TOP STORIES:

ಹದಿನೇಳು ವರ್ಷಗಳ ಕಾಲ ಸೈನಿಕನಾಗಿಯಿದ್ದ ವಾಸು ಪೂಜಾರಿ ಇಂದು ಸಾವಯವ ಕೃಷಿಕ


ಕುಂದಾಪುರ: ಹದಿನೇಳು ವರ್ಷಗಳ ಕಾಲ ದೇಶಕ್ಕಾಗಿ ಸೈನಿಕನಾಗಿ ಸೇವೆ ಸಲ್ಲಿಸಿ, ಕಾಫಿ ಎಸ್ಟೇಟ್ ಒಂದರಲ್ಲಿ ಮೆನೇಜರ್ ಆಗಿ ಕೆಲಸ ನಿರ್ವಹಿಸಿದ ವ್ಯಕ್ತಿ ಈಗ ಸಾವಯವ ಅಡಿಕೆ ತೋಟದ ಸಾಧಕ.

ಬೆಳ್ವೆ ಗ್ರಾ.ಪಂ. ವ್ಯಾಪ್ತಿಯ ಅಬ್ಲಿಗಟ್ಟೆ ತೋಟದ ಮನೆಯ ವಾಸು ಪೂಜಾರಿ ಅವರು ತನ್ನ ಹದಿನೆಂಟುವರೆ ವಯಸ್ಸಿಗೆ ಸೇನೆಗೆ ಸೇರ್ಪಡೆಯಾದರು. ಬೆಳಗಾವಿಯಲ್ಲಿ ಕಠಿನ ತರಬೇತಿ ಪಡೆದರು. ಅಟಾರಾ ಮರಾಠಿ (18 ಎಂಎಲ್) ರೆಜಿಮೆಂಟಿನಲ್ಲಿ ಪಂಜಾಬ್, ಜಮ್ಮು, ಉತ್ತರಪ್ರದೇಶ, ಅರುಣಾಚಲ ಪ್ರದೇಶ ಮೊದಲಾದೆಡೆ ಸೇವೆ ಸಲ್ಲಿಸಿದರು. ಶ್ರೀಲಂಕಾಕ್ಕೆ ತೆರಳಿದ ಭಾರತೀಯ ಶಾಂತಿಪಡೆಯ ಯೋಧನಾಗಿ ಅಲ್ಲಿ ಶ್ರೀಲಂಕಾ ಸ್ಪೆಷಲ್ ಸಿವಿಲ್ ಪೋರ್ಸ್ ಸಿದ್ಧಪಡಿಸುವಲ್ಲಿಯೂ ಪಾತ್ರ ವಹಿಸಿದ್ದವರು.

ಸೇನೆಯ ನೆನಪುಗಳೇ ಅದೊಂದು ರೋಚಕ ಅನುಭವ. ರೋಮಾಂಚನಗೊಳಿಸುವ ನೆನಪುಗಳ ಬುತ್ತಿ. ಸೇನೆಯಿಂದ ನಿವೃತ್ತರಾಗಿ ಮಡಿಕೇರಿಯಲ್ಲಿ 10 ವರ್ಷ ಕಾಫಿ ಎಸ್ಟೇಟ್ ಒಂದನ್ನು ನೋಡಿಕೊಳ್ಳುತ್ತಿದ್ದರು.

ಮೂಲತಃ ಸಾಸ್ತಾನದ ಪಾಂಡೇಶ್ವರದವರಾದ ವಾಸು ಪೂಜಾರಿ ಅವರಿಗೆ ತಾಯ್ನಾಡ ಅಕ್ಕರೆ ಕೈಬೀಸಿ ಕರೆಯುತ್ತಿತ್ತು. ಹಾಗಾಗಿ ಬೆಳ್ವೆಯಲ್ಲಿ ಕೃಷಿ ನಡೆಸಲುದ್ದೇಶಿಸಿದರು. ಇದಕ್ಕೆ ನೆರವಾದವರು ಪತ್ನಿ ಪದ್ಮಾವತಿ. ಅವರು ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯಲ್ಲಿ ಪ್ರಗತಿಬಂಧು ಒಕ್ಕೂಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಕಾಡು, ಹುಲ್ಲು, ದಿನ್ನೆ ಕಸ ಕಡ್ಡಿ ಬೆಳೆದ ನಾಲ್ಕೆಕರೆ ಜಾಗ. ಹುಲ್ಲಿನ ಮಾಡಿನ ಮನೆ. ಹದಿಮೂರು ವರ್ಷಗಳ ಹಿಂದೆ ಇವಿಷ್ಟೇ ಇದ್ದುದು. ಅಂತಹ ಜಾಗದಲ್ಲಿ ಬಾಳೆ ಬೆಳೆದು, ಬೂದುಕುಂಬಳ ನೆಟ್ಟು, ಅಡಿಕೆ ತೋಟ, ಫಾರಂ ಹುಲ್ಲು ಕೃಷಿ ಮಾಡಿದರು. ಅಡಿಕೆ ಫಸಲು ಬರುವವರೆಗೆ ಇಂತಹ ಸಣ್ಣಪುಟ್ಟ ಆದಾಯ ಹೊಟ್ಟೆ ಹೊರೆಯುತ್ತಿತ್ತು.

ಈಗ 2 ಎಕರೆಯಲ್ಲಿ ಸುಮಾರು 1 ಸಾವಿರದಷ್ಟು ಅಡಿಕೆ. ಮತ್ತೆ ಒಂದು ಎಕರೆಯಲ್ಲಿ ತೆಂಗು, ಕಾಳುಮೆಣಸು. ಮತ್ತುಳಿದ ಜಾಗದಲ್ಲಿ ಮೇವು ಹುಲ್ಲು, ಗೇರು ಹಾಗೂ ಕಾಡು ಮರಗಳು. ತೋಟದ ಪಕ್ಕದಲ್ಲಿ ಸೊಪ್ಪು, ಸೌದೆಗೆಂದೇ ಗಿಡ ನೆಟ್ಟು ಕಾಡು ಬೆಳೆಸಿದ್ದಾರೆ.

ಅಡಿಕೆ ಕೃಷಿಯನ್ನು ಸಾವಯವವಾಗಿ ಮಾಡಿದ್ದು ರಸಗೊಬ್ಬರದ ಸೋಂಕಿಲ್ಲ. ಐದು ಹಸುಗಳನ್ನು ಸಾಕಿ ಹೈನುಗಾರಿಕೆಯನ್ನೂ ಮಾಡುತ್ತಿದ್ದು ಅದರ ಹಟ್ಟಿಯ ನೀರು ಸ್ಲರಿಯಾಗಿ ಮೂರು ತಿಂಗಳಿಗೊಮ್ಮೆ ಪ್ರತಿ ಅಡಿಕೆ ಮರದ ಬುಡಕ್ಕೆ 15 ಲೀ.ನಷ್ಟು ಎರೆಯುತ್ತಾರೆ. ಪಶು ಆಹಾರವಾಗಿ ಅಜೋಲ ಬೆಳೆಸಿದ್ದು, ಕಾಂಪೋಸ್ಟ್ ತೊಟ್ಟಿ, ಎರೆಹುಳ ಗೊಬ್ಬರವನ್ನೂ ಮಾಡಿದ್ದಾರೆ. ಕೃಷಿ ಇಲಾಖೆಯಿಂದ ಇಂತಹ ಕೆಲಸಗಳಿಗೆ ಸಹಾಯ ದೊರೆತಿದೆ ಎನ್ನುತ್ತಾರೆ ವಾಸು ಅವರು. ವೀರಭದ್ರ ಪ್ರಗತಿಬಂಧು ತಂಡದ ಅಧ್ಯಕ್ಷರಾಗಿ, ಬೆಳ್ವೆ ಎ ಒಕ್ಕೂಟದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆಯಾಗಿರುವ ಪದ್ಮಾವತಿ – ವಾಸು ದಂಪತಿಗೆ ಇಬ್ಬರು ಪುತ್ರಿಯರು. ಹುಲ್ಲಿನ ಮನೆಯಿದ್ದಲ್ಲಿ ಈಗ ತಾರಸಿ ಮನೆಯಿದೆ. ಮನದಲ್ಲಿ ನೆಮ್ಮದಿಯಿದೆ. ಜೈ ಜವಾನ್, ಜೈ ಕಿಸಾನ್ ಎಂಬ ಮಾತಿಗೆ ಇವರು ಅನ್ವರ್ಥ.

ಸೇನೆಯ ಬದುಕು ಬೇರೆಯೇ. ಈಗ ಕೃಷಿ ಬದುಕು ಪ್ರತ್ಯೇಕ. ಎರಡರಲ್ಲೂ ನೆಮ್ಮದಿ ಇದೆ. ಸಾಯವಯ ಕೃಷಿ ಮಾಡಬೇಕೆಂಬ ಒಲವಿನಿಂದಲೇ ಮಾಡಿದ್ದು. ಎಲ್ಲೂ ನಂಬಿದ ಕೃಷಿ ಕೈ ಕೊಟ್ಟಿಲ್ಲ. ಧರ್ಮಸ್ಥಳ ಯೋಜನೆ ಹಾಗೂ ಕೃಷಿ ಇಲಾಖೆಯ ಮಾರ್ಗದರ್ಶನ, ನೆರವಿನಿಂದ ಇನ್ನಷ್ಟು ತೊಡಗಿಸಿಕೊಳ್ಳಲು ಅನುವಾಯಿತು.

ವಾಸು ಪೂಜಾರಿ
ಮಾಜಿ ಸೈನಿಕ, ಸಾವಯವ ಕೃಷಿಕ, ಬೆಳ್ವೆ
9449255063

By- ಲಕ್ಷ್ಮೀ ಮಚ್ಚಿನ


Related Posts

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »