TOP STORIES:

‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ”ಆತ್ಮವಂದನಾ ದೇಶಕ್ಕಾಗಿ” ಆಯ್ಕೆ


ದೇಶಮಟ್ಟದಲ್ಲಿ ಸುದ್ದಿಯಾದ ಯುವವಾಹಿನಿ ಮಾಣಿ ಘಟಕದ ಮಂಗಳೂರಿನ ತಂಡ. ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ ಹಾಗೂ NFDC ಆಯೋಜಿಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ ‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ಆತ್ಮವಂದನಾ ದೇಶಕ್ಕಾಗಿ (Athma Vandan for Nation) ಆಯ್ಕೆ.ದೇಶಾದ್ಯಂತ 30 ರಾಜ್ಯಗಳಿಂದ ಹಲವು ತಂಡಗಳು ಈ ಸ್ಪರ್ಧೆಯಲ್ಲಿ ನೋಂದಾಯಿಸಿದ್ದು ನಮ್ಮ ಜಿಲ್ಲೆಯಿಂದ ಅಂತಿಮ ಹಂತಕ್ಕೆ ಆಯ್ಕೆಯಾದ ಏಕೈಕ ತಂಡ ಆತ್ಮವಂದನಾ ದೇಶಕ್ಕಾಗಿ.

ದೇಶಪ್ರೇಮ ಇದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ.ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು.ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.ಹಗಲು-ರಾತ್ರಿ ಎನ್ನದೆ,ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ನಿರ್ಮಾಣದಲ್ಲಿ ತಯಾರಾದ ಕಿರುಚಿತ್ರ “ಆತ್ಮವಂದನಾ ದೇಶಕ್ಕಾಗಿ”.

ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ.ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು,ಮಿತುನ್ ರಾಜ್ ವಿದ್ಯಾಪುರ ಮತ್ತು ರಾಹುಲ್ ದೇವಾಡಿಗ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಈ ಕಿರುಚಿತ್ರವು ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ(Information and Broadcasting) ಇಲಾಖೆ NFDC ಜೊತೆಗೂಡಿ 2020ರ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶವ್ಯಾಪ್ತಿಯಲ್ಲಿ ಆಯೋಜಿಸಿದ ದೇಶಪ್ರೇಮ ಹಾಗೂ ಆತ್ಮನಿರ್ಭರತೆಯ ಕುರಿತಾದ 3 ನಿಮಿಷಗಳ online ಕಿರುಚಿತ್ರ ಸ್ಪರ್ಧೆಯಲ್ಲಿ ಹೆಸರು ನೋಂದಾಯಿಸಿದ ಈ ಕಿರುಚಿತ್ರ ಆಯ್ಕೆಗಾರರ ಆಯ್ಕೆಯ ಅಂತಿಮ 11 ಕಿರುಚಿತ್ರಗಳ ಪಟ್ಟಿಗೆ ಆಯ್ಕೆಯಾಗಿ ತೀರ್ಪುಗಾರರು ನೀಡುವ “Special Mention Certificate” ಗೆ ಪುರಸ್ಕೃತವಾಗಿರುತ್ತದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »