TOP STORIES:

ಸೌದಿ ಅರೇಬಿಯಾದ ಪ್ರಮುಖ ಆಹಾರ “ಕುಬ್ಬುಸು”


ತುತ್ತು ಅನ್ನ ತಿನ್ನೋಕೆ,ಬೋಗಸೆ ನೀರು ಕುಡಿಯೋಕೆ,ತುಂಡು ಬಟ್ಟೆ ಸಾಕು ನನ್ನ ಮಾನ ಮುಚ್ಚೋಕೆ,ಅಂಗೈ ಅಗಲ ಜಾಗ ಸಾಕುಹಾಯಾಗಿರೋಕೆ ನಾ ಹಾಯಾಗಿರೋಕೆಇದು ಕನ್ನಡದ ಜನಪ್ರಿಯ ಚಲನಚಿತ್ರದ ಒಂದು ಹಾಡಿನ ಸಾಲು. ಹೌದು ಮನುಷ್ಯ ಭೂಮಿಯಲ್ಲಿ ಬದುಕಬೇಕಾದರೆ ನೀರು,ಗಾಳಿ, ಆಹಾರ, ಮತ್ತು ಬಟ್ಟೆ ಬೇಕೇ ಬೇಕು.ಆಹಾರವಿಲ್ಲದೆ ಮನುಷ್ಯ ಹೆಚ್ಚು ಕಾಲಬದುಕಲಾರ.ಪ್ರಪಂಚದ ಎಲ್ಲಾ ದೇಶಗಳು ತನ್ನದೇ ಆದ ಆಹಾರ ಪದ್ದತಿಯನ್ನು ಹೊಂದಿರುತ್ತದೆ. ಅದು ಅಲ್ಲಿಯವಾತಾವರಣ,ಸಂಸ್ಕೃತಿ,ಸಂಪ್ರದಾಯ, ಜಾತಿ ಮತ್ತು ಧರ್ಮಗಳಿಗೆ ಅನುಸಾರವಾಗಿ ವಿಕಸಿತವಾಗಿರುತ್ತದೆ.ಉದಾಹರಣೆಗೆ ನಮ್ಮಮಂಗಳೂರಿನ ಜನರು ಬೆಳಿಗ್ಗೆ ಇಡ್ಲಿ ಸಾಂಬಾರು ತಿಂದರೆ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಜನರು ಸಾಂಡ್ವಿಚ್ಚ್ ತಿನ್ನುತ್ತಾರೆ.ನಾವು ಮೀನುಸಾರು ಮಾಡಿದರೆ ಉತ್ತರ ಕರ್ನಾಟಕದ ಜನರು ಬೇಳೆ ಸಾರು ಮಾಡುತ್ತಾರೆ. ಪ್ರತಿಯೊಂದು ದೇಶದಲ್ಲಿಯೂ ತನ್ನದೇ ಆದ ವಿಶಿಷ್ಠಮತ್ತು ಹೆಸರುವಾಸಿಯಾದ ಆಹಾರ ಪದಾರ್ಥಗಳಿರುತ್ತದೆ.

(Copyrights owned by: billavaswarriors.com )

ಮಧ್ಯಪ್ರಾಚ್ಯ ದೇಶವಾದ ಸೌದಿ ಅರೇಬಿಯಾದ ಪ್ರಮುಖ ಆಹಾರ ಯಾವುದು ಅಂದರೆ ಅದು ಕುಬ್ಬುಸು ಕುಬ್ಬುಸು ಮೈದಾಗೋಧಿಯಿಂದ ತಯಾರಿಸುವ ಒಂದು ರೊಟ್ಟಿಯ ಆಕಾರದ ಆಹಾರ. ಸೌದಿ ಅರೇಬಿಯಾದ ಮಣ್ಣಲ್ಲಿ ಕಾಲಿಟ್ಟ ದಿನವೇ ನನ್ನಬಾಯಿಗೆ ಹೋದ ಮೊದಲ ಆಹಾರವೇ ಕುಬ್ಬುಸು. ಕುಬ್ಬುಸುನ್ನು  ಬಡವರ ಬಂಧು ಎಂದು ಕರೆದರು ತಪ್ಪಾಗಲಾರದು. ಯಾಕೆಂದರೆಅದು ಅತೀ ಕಡಿಮೆ ಬೆಲೆಗೆ ಸಿಗುವ ಮತ್ತು ಅತೀ ಹೆಚ್ಚು ಜನರು ಉಪಯೋಗಿಸುವ ಒಂದು ಉತ್ತಮ ಆಹಾರ. ಕುಬ್ಬುಸುನ್ನು ನನ್ನದೆಆದ ದ್ರಷ್ಟಿ  ಕೋನದಲ್ಲಿ ನೋಡಿದಾಗ ನನಗೆ ಅದು ಒಂದು ಬಹಳ ವಿಶಿಷ್ಠವಾದ ಹಾಗೂ ಅದ್ಬುತ ಆಹಾರದಂತೆ ಕಂಡು ಬಂದಿತು.

ತ್ಯಾಗದ ಸಂಕೇತವಾಗಿ ಕುಬ್ಬುಸು :   ನಿಮ್ಮಲ್ಲಿ ಈಗ ಒಂದು ಪ್ರಶ್ನೆ ಮೂಡಬಹುದು.ಅದು ಏನೆಂದರೆ ಕುಬ್ಬುಸಿಗೂ ತ್ಯಾಗಕ್ಕೂ ಸಂಬಂಧಏನು ಎಂದು.ಸಂಬಂಧ ಇದೆ.ಸೌದಿಯಲ್ಲಿ ಹೊಟ್ಟೆಪಾಡಿಗಾಗಿ ಉದ್ಯೋಗವನ್ನು ಹರಸಿ ಬಂದಂತಹ ಕಡಿಮೆ ವೇತನ ಪಡೆಯುವಕಾರ್ಮಿಕ ವಲಸಿಗರ ಸಂಖ್ಯೆಯೇ ಅತೀ ಹೆಚ್ಚು. ಅವರು ಮರುಭೂಮಿಯ ದೊಡ್ಡ ದೊಡ್ಡ ನಿರ್ಮಾಣ ಯೋಜನೆಗಳಲ್ಲಿ ಬಿಸಿಲುಚಳಿಯನ್ನು ಲೆಕ್ಕಿಸದೆ, ಕಿಕ್ಕಿರದ ಕ್ಯಾಂಪ್ ಗಳಲ್ಲಿ ನೆಲೆಸುತ್ತಾ.ದಿನಾ ತಾನು ಒಣ ಕುಬ್ಬುಸು ತಿಂದು ಊರಿನಲ್ಲಿ ತನ್ನನ್ನು ಆಶ್ರಯಿಸಿರುವತನ್ನ ಕುಟುಂಬದ ಸದಸ್ಯರು ಕನಿಷ್ಟ ಪಕ್ಷ ಮೂರು ಹೊತ್ತು ಚೆನ್ನಾಗಿ ಊಟ ಮಾಡಲಿ ಎಂಬ ಉದ್ದೇಶದಿಂದ ತನ್ನ ಎಲ್ಲಾ ಆಸೆಆಕಾಂಕ್ಷೆಗಳನ್ನು ತನ್ನ ಕುಟುಂಬಕ್ಕಾಗಿ ತ್ಯಾಗ ಮಾಡುತ್ತಾರೆ. ಅಂದರೆ ಕುಬ್ಬುಸು ತ್ಯಾಗದ ಒಂದು ಸಂಕೇತ ಎಂದಾಯಿತು ಅಲ್ಲವೇ?

ಆರೋಗ್ಯದ ಸಂಕೇತವಾಗಿ ಕುಬ್ಬುಸು: ಕೈ ತುಂಬಾ ಸಂಬಳ ಇರುವ ಜನರು ಕೂಡಾ ಇಲ್ಲಿ ಕುಬ್ಬುಸಿನ ಮೊರೆ ಹೋಗುತ್ತಾರೆ. ಯಾಕೆಂದರೆ ಕುಬ್ಬುಸು ಒಂದು ಆರೋಗ್ಯದಾಯಕ ಆಹಾರ. ಇಲ್ಲಿನ ಜನರು ಫಾಸ್ಟ್ ಫುಡ್ಡಿನ ದಾಸರಾಗಿ ಮೈಯಲ್ಲಿ ಕೊಬ್ಬನ್ನುಬೆಳೆಸಿಕೊಂಡು,ರಕ್ತದ ಒತ್ತಡ ಹಾಗೂ ಸಕ್ಕರೆ ಕಾಯಿಲೆಗೆ ಗುರಿಯಾಗಿ,ಕೊಬ್ಬು, ಸಕ್ಕರೆ ಕಾಯಿಲೆ ಹಾಗೂ ರಕ್ತದ ಒತ್ತಡಗಳನ್ನು ಕಡಿಮೆಮಾಡಲು ಕುಬ್ಬುಸಿನ ಮೊರೆಹೋಗುತ್ತಾರೆ.ಕೆಲವರು ತನ್ನವರು ಊರಿನಲ್ಲಿ ಸುಖವಾಗಿರಲಿ ಎಂದು ಆಹಾರವಾಗಿ ಕುಬ್ಬುಸುನ್ನುತಿಂದರೆ ಇನ್ನು ಕೆಲವರು ಬೇಕಾ ಬಿಟ್ಟಿ ತಿಂದು ಬೊಜ್ಜು ಕರಗಿಸಲು ಕುಬ್ಬುಸು ತಿನ್ನುವುದು ನಿಜವಾಗಲೂ ಒಂದು ವಿಪರ್ಯಾಸ.

ಕೊನೆಯಾದಗಿ ಒಂದು ಮಾತು, ಆಹಾರ ಮನುಷ್ಯನ ಮೂಲಭೂತ ಅವಶ್ಯಕತೆಗಳಲ್ಲಿ  ಅತೀ ಮುಖ್ಯವಾದದ್ದು .ಆಹಾರವನ್ನುಮಿತವಾಗಿ ಹಾಗೂ ಹಿತವಾಗಿ ಸೇವಿಸಬೇಕು. ನಾವಿಂದು ತಿಂದು ತೇಗಿ ಆಹಾರವನ್ನು ಚೆಲ್ಲುತ್ತಾ ಇದ್ದೇವೆ.ಆದರೆ ಇಂದಿಗೂ ಅದೆಷ್ಟೋಜನರು ಒಪ್ಪೋತ್ತೀನ ಊಟಕ್ಕಾಗಿ ಪರಿತಪಿಸುತ್ತಾ ಇದ್ದಾರೆ.ಆದುದರಿಂದ ಆರೋಗ್ಯಕ್ಕೆ ಉತ್ತಮವಾದ ಆಹಾರವನ್ನು ಮಿತವಾಗಿಸೇವಿಸೋಣ.ಸೌದಿಯಲ್ಲಿ ಸಿಗುವ ಕುಬ್ಬುಸು ಅಂತಹ ಆಹಾರಗಳಲ್ಲಿ ಒಂದು.ಇಂತಹ ಒಂದು ಅದ್ಭುತವಾದ ಆಹಾರವನ್ನು ನೀಡಿದ್ದಕ್ಕೆನಿಜವಾಗಿಯೂ ನಾವೆಲ್ಲಾ ಇಲ್ಲಿನ ಮಣ್ಣಿಗೆ ಋಣಿಯಾಗಲೇ ಬೇಕು. ಇಡೀ ಪ್ರಪಂಚವೇ ಬೆಲೆಯೇರಿಕೆಯ  ಸುಳಿಗೆ ಸಿಕ್ಕಿದರೂ, ಕೇವಲಒಂದೇ ರಿಯಾಲಿಗೆ ಒಂದು ಕಟ್ಟು ಕುಬ್ಬುಸುನ್ನು ನೀಡುತ್ತಿರುವ ಇಲ್ಲಿನ ಸರಕಾರಕ್ಕೆ ನನ್ನದೊಂದು ಸಲ್ಯೂಟ್.

✍ ಲೇಖನ: ನಾಗರಾಜ್  ಅಂಚನ್ ಬಜಾಲ್


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »