TOP STORIES:

FOLLOW US

ಸ್ಪಂದನಾ! ನನ್ನ ಅಚ್ಚು! ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಆ ಹೆಸರಿನಿಂದ ಕರೆದೇ ಇಲ್ಲಾ


ಸ್ಪಂದನಾ! ನನ್ನ ಅಚ್ಚು!

ಅವಳು ಹುಟ್ಟಿದಾಗಿನಿಂದ ಇದುವರೆಗೂ ನಾನವಳನ್ನು ಹೆಸರಿನಿಂದ ಕರೆದೇ ಇಲ್ಲ. ಕರೆದುದೆಲ್ಲಾ ಅಚ್ಚು ಎಂದೇ!.

ಸೌಮ್ಯ ಮುಖದ ಸುಂದರ ಹಠಮಾರಿ. ಆಸೆಪಟ್ಟಿದ್ದನ್ನು ನೆರವೇರಿಸಲು ಅಪ್ಪ ಅಮ್ಮ, ಅಣ್ಣ ತುದಿಗಾಲಲ್ಲಿ ನಿಂತಿರುತ್ತಿದ್ದರು. ನಂತರಬಂದ ಗಂಡ ವಿಜಯರಾಘವೇಂದ್ರನೋ! ದೇವಾ, ಅಳತೆ ಮಾಡಿಟ್ಟ ಹಾಗೆ ಸಿಕ್ಕ ಅಮೂಲ್ಯ ವಜ್ರ. ಆತನ ಪ್ರಪಂಚದಲ್ಲಿ ಮೊದಲುಪ್ರೀತಿಯ ಪತ್ನಿಗೆ ಸ್ಥಾನ. ನಂತರ ಮಿಕ್ಕೆಲ್ಲ.

ಬಹಳ ಮುಗ್ದೆಯಾಗಿದ್ದ ನನ್ನ ಅಚ್ಚುವನ್ನು ಒಮ್ಮೆ ಸದಾಶಿವನಗರ ಪಾರ್ಕ್ ಬಳಿ ಹರೆಯದ ಹುಡುಗನೊಬ್ಬನ ಜೊತೆ ಕಾರಿನಲ್ಲಿ ಕುಳಿತುಹರಟೆಹೊಡೆಯುತ್ತಿದ್ದುದ್ದನ್ನು ಕಂಡು ಜೀವ ಬಾಯಿಗೆ ಬಂದಿತ್ತು. ಅವಳಪ್ಪ ಬಿ.ಕೆ. ಶಿವರಾಂ ಮೊದಲೇ ಹುಲಿ. ‘ ನಿನ್ನ ಪ್ರಾಣಪಕ್ಷಿಎಲ್ಲಿಟ್ಟಿದ್ದೀಯ ಹೇಳುಎಂದು ರೇಗಿಸಿದಾಗಲೆಲ್ಲಾ ಮಗಳನ್ನು ಮುದ್ದುಮಾಡುತ್ತಾಅಚ್ಚು ಒಳಗಿದೆ ನನ್ನ ಪ್ರಾಣಪಕ್ಷಿಎನ್ನುತ್ತಿದ್ದ. ಅಪ್ಪನ ಅಪಾರ  ಪ್ರೀತಿ ಅವಳ confidence levelನ್ನು ಸದಾ ಉತ್ತುಂಗದಲ್ಲಿಟ್ಟಿತ್ತು. ಇಂತಹ ಅಪ್ಪನ ಬಳಿ ಮಗಳ ಹಿತರಕ್ಷಣೆಯದೃಷ್ಟಿಯಿಂದ ಚಾಡಿ ಹೇಳಲೋ? ಬೇಡವೊ? ಎಂದು ಬಹಳ ದಿನ ಒದ್ದಾಡಿದ್ದೆ. ನಂತರ ಕರೆಮಾಡಿ ನಿನ್ನ ಜೊತೆ ಕಾರಿನಲ್ಲಿದ್ದ ಹುಡುಗನವಿವರ ಕೊಡು ಎಂದೆ. ‘ ಆಂಟಿ, ನಾನು ಮದುವೆಯಾದರೆ ಅವರನ್ನೇಅಪ್ಪನನ್ನು ಒಪ್ಪಿಸಿಎಂದಳು. ಎಷ್ಟು ಹಠಮಾಡಿದರೂಹುಡುಗ ಯಾರೆಂದು ಹೇಳುತ್ತಿಲ್ಲ. ಕಡೆಗೆಆಂಟಿ, ಸಿನೆಮಾದವನು ಅಂದರೆ ನೀವೆಲ್ಲಾ ಬೇಡ ಅನ್ನುತ್ತೀರಿ. ಅದಕ್ಕೆ ಅವರ ಹೆಸರುಹೇಳೊಲ್ಲಎಂದಳು. ಹಾಗಾದರೆ ನಾನೂ ನಿನ್ನ ಪ್ರೀತಿಗೆ ಸಪೋರ್ಟ್ ಮಾಡೊಲ್ಲ ಎಂದೆ.

ಅಚ್ಚು ಮೇಲೆ ಕಣ್ಗಾವಲು ಹಾಕಿದರೂ ನನ್ನ ಕೈಗೆ ಎಲ್ಲೂ ಸಿಕ್ಕಿಹಾಕಿಕೊಳ್ಳದ ಜಾಣತನ ತೋರುವಷ್ಟು ದೊಡ್ಡವಳಾಗಿಬಿಟ್ಟಿದ್ದಳು. ಬಹಳಗಲಾಟೆ ಮಾಡಿದ ನಂತರ ಸಣ್ಣ ಧ್ವನಿಯಲ್ಲಿ ಹೇಳಿದಳು ಚಿನ್ನಾರಿ ಮುತ್ತ!

ಮಧ್ಯೆ ನನ್ನ ಆಪ್ತ ಹಾಗೂ ನನ್ನ soulmate ಶಿವರಾಂಗೆ ಅಚ್ಚು ವಿಷಯ ಹೇಳಲೇಬೇಕೆಂದು ನಿರ್ಧರಿಸಿದ್ದರೂ, ಷೂಟಿಂಗ್ ನಲ್ಲಿಬಿಜಿಯಾದೆ.

ಬೆಳಿಗೆ ಬೆಳಿಗ್ಗೆ ಶಿವರಾಂ ಕರೆ. ‘ ನಿನ್ನ ಮಗಳು ಅಚ್ಚುಗೆ ಮದುವೆ ಮಾಡ್ತಿದ್ದೀನಿ ಅಂತ! ಮತ್ತೆ ನನ್ನ ಜೀವ ಬಾಯಿಗೆ ಬಂತು. ಹು..ಡು..ಯಾರು? ಎಂದೆ ನಡುಗುವ ಧ್ವನಿಯಲ್ಲಿ. ಯಾವುದೇ ಕಾರಣಕ್ಕೂ ಅಚ್ಚು ಕನಸು ಛಿದ್ರವಾಗುವುದುನನಗಿಷ್ಟವಾಗಿರಲಿಲ್ಲ. ಏಕೆಂದರೆ ನಮ್ಮ ಪಾಲಿಗೆ ಅವಳು ಸ್ವರ್ಗದಿಂದ ನೇರವಾಗಿ ನಮ್ಮ ಕೈಗೆ ಸಿಕ್ಕ ಹೂವು.

ನಿಧಾನವಾಗಿ, ಸಮಾಧಾನಕರವಾದ ಧ್ವನಿಯಲ್ಲಿ ಶಿವರಾಂ ಹೇಳಿದ್ದು  ಅಚ್ಚನೇ ಆರಿಸಿಕೊಂಡಿದ್ದಾಳೆ. ವಿಜಯರಾಘವೇಂದ್ರ. ಒಳ್ಳೆಹುಡುಗನನ್ನೇ ಆರಿಸಿಕೊಂಡಿದ್ದಾಳಲ್ವಾ?’

ಶಿವರಾಂ ಮಾತು ಕೇಳುತ್ತಿದ್ದಂತೆ ನೂರಾರು ಬಂಡೆಗಳು ತಲೆಯಿಂದ ಕೆಳಗೆ ಇಳಿದ ಸುಂದರ ಅನುಭವ.

ಇಲ್ಲಿ ವಿಜಯರಾಘವೇಂದ್ರ ಪುಣ್ಯ ಮಾಡಿದ್ದನೋಅಚ್ಚು ಪುಣ್ಯಮಾಡಿದ್ದಳೋ ಗೊತ್ತಿಲ್ಲ ಅವರ ದಾಂಪತ್ಯಜೀವನ ಸ್ವರ್ಗದಗೋಡೆಗಳಿಂದ ರಚನೆಯಾಗಿತ್ತು.

ನಾನವಳನ್ನು ಆಗಾಗ್ಗೆ ಚಿನ್ನಾರಿ ಮುತ್ತಿ ಎಂದರೆ ಅಲ್ಲ, ನಾನು ಅಚ್ಚು ಎನ್ನುತ್ತಿದ್ದಳು.

ಅಚ್ಚು ಚಿಕ್ಕವಳಿದ್ದಾಗ ಅವಳ ಮಾವನ ಮನೆ ಬೆಳ್ತಂಗಡಿಯಲ್ಲಿ ಷೂಟಿಂಗ್ ಮಾಡುತ್ತಿದೆ. ಹಗಲು ರಾತ್ರಿ ನಡೆಯುತ್ತಿದ್ದ ಧಾರಾವಾಹಿ. ಪುಟ್ಟಿ ನನ್ನ ಹೆಗಲಿಗಂಟಿಕೊಂಡು ಹಗಲೂ ರಾತ್ರಿ ಬೇಸರವಿಲ್ಲದೆ ಆಸಕ್ತಿಯಿಂದ ಷೂಟಿಂಗ್ ನೋಡುತ್ತಿದ್ದಳು. ಒಮ್ಮೆ ಧಾರಾವಾಹಿಗೆಸಂಭಾಷಣೆ ಬರೆಯುತ್ತಾ ಕುಳಿತಿದ್ದೆ. ಮುಖ ಊದಿಸಿಕೊಂಡು ಹತ್ತಿರ ಬಂದುಸೌಮ್ಯವಾದ ಕೋಪದಿಂದ‘ ‘ ಆಂಟಿ ನಾನು ಅವತ್ತಿಂದನೋಡ್ತಿದ್ದೀನಿ. ಧಾರಾವಾಹಿಯಲ್ಲಿ ನನ್ನ ಹೆಸರು ಯಾಕೆ ಇನ್ನೂ ಬಂದಿಲ್ಲ?’ ಎಂದು ಕೇಳಿದಳು. ನನಗರ್ಥವಾಯ್ತು, ತನ್ನ ಪ್ರೀತಿಪಾತ್ರಆಂಟಿ ತನ್ನ ಹೆಸರಲ್ಲದೆ ಬೇರೆ ಹೆಸರುಗಳನ್ನು ಪಾತ್ರಗಳಿಗೆ ಇಡಲು ಸಾಧ್ಯವೆ? ಪಟ್ಟನೆ ನಾನು ಎಚ್ಚೆತ್ತು ಹೇಳಿದೆಅಚ್ಚು ಮುಂದಿನಸೀರಿಯಲ್ ನಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚು ಅಂತಾನೇ ಇರುತ್ತೆ ನೋಡು.

ಪ್ರಾಮಿಸ್? ಎಂದಳು

ಪ್ರಾಮಿಸ್ ಎಂದೆ. ಅದರಂತೆ ನನ್ನ ಮುಂದಿನ ಮಕ್ಕಳ ಧಾರಾವಾಹಿ ಜಿಂ ಜಿಂ ಜಿಂಬಾದಲ್ಲಿ ಮುಖ್ಯಪಾತ್ರಧಾರಿಯ ಹೆಸರು ಅಚ್ಚುಅಂತಾನೇ ಇಟ್ಟೆ

ಮತ್ತೆ ಅವಕಾಶ ಸಿಕ್ಕಾಗಲೆಲ್ಲಾ ಅಚ್ಚುಗಳು ನನ್ನ ಎಲ್ಲಾ ಸೀರಿಯಲ್ ಗಳಲ್ಲೂ ಓಡಾಡಿಬಿಟ್ಟರು.

ಅಚ್ಚು.. ಭೂಮಿಗೆ ಬರಲು ಒಳ್ಳೆಯ ಅಪ್ಪ, ಅಮ್ಮಂದಿರ ಆಯ್ಕೆ ಸರಿಯಾಗಿತ್ತು. ಅಣ್ಣನ ಆಯ್ಕೆ ಅದೃಷ್ಟದಿಂದ ಕೂಡಿತ್ತು, ಗಂಡನಆಯ್ಕೆಗೆ ಸ್ವರ್ಗದಿಂದ ದೇವತೆಗಳೆಲ್ಲಾ ಬಂದು ಹರಸಿದರು. ಮಗನ ಆಯ್ಕೆಯೂ ಸ್ವರ್ಗದಿಂದ ಬಂದ ಮುದ್ದಾದ ದೇವರಾಗಿತ್ತು. ಇಲ್ಲೇಸ್ವರ್ಗ ಸೃಷ್ಟಿಸಿದ್ದ ನೀನು, ಇಷ್ಟುಬೇಗ ನಿನ್ನ ತವರುಮನೆ oneway ಸ್ವರ್ಗಕ್ಕೆ ಹೋಗುವ ಆತುರವೇನಿತ್ತು? ಮರಳಿಬಾರದ ಲೋಕಕ್ಕೆಹೋಗಿಬಿಟ್ಟಿದ್ದೀಯ

ಅಲ್ಲೂ ಹೀಗೆ ಸುಖವಾಗಿರು ಕಂದಾ.

ರೇಖಾರಾಣಿ ಕಶ್ಯಪ್


Share:

More Posts

Category

Send Us A Message

Related Posts

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »

‘ಕುಸಲ್ದ ಅರಸೆ’ ನವೀನ್ ಡಿ. ಪಡೀಲ್‌ಗೆ ‘ವಿಶ್ವಪ್ರಭಾ ಪುರಸ್ಕಾರ – 2025’


Share       ಉಡುಪಿ: ತುಳು ರಂಗಭೂಮಿ ಮತ್ತು ಚಲನಚಿತ್ರ ನಟ ನವೀನ್ ಡಿ ಪಡೀಲ್ ಅವರು ಸಂಸ್ಕೃತಿ ವಿಶ್ವ ಪ್ರತಿಷ್ಠಾನದಿಂದ ಕೊಡಲಾಗುವ ‘ವಿಶ್ವಪ್ರಭಾ ಪುರಸ್ಕಾರ-2025’ ಕ್ಕೆ ಆಯ್ಕೆಯಾಗಿದ್ದಾರೆ. 11 ನವೆಂಬರ್ 1969 ನವೀನ್ ಡಿ ಪಡೀಲ್


Read More »