TOP STORIES:

FOLLOW US

ಸೋಲನ್ನು ಮೆಟ್ಟಿ ನಿಂತ ಸಾಧಕನ ಸ್ಫೂರ್ತಿಯ ಕಥೆ


ಜೀವನದಲ್ಲಿ ಸೋಲು ಮುಖ್ಯ ಅಲ್ಲ. ಆದರೆ ಸೋಲನ್ನು ಮೆಟ್ಟಿ ನಿಂತು ಸಾಧಿಸುವುದು ಮುಖ್ಯ. ಹೋಂಡಾ ಕಂಪೆನಿ ಅಂದರೆ ಎಲ್ಲರಿಗೂ ಚಿರಪರಿಚಿತ. ಈ ವಿಶ್ವವಿಖ್ಯಾತ ಕಂಪೆನಿಯ ಸ್ಥಾಪಕ ಸೋಯಿಚಿರೋ ಹೋಂಡಾರವರ ಕಲ್ಲು ಮುಳ್ಳಿನ ಹಾದಿಯ ಕಥೆಯೂ ನಮ್ಮೆಲ್ಲರ ಜೀವನಕ್ಕೆ ಸ್ಫೂರ್ತಿದಾಯಕವಾದುದು.

ಬಡ ಕುಟುಂಬದಲ್ಲಿ ಹುಟ್ಟಿದ ಸೋಯಿ ಚಿರೋ ಹೋಂಡಾ ಚಿಕ್ಕಂದಿನಿಂದಲೇ ಏನಾದರೂ ಸಾಧನೆ ಮಾಡಬೇಕು ಎನ್ನುವ ಅದಮ್ಯ ಬಯಕೆ ಇಟ್ಟುಕೊಂಡಿದ್ದರು. ಹಾಗೆಯೇ ಕಾಲೇಜಿನ ವರ್ಕ್‌ ಶಾಪ್‌ನಲ್ಲಿದ್ದಾಗ ಹಠಾತ್ತಾನೆ ಪಿಸ್ಟನ್‌ ತಯಾರಿಸುವ ಐಡಿಯಾ ಹೊಳೆಯಿತು.

ಹಗಲು-ರಾತ್ರಿ ಶ್ರಮಪಟ್ಟು ತಯಾರಿಸಿ ಟೊಯೊಟೊ ಕಂಪೆನಿಗೆ ಮಾರಲು ಹೋದಾಗ, ಗುಣ ಮಟ್ಟದ ಉತ್ಪನ್ನ ಇದಲ್ಲ ಎಂದು ಕಂಪೆನಿ ನಿರಾಕರಿಸಿತು. ಎಲ್ಲರೂ ಗೇಲಿ ಮಾಡಿ ನಕ್ಕರು. ಆದರೆ ಹೋಂಡಾ ಅವರು ಮಂದಹಾಸ ಬೀರಿ ತನ್ನ ಪ್ರಯತ್ನವನ್ನು ಮುಂದುವರಿಸಿದರು. ಮುಂದೊಂದು ದಿನ ತನ್ನ ಸತತ ಪ್ರಯತ್ನದಿಂದ ತನ್ನದೇ ಆದ ಫ್ಯಾಕ್ಟರಿಯನ್ನು ಆರಂಭಿಸಿದರು. ಆದರೆ ಭೂಕಂಪಕ್ಕೀಡಾಗಿ ಧರೆಗುರುಳಿತು.

ಮತ್ತೆ ಕಾರ್ಖಾನೆ ನಿರ್ಮಾಣಕ್ಕೆ ಮುಂದಾದಾಗ 2ನೇ ಮಹಾಯುದ್ಧವು ಪ್ರವೇಶಿಸಿಬಿಟ್ಟಿತ್ತು. ಆ ಹೊತ್ತಿಗೆ ಸಿಮೆಂಟಿನ ಪೂರೈಕೆ ನಿಂತೇ ಹೋಯ್ತು. ಆದರೆ ಇದಕ್ಕೆಲ್ಲ ತಲೆಕೆಡಿಸಿಕೊಳ್ಳದ ಹೋಂಡಾ ಅವರು ತಾನೆೇ ಸಿಮೆಂಟ್‌ ತಯಾರಿಸಿ ಕಾರ್ಖಾನೆಯ ಕೆಲಸ ಪೂರ್ಣಗೊಳಿಸಿದರು. ಹೀಗೆ ಮುಂದಿನ ದಿನಗಳಲ್ಲಿ ಹಲವು ಬಾರಿ ಸೋಲುಗಳನ್ನು ಕಂಡರೂ ಎಲ್ಲವನ್ನೂ ಮೆಟ್ಟಿನಿಂತು ಮುಂದೊಂದು ದಿನ ಹೋಂಡಾ ಕಂಪೆನಿಯನ್ನು ಜಗದ್ವಿಖ್ಯಾತ ಮಾಡಿದರು.

ನಾವು ಸೋಯಿಚಿರೋ ಹೋಂಡಾ ಅವರ ಜಾಗದಲ್ಲಿ ಇದ್ದಿದ್ದರೆ ಏನು ಮಾಡುತ್ತಿದ್ದೆವು? ಎಷ್ಟೇ ಸೋಲು ಕಂಡರೂ ಹೋಂಡಾ ಅವರು ಮಂದ ಹಾಸ ಬೀರಿ ಅದನ್ನೆಲ್ಲ ಜಯಿಸಿ ಮುನ್ನಡೆದು ಇಡೀ ವಿಶ್ವಕ್ಕೆ ಮಾದರಿ ಯಾದರು. ನಮಗೂ ಕೂಡ ಜೀವನದಲ್ಲಿ ಸೋಲುಗಳು ಬರುವುದು ಸಹಜ. ಆದರೆ ಅವನ್ನೆಲ್ಲ ಮೆಟ್ಟಿ ಮಂದಹಾಸ ಬೀರಿ ಜಯಿಸಬೇಕು ಅಷ್ಟೇ… ಎಲ್ಲದಕ್ಕೂ ಸಾಧಿಸುವ ಛಲವಿರಬೇಕು.

– ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »