TOP STORIES:

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲಾ


ಸ್ಪಂದನಾ! ನನ್ನ ಅಚ್ಚು!

ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಹೆಸರಿನಿಂದ ಕರೆದೇ ಇಲ್ಲ. ಕರೆದುದೆಲ್ಲಾ ಅಚ್ಚು ಎಂದೇ!.

ಸೌಮ್ಯ ಮುಖದ ಸುಂದರ ಹಠಮಾರಿ. ಆಸೆಪಟ್ಟಿದ್ದನ್ನು ನೆರವೇರಿಸಲು ಅಪ್ಪ ಅಮ್ಮ, ಅಣ್ಣ ತುದಿಗಾಲಲ್ಲಿ ನಿಂತಿರುತ್ತಿದ್ದರು. ನಂತರಬಂದ ಗಂಡ ವಿಜಯರಾಘವೇಂದ್ರನೋ! ದೇವಾ, ಅಳತೆ ಮಾಡಿಟ್ಟ ಹಾಗೆ ಸಿಕ್ಕ ಅಮೂಲ್ಯ ವಜ್ರ. ಆತನ ಪ್ರಪಂಚದಲ್ಲಿ ಮೊದಲುಪ್ರೀತಿಯ ಪತ್ನಿಗೆ ಸ್ಥಾನ. ನಂತರ ಮಿಕ್ಕೆಲ್ಲ.

ಬಹಳ ಮುಗ್ದೆಯಾಗಿದ್ದ ನನ್ನ ಅಚ್ಚುವನ್ನು ಒಮ್ಮೆ ಸದಾಶಿವನಗರ ಪಾರ್ಕ್ ಬಳಿ ಹರೆಯದ ಹುಡುಗನೊಬ್ಬನ ಜೊತೆ ಕಾರಿನಲ್ಲಿ ಕುಳಿತುಹರಟೆಹೊಡೆಯುತ್ತಿದ್ದುದ್ದನ್ನು ಕಂಡು ಜೀವ ಬಾಯಿಗೆ ಬಂದಿತ್ತು. ಅವಳಪ್ಪ ಬಿ.ಕೆ. ಶಿವರಾಂ ಮೊದಲೇ ಹುಲಿ. ‘ ನಿನ್ನ ಪ್ರಾಣಪಕ್ಷಿಎಲ್ಲಿಟ್ಟಿದ್ದೀಯ ಹೇಳುಎಂದು ರೇಗಿಸಿದಾಗಲೆಲ್ಲಾ ಮಗಳನ್ನು ಮುದ್ದುಮಾಡುತ್ತಾಅಚ್ಚು ಒಳಗಿದೆ ನನ್ನ ಪ್ರಾಣಪಕ್ಷಿಎನ್ನುತ್ತಿದ್ದ. ಅಪ್ಪನ ಅಪಾರ  ಪ್ರೀತಿ ಅವಳ confidence levelನ್ನು ಸದಾ ಉತ್ತುಂಗದಲ್ಲಿಟ್ಟಿತ್ತು. ಇಂತಹ ಅಪ್ಪನ ಬಳಿ ಮಗಳ ಹಿತರಕ್ಷಣೆಯದೃಷ್ಟಿಯಿಂದ ಚಾಡಿ ಹೇಳಲೋ? ಬೇಡವೊ? ಎಂದು ಬಹಳ ದಿನ ಒದ್ದಾಡಿದ್ದೆ. ನಂತರ ಕರೆಮಾಡಿ ನಿನ್ನ ಜೊತೆ ಕಾರಿನಲ್ಲಿದ್ದ ಹುಡುಗನವಿವರ ಕೊಡು ಎಂದೆ. ‘ ಆಂಟಿ, ನಾನು ಮದುವೆಯಾದರೆ ಅವರನ್ನೇಅಪ್ಪನನ್ನು ಒಪ್ಪಿಸಿಎಂದಳು. ಎಷ್ಟು ಹಠಮಾಡಿದರೂಹುಡುಗ ಯಾರೆಂದು ಹೇಳುತ್ತಿಲ್ಲ. ಕಡೆಗೆಆಂಟಿ, ಸಿನೆಮಾದವನು ಅಂದರೆ ನೀವೆಲ್ಲಾ ಬೇಡ ಅನ್ನುತ್ತೀರಿ. ಅದಕ್ಕೆ ಅವರ ಹೆಸರುಹೇಳೊಲ್ಲಎಂದಳು. ಹಾಗಾದರೆ ನಾನೂ ನಿನ್ನ ಪ್ರೀತಿಗೆ ಸಪೋರ್ಟ್ ಮಾಡೊಲ್ಲ ಎಂದೆ.

ಅಚ್ಚು ಮೇಲೆ ಕಣ್ಗಾವಲು ಹಾಕಿದರೂ ನನ್ನ ಕೈಗೆ ಎಲ್ಲೂ ಸಿಕ್ಕಿಹಾಕಿಕೊಳ್ಳದ ಜಾಣತನ ತೋರುವಷ್ಟು ದೊಡ್ಡವಳಾಗಿಬಿಟ್ಟಿದ್ದಳು. ಬಹಳಗಲಾಟೆ ಮಾಡಿದ ನಂತರ ಸಣ್ಣ ಧ್ವನಿಯಲ್ಲಿ ಹೇಳಿದಳು ಚಿನ್ನಾರಿ ಮುತ್ತ!

ಮಧ್ಯೆ ನನ್ನ ಆಪ್ತ ಹಾಗೂ ನನ್ನ soulmate ಶಿವರಾಂಗೆ ಅಚ್ಚು ವಿಷಯ ಹೇಳಲೇಬೇಕೆಂದು ನಿರ್ಧರಿಸಿದ್ದರೂ, ಷೂಟಿಂಗ್ ನಲ್ಲಿಬಿಜಿಯಾದೆ.

ಬೆಳಿಗೆ ಬೆಳಿಗ್ಗೆ ಶಿವರಾಂ ಕರೆ. ‘ ನಿನ್ನ ಮಗಳು ಅಚ್ಚುಗೆ ಮದುವೆ ಮಾಡ್ತಿದ್ದೀನಿ ಅಂತ! ಮತ್ತೆ ನನ್ನ ಜೀವ ಬಾಯಿಗೆ ಬಂತು. ಹು..ಡು..ಯಾರು? ಎಂದೆ ನಡುಗುವ ಧ್ವನಿಯಲ್ಲಿ. ಯಾವುದೇ ಕಾರಣಕ್ಕೂ ಅಚ್ಚು ಕನಸು ಛಿದ್ರವಾಗುವುದುನನಗಿಷ್ಟವಾಗಿರಲಿಲ್ಲ. ಏಕೆಂದರೆ ನಮ್ಮ ಪಾಲಿಗೆ ಅವಳು ಸ್ವರ್ಗದಿಂದ ನೇರವಾಗಿ ನಮ್ಮ ಕೈಗೆ ಸಿಕ್ಕ ಹೂವು.

ನಿಧಾನವಾಗಿ, ಸಮಾಧಾನಕರವಾದ ಧ್ವನಿಯಲ್ಲಿ ಶಿವರಾಂ ಹೇಳಿದ್ದು  ಅಚ್ಚನೇ ಆರಿಸಿಕೊಂಡಿದ್ದಾಳೆ. ವಿಜಯರಾಘವೇಂದ್ರ. ಒಳ್ಳೆಹುಡುಗನನ್ನೇ ಆರಿಸಿಕೊಂಡಿದ್ದಾಳಲ್ವಾ?’

ಶಿವರಾಂ ಮಾತು ಕೇಳುತ್ತಿದ್ದಂತೆ ನೂರಾರು ಬಂಡೆಗಳು ತಲೆಯಿಂದ ಕೆಳಗೆ ಇಳಿದ ಸುಂದರ ಅನುಭವ.

ಇಲ್ಲಿ ವಿಜಯರಾಘವೇಂದ್ರ ಪುಣ್ಯ ಮಾಡಿದ್ದನೋಅಚ್ಚು ಪುಣ್ಯಮಾಡಿದ್ದಳೋ ಗೊತ್ತಿಲ್ಲ ಅವರ ದಾಂಪತ್ಯಜೀವನ ಸ್ವರ್ಗದಗೋಡೆಗಳಿಂದ ರಚನೆಯಾಗಿತ್ತು.

ನಾನವಳನ್ನು ಆಗಾಗ್ಗೆ ಚಿನ್ನಾರಿ ಮುತ್ತಿ ಎಂದರೆ ಅಲ್ಲ, ನಾನು ಅಚ್ಚು ಎನ್ನುತ್ತಿದ್ದಳು.

ಅಚ್ಚು ಚಿಕ್ಕವಳಿದ್ದಾಗ ಅವಳ ಮಾವನ ಮನೆ ಬೆಳ್ತಂಗಡಿಯಲ್ಲಿ ಷೂಟಿಂಗ್ ಮಾಡುತ್ತಿದೆ. ಹಗಲು ರಾತ್ರಿ ನಡೆಯುತ್ತಿದ್ದ ಧಾರಾವಾಹಿ. ಪುಟ್ಟಿ ನನ್ನ ಹೆಗಲಿಗಂಟಿಕೊಂಡು ಹಗಲೂ ರಾತ್ರಿ ಬೇಸರವಿಲ್ಲದೆ ಆಸಕ್ತಿಯಿಂದ ಷೂಟಿಂಗ್ ನೋಡುತ್ತಿದ್ದಳು. ಒಮ್ಮೆ ಧಾರಾವಾಹಿಗೆಸಂಭಾಷಣೆ ಬರೆಯುತ್ತಾ ಕುಳಿತಿದ್ದೆ. ಮುಖ ಊದಿಸಿಕೊಂಡು ಹತ್ತಿರ ಬಂದುಸೌಮ್ಯವಾದ ಕೋಪದಿಂದ‘ ‘ ಆಂಟಿ ನಾನು ಅವತ್ತಿಂದನೋಡ್ತಿದ್ದೀನಿ. ಧಾರಾವಾಹಿಯಲ್ಲಿ ನನ್ನ ಹೆಸರು ಯಾಕೆ ಇನ್ನೂ ಬಂದಿಲ್ಲ?’ ಎಂದು ಕೇಳಿದಳು. ನನಗರ್ಥವಾಯ್ತು, ತನ್ನ ಪ್ರೀತಿಪಾತ್ರಆಂಟಿ ತನ್ನ ಹೆಸರಲ್ಲದೆ ಬೇರೆ ಹೆಸರುಗಳನ್ನು ಪಾತ್ರಗಳಿಗೆ ಇಡಲು ಸಾಧ್ಯವೆ? ಪಟ್ಟನೆ ನಾನು ಎಚ್ಚೆತ್ತು ಹೇಳಿದೆಅಚ್ಚು ಮುಂದಿನಸೀರಿಯಲ್ ನಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚು ಅಂತಾನೇ ಇರುತ್ತೆ ನೋಡು.

ಪ್ರಾಮಿಸ್? ಎಂದಳು

ಪ್ರಾಮಿಸ್ ಎಂದೆ. ಅದರಂತೆ ನನ್ನ ಮುಂದಿನ ಮಕ್ಕಳ ಧಾರಾವಾಹಿ ಜಿಂ ಜಿಂ ಜಿಂಬಾದಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚುಅಂತಾನೇ ಇಟ್ಟೆ

ಮತ್ತೆ ಅವಕಾಶ ಸಿಕ್ಕಾಗಲೆಲ್ಲಾ ಅಚ್ಚುಗಳು ನನ್ನ ಎಲ್ಲಾ ಸೀರಿಯಲ್ ಗಳಲ್ಲೂ ಓಡಾಡಿಬಿಟ್ಟರು.

ಅಚ್ಚು.. ಭೂಮಿಗೆ ಬರಲು ಒಳ್ಳೆಯ ಅಪ್ಪ, ಅಮ್ಮಂದಿರ ಆಯ್ಕೆ ಸರಿಯಾಗಿತ್ತು. ಅಣ್ಣನ ಆಯ್ಕೆ ಅದೃಷ್ಟದಿಂದ ಕೂಡಿತ್ತು, ಗಂಡನಆಯ್ಕೆಗೆ ಸ್ವರ್ಗದಿಂದ ದೇವತೆಗಳೆಲ್ಲಾ ಬಂದು ಹರಸಿದರು. ಮಗನ ಆಯ್ಕೆಯೂ ಸ್ವರ್ಗದಿಂದ ಬಂದ ಮುದ್ದಾದ ದೇವರಾಗಿತ್ತು. ಇಲ್ಲೇಸ್ವರ್ಗ ಸೃಷ್ಟಿಸಿದ್ದ ನೀನು, ಇಷ್ಟುಬೇಗ ನಿನ್ನ ತವರುಮನೆ oneway ಸ್ವರ್ಗಕ್ಕೆ ಹೋಗುವ ಆತುರವೇನಿತ್ತು? ಮರಳಿಬಾರದ ಲೋಕಕ್ಕೆಹೋಗಿಬಿಟ್ಟಿದ್ದೀಯ

ಅಲ್ಲೂ ಹೀಗೆ ಸುಖವಾಗಿರು ಕಂದಾ.

ರೇಖಾರಾಣಿ ಕಶ್ಯಪ್


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »