TOP STORIES:

FOLLOW US

‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ”ಆತ್ಮವಂದನಾ ದೇಶಕ್ಕಾಗಿ” ಆಯ್ಕೆ


ದೇಶಮಟ್ಟದಲ್ಲಿ ಸುದ್ದಿಯಾದ ಯುವವಾಹಿನಿ ಮಾಣಿ ಘಟಕದ ಮಂಗಳೂರಿನ ತಂಡ. ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆ ಹಾಗೂ NFDC ಆಯೋಜಿಸಿದ ಕಿರುಚಿತ್ರ ಸ್ಪರ್ಧೆಯಲ್ಲಿ ತೀರ್ಪುಗಾರರು ನೀಡುವ ‘ಸ್ಪೇಷಲ್ ಮೆನ್ಷನ್ ಸರ್ಟಿಪಿಕೇಟ್’ ಗೆ ಆತ್ಮವಂದನಾ ದೇಶಕ್ಕಾಗಿ (Athma Vandan for Nation) ಆಯ್ಕೆ.ದೇಶಾದ್ಯಂತ 30 ರಾಜ್ಯಗಳಿಂದ ಹಲವು ತಂಡಗಳು ಈ ಸ್ಪರ್ಧೆಯಲ್ಲಿ ನೋಂದಾಯಿಸಿದ್ದು ನಮ್ಮ ಜಿಲ್ಲೆಯಿಂದ ಅಂತಿಮ ಹಂತಕ್ಕೆ ಆಯ್ಕೆಯಾದ ಏಕೈಕ ತಂಡ ಆತ್ಮವಂದನಾ ದೇಶಕ್ಕಾಗಿ.

ದೇಶಪ್ರೇಮ ಇದು ಪ್ರತಿಯೊಬ್ಬ ಭಾರತೀಯನ ಎದೆಯ ಬಡಿತದಲ್ಲೂ ಇದೆ.ಅತೀ ಚಿಕ್ಕ ವಯಸ್ಸಿನಲ್ಲೇ ನೇಣಿಗೆ ಕೊರಳೊಡ್ಡಿದ ಭಗತ್ ಸಿಂಗ್ ರವರ ದೇಶಪ್ರೇಮ ಅಪಾರವಾದದ್ದು.ತನ್ನ ಪ್ರಾಣವನ್ನೆ ದೇಶಕ್ಕಾಗಿ ಮುಡಿಪಾಗಿಟ್ಟ ಯೋಧರ ದೇಶಪ್ರೇಮ.ಹಗಲು-ರಾತ್ರಿ ಎನ್ನದೆ,ಬೆವರು ಸುರಿಸಿ ದುಡಿದು ದೇಶಕ್ಕೆ ಅನ್ನವನ್ನು ನೀಡುವ ರೈತನ ದೇಶಪ್ರೇಮಗಡಿಯಲ್ಲಿ ವೀರ ಯೋಧ ನಾಡಿನಲ್ಲಿ ಖಾಕಿ ಯೋಧ ಎನ್ನುವ ಹಾಗೆ ಪೋಲಿಸ್ ರ ದೇಶಪ್ರೇಮ ಹೀಗೆಯೇ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಪ್ರೇಮವು ಅಚಲವಾಗಿದೆ. ಓಟ್ಟೊಟ್ಟಿಗೆ ದೇಶವು ಇನ್ನಷ್ಟು ಬಲಿಷ್ಠವಾಗಬೇಕಿದೆ. ಹೀಗೆ ದೇಶವು ಬಲಿಷ್ಠ ಆಗಬೇಕಾದರೆ ನಾವು ಸ್ವತಂತ್ರರಾಗಬೇಕು,ಸ್ವವಲಂಭಿಯಾಗಬೇಕು. ನಾವು ಸ್ವತಃ ಸ್ವವಲಂಬಿಯಾದರೆ ದೇಶವನ್ನು ಬಲಿಷ್ಠಗೊಳಿಸಬಹುದು ಮತ್ತು ಆಗ ಮಾತ್ರ ಆತ್ಮರ್ನಿಭರತೆಯ ಕನಸು ನನಸಾಗಲು ಸಾಧ್ಯ.

ಇದೆ ಪರಿಕಲ್ಪನೆಯನ್ನು ಇಟ್ಟುಕೊಂಡು ಯುವವಾಹಿನಿ ಮಾಣಿ ಘಟಕದ ನಿರ್ಮಾಣದಲ್ಲಿ ತಯಾರಾದ ಕಿರುಚಿತ್ರ “ಆತ್ಮವಂದನಾ ದೇಶಕ್ಕಾಗಿ”.

ರಾಜೇಶ್ ಎಸ್ ಬಲ್ಯ ರವರ ಕಥೆ-ಚಿತ್ರಕಥೆ-ನಿರ್ದೇಶನದ ಈ ಕಿರುಚಿತ್ರಕ್ಕೆ ಶಿವರಾಜ್ ಪಿ.ಆರ್ ರವರು ಕೂಡ ಚಿತ್ರ ಕಥೆ ಜೊಡಿಸಿದ್ದಾರೆ.ಕಿರುಚಿತ್ರಕ್ಕೆ ಸಂಭಾಷಣೆಯನ್ನು ಪ್ರಶಾಂತ್ ಅನಂತಾಡಿ ಬರೆದಿದ್ದಾರೆ. ಪ್ರವೀಣ್ ಸಾಲ್ಯಾನ್ ಮತ್ತು ವಿಕ್ರಮ್ ಬಿಳಿಯೂರು ಅವರು ಇಡೀ ಕಿರುಚಿತ್ರದ ಕಣ್ಣುಗಳಂತೆ ಶೂಟಿಂಗ್ ಮಾಡಿದ್ದಾರೆ. ಸಂಕಲನವನ್ನು ದೀಕ್ಷಿತ್ ಮತ್ತು ಪೋಸ್ಟರ್ ಡಿಸೈನ್ ನ್ನು ಚರಣ್ ಅನಂತಾಡಿ ಮಾಡಿದ್ದು,ಮಿತುನ್ ರಾಜ್ ವಿದ್ಯಾಪುರ ಮತ್ತು ರಾಹುಲ್ ದೇವಾಡಿಗ ಕಿರುಚಿತ್ರಕ್ಕೆ ಅಧ್ಬುತ ಸಂಗೀತ ಸಂಯೋಜಿಸಿದ್ದಾರೆ. ಮತ್ತು ಈ ಕಿರುಚಿತ್ರಕ್ಕೆ ರಮೇಶ್ ಪೂಜಾರಿ ಮುಜಲ,ಹರೀಶ್ ಪೂಜಾರಿ ಬಾಕಿಲ ಮತ್ತು ಶಿವರಾಜ್ ಪಿ.ಆರ್ ರವರು ನಿರ್ಮಾಪಕರಾಗಿದ್ದಾರೆ.

ದೇಶಪ್ರೇಮ ಮತ್ತು ಆತ್ಮನಿರ್ಭರತೆಯ ಕುರಿತಾದ ಈ ಕಿರುಚಿತ್ರವು ಭಾರತ ಸರಕಾರದ ಮಾಹಿತಿ ಮತ್ತು ಪ್ರಸಾರ(Information and Broadcasting) ಇಲಾಖೆ NFDC ಜೊತೆಗೂಡಿ 2020ರ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶವ್ಯಾಪ್ತಿಯಲ್ಲಿ ಆಯೋಜಿಸಿದ ದೇಶಪ್ರೇಮ ಹಾಗೂ ಆತ್ಮನಿರ್ಭರತೆಯ ಕುರಿತಾದ 3 ನಿಮಿಷಗಳ online ಕಿರುಚಿತ್ರ ಸ್ಪರ್ಧೆಯಲ್ಲಿ ಹೆಸರು ನೋಂದಾಯಿಸಿದ ಈ ಕಿರುಚಿತ್ರ ಆಯ್ಕೆಗಾರರ ಆಯ್ಕೆಯ ಅಂತಿಮ 11 ಕಿರುಚಿತ್ರಗಳ ಪಟ್ಟಿಗೆ ಆಯ್ಕೆಯಾಗಿ ತೀರ್ಪುಗಾರರು ನೀಡುವ “Special Mention Certificate” ಗೆ ಪುರಸ್ಕೃತವಾಗಿರುತ್ತದೆ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »