂಚಿದ್ದು ಹೆಮ್ಮೆಯ ಸಂಗತಿಯಾಗಿದೆ.ಅಷ್ಟೇ ಅಲ್ಲದೆ ತುಳು ,ಕನ್ನಡ ಸಿನಿಮಾದಲ್ಲಿ ಅಭಿನಯಿಸಿರುವ ಇವರು ಸುವರ್ಣದಲ್ಲಿ ಪ್ರಸಾರವಾಗುತ್ತಿದ್ದ ಶ್ ರಿಯಾಲಿಟಿ ಶೋ ನಲ್ಲೂ ಭಾಗವಹಿಸಿದ್ದಾರೆ. ಬಾಲಿವುಡ್ ತಾರೆಯರಾದ ಅನಿಲ್ ಕಪೂರ್, ಸುನಿಲ್ ಶೆಟ್ಟಿ ಯವರ ಜೊತೆ ಇಂಟರ್ ವ್ಯೂ ಮಾಡಿದ ಹೆಗ್ಗಳಿಕೆ ಇವರದ್ದಾಗಿದೆ. ಅಷ್ಟೆಅಲ್ಲ ಇವರ ಹಲವಾರು ಕವನ ಸಂಕಲನಗಳು ಬಿಡುಗಡೆಯಾಗಿದೆ.

ಪ್ರಸ್ತುತ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರಿಗೆ ಪತಿ ರವಿ ಶಿವರಾಮ್ ಪ್ರತಿ ಹೆಜ್ಜೆಯಲ್ಲೂ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎನ್ನುತ್ತಾರೆ‌. ಅಲ್ಲದೆ ತಮ್ಮ ಸಂಬಳದಲ್ಲಿ ಒಂದಷ್ಟು ಪಾಲನ್ನು ವೃಧ್ದಾಶ್ರಮಕ್ಕೆ ನೀಡುತ್ತಿದ್ದು ಇದು ಇವರ ಸಮಾಜಪರ ಕಾಳಜಿಯನ್ನು ಪ್ರತಿನಿಧಿಸುತ್ತದೆ.

ಹೀಗೆ ಸಾಧನೆಯ ಹಾದಿಯಲಿ ಸಾಗುತ್ತಿರುವ ಅಂಚನ್ ಗೀತಾರವರ ಬದುಕು ಉಜ್ವಲವಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ಎಂಬುದೇ ನಮ್ಮೆಲ್ಲರ ಆಶಯ.

Email us: billavaswarriors@gmail.com


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »