TOP STORIES:

FOLLOW US

ಹದಿಹರೆಯದವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ.! ಈ ಕುರಿತು ವೈದ್ಯರಿಂದ ಮಹತ್ವದ ಮಾಹಿತಿ


ಬಹಳ ದಿನಗಳಿಂದ ಇದ್ದ ಭಯವೊಂದು ನಿಧಾನವಾಗಿ ವಾಸ್ತವದ ರೂಪ ತಾಳುತ್ತಿದ್ದು, 40 ವರ್ಷ ವಯಸ್ಸಿನ ಒಳಗಿನ ಮಂದಿಯಲ್ಲೂ ಹೃದಯಾಘಾತವಾಗುವ ಸಾಧ್ಯತೆಗಳು ದಿನೇ ದಿನೇ ಹೆಚ್ಚುತ್ತಲೇ ಇದೆ.

ಪುರುಷರಲ್ಲಿ ಸಾಮಾನ್ಯವಾಗಿ 50ರ ಹರೆಯದಲ್ಲಿ ಹಾಗೂ ಮಹಿಳೆಯರಲ್ಲಿ 60ರ ಹರೆಯದಲ್ಲಿ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಆಧುನಿಕ ವೈದ್ಯಕೀಯ ಲೋಕ ಲೆಕ್ಕಾಚಾರ ಮಾಡುತ್ತಿದ್ದ ನಡುವೆಯೇ ಈ ರೀತಿಯ ಹೊಸದೊಂದು ಆತಂಕ ಬೇರು ಬಿಡುತ್ತಿದೆ.

“40ಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗುವುದನ್ನು ನೋಡುವುದು ಬಹಳ ಅಪರೂಪವಾಗಿತ್ತು. ಈಗ ಆಗುತ್ತಿರುವುದನ್ನು ನೋಡಿದರೆ ನಾವೆಲ್ಲೊ ತಪ್ಪು ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎನಿಸುತ್ತಿದೆ,” ಎಂದು ಬೋಸ್ಟನ್‌ನಲ್ಲಿರುವ ಹಾರ್ವಡ್‌ ವೈದ್ಯಕೀಯ ಶಾಲೆಯ ಪ್ರೊಫೆಸರ್‌ ರಾನ್ ಬ್ಲಾಂಕ್‌ಸ್ಟೀನ್ ತಿಳಿಸಿದ್ದಾರೆ.

ಈ ಸಮಸ್ಯೆ ಕೇವಲ ಪಾಶ್ಚಾತ್ಯ ಜಗತ್ತಿಗೆ ಮಾತ್ರವೇ ಸೀಮಿತವಾಗಿಲ್ಲ. ಭಾರತದಲ್ಲೂ ಸಹ ಈ ರೀತಿ ದಿಢೀರ್‌ ಹೃದಯಾಘಾತಗಳಿಂದ ಸಾವು ಸಂಭವಿಸುವುದು ಬಲು ಸಾಮಾನ್ಯವಾಗುತ್ತಿದೆ. ಬಿಗ್ ಬಾಸ್ ಖ್ಯಾತಿಯ ಸಿದ್ಧಾರ್ಥ್‌ ಶುಕ್ಲಾ ಈ ಪಟ್ಟಿಗೆ ಸೇರಿದ ಹೊಸ ಹೆಸರಾಗಿದೆ ಅಷ್ಟೇ.

ಈ ಬಗ್ಗೆ ವಿವರಣೆ ಕೊಡುವ ಮುಂಬೈ ಗ್ಲೋಬಲ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ ಚರಣ್ ಲಂಜೇವಾರ್‌, “ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗಲು ಹಲವಾರು ಕಾರಣಗಳಿವೆ. ನಿಷ್ಕ್ರಿಯ ಜೀವನಶೈಲಿ, ದೈಹಿಕ ವ್ಯಾಯಾಮದ ಕೊರತೆಗಳು ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತವಾಗಲು ಮುಖ್ಯ ಕಾರಣಗಳಾಗುತ್ತವೆ” ಎಂದಿದ್ದಾರೆ.

“ತಮ್ಮ 20ರ ವಯೋಮಾನದಲ್ಲೇ ಹೃದಯಾಘಾತಕ್ಕೆ ತುತ್ತಾಗುವ ಮಂದಿ, ಮಹಿಳೆಯರನ್ನೂ ಒಳಗೊಂಡು, ಹೆಚ್ಚಾಗುತ್ತಿದ್ದಾರೆ. ದಶಕದ ಹಿಂದೆ ಹೀಗೆಲ್ಲಾ ಆಗುತ್ತಿರಲಿಲ್ಲ. ಜೊತೆಗೆ ಈ ಕೋವಿಡ್ ಸಾಂಕ್ರಮಿಕದ ಕಾಲಘಟ್ಟದಲ್ಲಿ ಹೃದಯಾಘಾತಗಳ ಕೇಸ್‌ಗಳು ಇನ್ನಷ್ಟು ಹೆಚ್ಚಾಗಿರುವುದನ್ನು ಕಂಡಿದ್ದೇವೆ,” ಎನ್ನುತ್ತಾರೆ ಚರಣ್.

“ಶಿಸ್ತಿನ ಪಥ್ಯ, ವಾಸ್ತವಿಕ ಹಾಗೂ ಸುದೀರ್ಘವಾಧಿಗೆ ಮಾಡಬಹುದಾದ ವ್ಯಾಯಾಮದ ಅಭ್ಯಾಸ, ಒತ್ತಡ ರಹಿತ ಜೀವನಗಳು ಕಡಿಮೆ ವಯಸ್ಸಿನಲ್ಲಿ ಹೃದಯಾಘಾತದ ಸಾಧ್ಯತೆ ಕಡಿಮೆ ಮಾಡುವ ಉತ್ತಮ ಕ್ರಮಗಳು. ಪ್ರತಿಯೊಬ್ಬ ವಯಸ್ಕನೂ ಸಹ ದೈಹಿಕ ತಜ್ಞರ ಬಳಿ ತಪಾಸಣೆಗೆ ಒಳಪಟ್ಟು, 30ರ ವಯಸ್ಸಿಗೆ ಕಾಲಿಡುವ ಮುನ್ನವೇ ನಿರ್ದಿಷ್ಟ ರಕ್ತ ಪರೀಕ್ಷೆಗಳನ್ನು ಮಾಡಿಸಿಕೊಳ್ಳುವುದು ಉತ್ತಮ. ರಕ್ತ ಪರೀಕ್ಷೆಯಲ್ಲಿ ಲಿಪಿಡ್ ಹಾಗೂ ಸಕ್ಕರೆ ಅಂಶವನ್ನು ಪರಿಶೀಲನೆ ಮಾಡಬೇಕು,” ಎಂದು ವಿವರಿಸಿದ್ದಾರೆ ಚರಣ್.

ನಡಿಗೆ ಹಾಗೂ ಸೈಕ್ಲಿಂಗ್‌ಗಳಿಂದಾಗಿ ಹೃದಯಾಘಾತದ ಸಾಧ್ಯತೆಯು ಬ್ರಿಟನ್‌ನ 4.3 ಕೋಟಿ ಮಂದಿಯಲ್ಲಿ ಕಡಿಮೆಯಾಗಿದೆ ಎಂದು ಬ್ರಿಟನ್‌ನ ಲೀಡ್ಸ್‌ ವಿವಿಯ ಅಧ್ಯಯನವೊಂದು ತಿಳಿಸಿದೆ.

“ನಿಮ್ಮ ಕೆಲಸದ ಸ್ಥಳಕ್ಕೆ ತಲುಪಬೇಕಾದಲ್ಲಿ ನಡಿಗೆ ಹಾಗೂ ಸೈಕ್ಲಿಂಗ್ ಮಾಡಬೇಕಾದ ಅಗತ್ಯ ಹೆಚ್ಚಾದಲ್ಲಿ ಖುಷಿ ಪಡಿ. ನಮ್ಮ ಬ್ಯುಸಿ ಜೀವನದಲ್ಲಿ ವ್ಯಾಯಾಮ ಮಾಡಲು ಸಮಯ ಸಿಗದೇ ಇರಬಹುದು. ಆದರೆ ವ್ಯಾಯಾಮ ಮಾಡಲು ನೀವು ಜಿಮ್‌ಗೆ ಹೋಗಿ ಗಂಟೆಗಟ್ಟಲೇ ಟ್ರೆಡ್‌ಮಿಲ್ ಮೇಲೆ ಕಳೆಯಬೇಕೆಂದೇನಿಲ್ಲ,” ಎನ್ನುವ ಬ್ರಿಟಿಷ್ ಹಾರ್ಟ್ ಫೌಂಡೇಶನ್‌ನ ನಿರ್ದೇಶಕ ಮೆಟಿನ್ ಅವ್ಕಿರನ್, “ನಿಮ್ಮ ಸಂಚಾರಕ್ಕೆ ಬೈಸಿಕಲ್ ಅವಲಂಬಿಸಿದಲ್ಲಿ, ನಿಮ್ಮ ಹೃದಯ ಬಡಿತಕ್ಕೆ ಉತ್ತಮ. ಇದು ಆಯ್ಕೆಯಲ್ಲ, ಕೆಲ ಬೀದಿಗಳ ಹಿಂದೆಯೇ ನಿಮ್ಮ ವಾಹನ ಪಾರ್ಕ್ ಮಾಡುವುದು ಅಥವಾ ಕೆಲ ಸ್ಟಾಪ್‌ಗಳ ಹಿಂದೆಯೇ ಬಸ್‌ನಿಂದ ಇಳಿಯುವುದು ಇನ್ನಷ್ಟು ಆರೋಗ್ಯಕರ ಜೀವನಕ್ಕೆ ನೆರವಾಗಬಲ್ಲವು,” ಎಂದಿದ್ದಾರೆ.


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »