TOP STORIES:

FOLLOW US

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »