TOP STORIES:

ಹದಿನೇಳು ವರ್ಷಗಳ ಕಾಲ ಸೈನಿಕನಾಗಿಯಿದ್ದ ವಾಸು ಪೂಜಾರಿ ಇಂದು ಸಾವಯವ ಕೃಷಿಕ


ಕುಂದಾಪುರ: ಹದಿನೇಳು ವರ್ಷಗಳ ಕಾಲ ದೇಶಕ್ಕಾಗಿ ಸೈನಿಕನಾಗಿ ಸೇವೆ ಸಲ್ಲಿಸಿ, ಕಾಫಿ ಎಸ್ಟೇಟ್ ಒಂದರಲ್ಲಿ ಮೆನೇಜರ್ ಆಗಿ ಕೆಲಸ ನಿರ್ವಹಿಸಿದ ವ್ಯಕ್ತಿ ಈಗ ಸಾವಯವ ಅಡಿಕೆ ತೋಟದ ಸಾಧಕ.

ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಅಬ್ಲಿಗಟ್ಟೆ ತೋಟದ ಮನೆಯ ವಾಸು ಪೂಜಾರಿ ಅವರು ತನ್ನ ಹದಿನೆಂಟುವರೆ ವಯಸ್ಸಿಗೆ ಸೇನೆಗೆ ಸೇರ್ಪಡೆಯಾದರು. ಬೆಳಗಾವಿಯಲ್ಲಿ ಕಠಿನ ತರಬೇತಿ ಪಡೆದರು. ಅಟಾರಾ ಮರಾಠಿ (18 ಎಂಎಲ್) ರೆಜಿಮೆಂಟಿನಲ್ಲಿ ಪಂಜಾಬ್, ಜಮ್ಮು, ಉತ್ತರಪ್ರದೇಶ, ಅರುಣಾಚಲ ಪ್ರದೇಶ ಮೊದಲಾದೆಡೆ ಸೇವೆ ಸಲ್ಲಿಸಿದರು. ಶ್ರೀಲಂಕಾಕ್ಕೆ ತೆರಳಿದ ಭಾರತೀಯ ಶಾಂತಿಪಡೆಯ ಯೋಧನಾಗಿ ಅಲ್ಲಿ ಶ್ರೀಲಂಕಾ ಸ್ಪೆಷಲ್ ಸಿವಿಲ್ ಪೋರ್ಸ್ ಸಿದ್ಧಪಡಿಸುವಲ್ಲಿಯೂ ಪಾತ್ರ ವಹಿಸಿದ್ದವರು.

ಸೇನೆಯ ನೆನಪುಗಳೇ ಅದೊಂದು ರೋಚಕ ಅನುಭವ. ರೋಮಾಂಚನಗೊಳಿಸುವ ನೆನಪುಗಳ ಬುತ್ತಿ. ಸೇನೆಯಿಂದ ನಿವೃತ್ತರಾಗಿ ಮಡಿಕೇರಿಯಲ್ಲಿ 10 ವರ್ಷ ಕಾಫಿ ಎಸ್ಟೇಟ್ ಒಂದನ್ನು ನೋಡಿಕೊಳ್ಳುತ್ತಿದ್ದರು.

ಮೂಲತಃ ಸಾಸ್ತಾನದ ಪಾಂಡೇಶ್ವರದವರಾದ ವಾಸು ಪೂಜಾರಿ ಅವರಿಗೆ ತಾಯ್ನಾಡ ಅಕ್ಕರೆ ಕೈಬೀಸಿ ಕರೆಯುತ್ತಿತ್ತು. ಹಾಗಾಗಿ ಬೆಳ್ವೆಯಲ್ಲಿ ಕೃಷಿ ನಡೆಸಲುದ್ದೇಶಿಸಿದರು. ಇದಕ್ಕೆ ನೆರವಾದವರು ಪತ್ನಿ ಪದ್ಮಾವತಿ. ಅವರು ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯಲ್ಲಿ ಪ್ರಗತಿಬಂಧು ಒಕ್ಕೂಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾಡು, ಹುಲ್ಲು, ದಿನ್ನೆ ಕಸ ಕಡ್ಡಿ ಬೆಳೆದ ನಾಲ್ಕೆಕರೆ ಜಾಗ. ಹುಲ್ಲಿನ ಮಾಡಿನ ಮನೆ. ಹದಿಮೂರು ವರ್ಷಗಳ ಹಿಂದೆ ಇವಿಷ್ಟೇ ಇದ್ದುದು. ಅಂತಹ ಜಾಗದಲ್ಲಿ ಬಾಳೆ ಬೆಳೆದು, ಬೂದುಕುಂಬಳ ನೆಟ್ಟು, ಅಡಿಕೆ ತೋಟ, ಫಾರಂ ಹುಲ್ಲು ಕೃಷಿ ಮಾಡಿದರು. ಅಡಿಕೆ ಫಸಲು ಬರುವವರೆಗೆ ಇಂತಹ ಸಣ್ಣಪುಟ್ಟ ಆದಾಯ ಹೊಟ್ಟೆ ಹೊರೆಯುತ್ತಿತ್ತು.

ಈಗ 2 ಎಕರೆಯಲ್ಲಿ ಸುಮಾರು 1 ಸಾವಿರದಷ್ಟು ಅಡಿಕೆ. ಮತ್ತೆ ಒಂದು ಎಕರೆಯಲ್ಲಿ ತೆಂಗು, ಕಾಳುಮೆಣಸು. ಮತ್ತುಳಿದ ಜಾಗದಲ್ಲಿ ಮೇವು ಹುಲ್ಲು, ಗೇರು ಹಾಗೂ ಕಾಡು ಮರಗಳು. ತೋಟದ ಪಕ್ಕದಲ್ಲಿ ಸೊಪ್ಪು, ಸೌದೆಗೆಂದೇ ಗಿಡ ನೆಟ್ಟು ಕಾಡು ಬೆಳೆಸಿದ್ದಾರೆ.

ಅಡಿಕೆ ಕೃಷಿಯನ್ನು ಸಾವಯವವಾಗಿ ಮಾಡಿದ್ದು ರಸಗೊಬ್ಬರದ ಸೋಂಕಿಲ್ಲ. ಐದು ಹಸುಗಳನ್ನು ಸಾಕಿ ಹೈನುಗಾರಿಕೆಯನ್ನೂ ಮಾಡುತ್ತಿದ್ದು ಅದರ ಹಟ್ಟಿಯ ನೀರು ಸ್ಲರಿಯಾಗಿ ಮೂರು ತಿಂಗಳಿಗೊಮ್ಮೆ ಪ್ರತಿ ಅಡಿಕೆ ಮರದ ಬುಡಕ್ಕೆ 15 ಲೀ.ನಷ್ಟು ಎರೆಯುತ್ತಾರೆ. ಪಶು ಆಹಾರವಾಗಿ ಅಜೋಲ ಬೆಳೆಸಿದ್ದು, ಕಾಂಪೋಸ್ಟ್ ತೊಟ್ಟಿ, ಎರೆಹುಳ ಗೊಬ್ಬರವನ್ನೂ ಮಾಡಿದ್ದಾರೆ. ಕೃಷಿ ಇಲಾಖೆಯಿಂದ ಇಂತಹ ಕೆಲಸಗಳಿಗೆ ಸಹಾಯ ದೊರೆತಿದೆ ಎನ್ನುತ್ತಾರೆ ವಾಸು ಅವರು. ವೀರಭದ್ರ ಪ್ರಗತಿಬಂಧು ತಂಡದ ಅಧ್ಯಕ್ಷರಾಗಿ, ಬೆಳ್ವೆ ಎ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿರುವ ಪದ್ಮಾವತಿ – ವಾಸು ದಂಪತಿಗೆ ಇಬ್ಬರು ಪುತ್ರಿಯರು. ಹುಲ್ಲಿನ ಮನೆಯಿದ್ದಲ್ಲಿ ಈಗ ತಾರಸಿ ಮನೆಯಿದೆ. ಮನದಲ್ಲಿ ನೆಮ್ಮದಿಯಿದೆ. ಜೈ ಜವಾನ್, ಜೈ ಕಿಸಾನ್ ಎಂಬ ಮಾತಿಗೆ ಇವರು ಅನ್ವರ್ಥ.

ಸೇನೆಯ ಬದುಕು ಬೇರೆಯೇ. ಈಗ ಕೃಷಿ ಬದುಕು ಪ್ರತ್ಯೇಕ. ಎರಡರಲ್ಲೂ ನೆಮ್ಮದಿ ಇದೆ. ಸಾಯವಯ ಕೃಷಿ ಮಾಡಬೇಕೆಂಬ ಒಲವಿನಿಂದಲೇ ಮಾಡಿದ್ದು. ಎಲ್ಲೂ ನಂಬಿದ ಕೃಷಿ ಕೈ ಕೊಟ್ಟಿಲ್ಲ. ಧರ್ಮಸ್ಥಳ ಯೋಜನೆ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ, ನೆರವಿನಿಂದ ಇನ್ನಷ್ಟು ತೊಡಗಿಸಿಕೊಳ್ಳಲು ಅನುವಾಯಿತು.

ವಾಸು ಪೂಜಾರಿ
ಮಾಜಿ ಸೈನಿಕ, ಸಾವಯವ ಕೃಷಿಕ, ಬೆಳ್ವೆ
9449255063

By- ಲಕ್ಷ್ಮೀ ಮಚ್ಚಿನ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »