TOP STORIES:

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »