TOP STORIES:

ಹಲವಾರು ಕ್ಷೇತ್ರದಲ್ಲಿ ತನ್ನ ಚಾಪನ್ನು ಮೂಡಿಸಿದ ಬಾಲ ಪ್ರತಿಭೆ ಸೋಹನ ಶಂಕರ್ ಉಡುಪಿ


ಸೋಹನ ಇವರು ಶಂಕರ್ ಎಸ್ ಪೂಜಾರಿ ಮತ್ತು ನಾಗರತ್ನ ಶಂಕರ ಪೂಜಾರಿ ಯವರ ದ್ವಿತೀಯ ಪುತ್ರಿ. ಪ್ರಸ್ತುತ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿ ಅಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ .

ಕಲಿಕೆಯಲ್ಲಿ ಮಾತ್ರವಲ್ಲದೆ ಕ್ರಾಫ್ಟ್ , ಡ್ರಾಯಿಂಗ್, ಭಕ್ತಿಗೀತೆ , ಮತ್ತು ನೃತ್ಯದಲ್ಲೂ ತಮ್ಮ ಛಾಪನ್ನು ಮೂಡಿಸಿದ್ದಾರೆ. ತನ್ನ ಬಾಲ್ಯದಲ್ಲಿ ಯೇ ನೃತ್ಯದಲ್ಲಿ ಆಸಕ್ತಿ ಹೊಂದಿದ್ದ ಇವರು ದೂರದಶ೯ನದಲ್ಲಿ ಬರುವಂತಹ ಹಾಡಿಗೆ ಹೆಜ್ಜೆ ಹಾಕುತ್ತಿದ್ದರು಼.

ತನ್ನ 4ನೇ ವಯಸ್ಸಿನಲ್ಲಿ ನೃತ್ಯಭ್ಯಾಸವನ್ನು ಪ್ರಾರಂಭಿಸಿದ ಇವರು ಹೆಸರಂತ ನೃತ್ಯ ಸಂಸ್ಥೆಯಾದ ಎಕ್ಸ್ಟ್ರೀಮ್ ಡಾನ್ಸ್ ಅಕಾಡೆಮಿಯಲ್ಲಿ ಗುರುಗಳಾದ ಮಂಜಿತ್ ಶೆಟ್ಟಿ ಇವರಲ್ಲಿ ನೃತ್ಯ ವನ್ನು ಕಲಿಯುತ್ತಿದ್ದಾರೆ. ಭರತ ನಾಟ್ಯದಲ್ಲಿ ಆಸಕ್ತಿ ಹೊಂದಿರುವ ಇವರು ಭರತ ನಾಟ್ಯವನ್ನು ಶ್ರೀರಕ್ಷ ಮತ್ತು ಅನನ್ಯ ಇವರಲ್ಲಿ ಕಲಿಯುತ್ತಿದ್ದಾರೆ. ಮಾತ್ರವಲ್ಲದೆ ಯಕ್ಷಗಾನದಲ್ಲು ಮಿಂಚುತ್ತಿರುವ ಈ ಪ್ರತಿಭೆ ಯಕ್ಷಗಾನವನ್ನು ಗುರುಗಳಾದ ನರಸಿಂಹ ತುಂಗ ಸಾಲಿಗ್ರಾಮ ಇವರಲ್ಲಿ ಕಳೆಯುತ್ತಿದ್ದಾರೆ.

ಬಾಲ್ಯದಲ್ಲಿ ಶ್ರೀ ಕೃಷ್ಣ ವೇಷ ಸ್ಪಧೆ೯ಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಗರಿಮೆ ಇವರದ್ದು. ತನ್ನ ನೃತ್ಯ ತಂಡದೊಂದಿಗೆ ಹಲವಾರು ಕಡೆಗಳಲ್ಲಿ ನೃತ್ಯ ಪ್ರದಶ೯ನವನ್ನು ನೀಡಿ ಜನರ ಮನಸ್ಸನ್ನು ಗೆದ್ದು ತನ್ನದೆ ಅಭಿಮಾನಿ ಬಳಗವನ್ನು ಹೊಂದಿರುವ ಇವರು ಜಿಲ್ಲಾ ಮಟ್ಟ ಮಾತ್ರವಲ್ಲದೆ ರಾಜ್ಯ ಮಟ್ಟದಲ್ಲು ಬಹುಮಾನವನ್ನು ಗಳಿಸಿದ ಕೀತಿ೯ ಇವರದು.

2018 -19 ರಲ್ಲಿ ಡೖೆಜಿ ವಲ್ಡ್ ಚಾನೇಲ್ ನಲ್ಲಿ ನಡೆದ ಜೂನಿಯರ್ ಮಸ್ತೀ ಸೀಜನ್ ೨ ನಲ್ಲಿ ಸೆಮಿ ಪೆೃನಲ್ ವರೆಗೆ ತಲುಪಿ. ಉತ್ತಮ ನೃತ್ಯ ಎಕ್ಸ್ ಪ್ರೇಶನ್ ನೀಡಿ ತೀಪು೯ಗಾರರ ಮೆಚ್ಚುಗೆ ಗಳಿಸಿದ್ದಾರೆ. ದೈಜಿ ವಲ್ಡ್೯ ಚಾನೆಲ್ ಗ್ರಾಂಡ್ ಫಿನಾಲೆಯಲ್ಲಿ “QUEEN OF DANCE JUNIOR MASTI SESON 2 “ಎಂಬ ಬಿರುದು ನೀಡಿ ಗೌರವಿಸಿದ್ದಾರೆ.

ಸ್ಪಂದನ ಟಿವಿಯಲ್ಲಿ ನಡೆಯುತ್ತಿದ್ದ ‘Coffee time with sony’ ಯಲ್ಲಿ ಭಾಗವಹಿಸಿದ್ದಾರೆ ಬೇರೆ ರಾಜ್ಯಗಳಲ್ಲಿ ತನ್ನ ತಂಡದೊಂದಿಗೆ ನೃತ್ಯ ಪ್ರದಶ೯ವನ್ನು ನೀಡಿರುತ್ತಾರೆ.

ಇತೀಚಿಗೆ ಬಿಡುಗಡೆಯಾದ ನಿವಿುಷ ಕಲಾವಿದರು ಕಟಪಾಡಿ ಇವರ ಪ್ರಸ್ತುತ ಪಡಿಸಿದ ಮೊದಲ ‘ Me and She’ musical ಆಲ್ಬಂನಲ್ಲಿ ನಟಿಸಿ ಸಮ್ಮಾನಕ್ಕೆ ಪಾತ್ರರಾಗಿದ್ದಾರೆ.

ಈ ಬಾಲ ಪ್ರತಿಭೆ ಇನ್ನಷ್ಟು ಉತ್ತುಂಗಕ್ಕೆರಲು ಕಲಾ ಮಾತೆಯ ಕೃಪೆ , ತಂದೆ ತಾಯಿಯ ಆಶಿರ್ವಾದ ಸದಾ ಇರಲಿ .

Credits: ಲಾವಣ್ಯ ಪೂಜಾರಿ ಸುಂಕದಕಟ್ಟೆ


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »