TOP STORIES:

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ


ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ.

(Copyrights owned by: billavaswarriors.com )

ಕೊರೋನಾ ಮೊದಲ ಅಲೆ ಮುಗಿಯಿತು ಎನ್ನವಾಗಲೇ ಎರಡನೆಯ ಧಾಂಗುಡಿಯಿಟ್ಟಿತ್ತು. ಇದರ ದಾಳಿಗೆ ಸಿಲುಕಿದವರು ಅದೆಷ್ಟೋ ಮಂದಿ. ಈ ನಡುವೆ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಬದುಕು ಕಳೆದುಕೊಂಡವರಿಗೆ ಲೆಕ್ಕವಿಲ್ಲ.

ಕಾಡಿದ ಕೊರೋನಾದಿಂದಾಗಿ ದಿನಗೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ನಿರ್ಗತಿಕರು, ಭಿಕ್ಷೆ ಬೇಡಿಕೊಂಡು ದಿನ ಕಳೆಯುತ್ತಿದ್ದವರ ಸ್ಥಿತಿಯಂತೂ ಮತ್ತಷ್ಟು ಶೋಚನೀಯವಾಗಿದೆ. ಆದರೆ ಮಂಗಳೂರಿನಲ್ಲಿ ಯುವಕರ ತಂಡವೊಂದು ಇವರ ನೆರವಿಗೆ ನಿಂತಿದೆ. ಸದ್ದಿಲ್ಲದೆ ಅನ್ನದಾನದ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಇವರು ಕೊರೋನಾ ವಾರಿಯರ್‍ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ನಿಜವಾಗಿಯೂ ಹಸಿದವರ ಪಾಲಿನ ವಾರಿಯರ್‍ಸ್!

ಸಮಾನ ಮನಸ್ಕ ಯುವಕರ ತಂಡ

ಮಂಗಳೂರಿನ ಉರ್ವದಲ್ಲಿ ಪುಟ್ಟ ಹೋಟೆಲ್ ನಡೆಸುತ್ತಿರುವ ರಕ್ಷಿತ್ ಸಾಲಿಯಾನ್ ನೇತೃತ್ವದ ತಂಡವೇ ಕೊರೋನಾ ಅವಯಲ್ಲಿ ಹಸಿದವರ ಪಾಲಿಗೆ ಸಂಜೀವಿನಿಯಾದ ತಂಡ. ಕೊರೋನಾ ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಮನೆಯಿಂದ ಹೊರಬರಲಾಗದ ಸ್ಥಿತಿಯಿದೆ. ಮನೆ ಇದ್ದವರು ಮನೆಯಲ್ಲಿ ತುತ್ತು ಅನ್ನವನ್ನಾದರೂ ತಿಂದು ದಿನ ಕಳೆಯಬಹುದು. ಆದರೆ ನಿರ್ಗತಿಕರು, ಅಂಗವಿಕಲರು, ಡೇರೆ ಹಾಕಿಕೊಂಡು ಬದುಕು ಕಟ್ಟಿಕೊಂಡವರ ಪಾಡೇನು? ಇವರ ಬಗ್ಗೆ ಯೋಚನೆ ಬಂದದ್ದೇ ತಡ ರಕ್ಷಿತ್ ಸಾಲಿಯಾನ್ ನೇತೃತ್ವದ ಸಮಾನ ಮನಸ್ಕ ಯುವಕರು ಒಂದು ತಂಡ ಕಟ್ಟಿದ್ದರು. ಈ ತಂಡದ ಶ್ರಮದಿಂದಾಗಿ ನಿತ್ಯ ಹಸಿವಿನಿಂದ ಬಳಲುತ್ತಿರುವವರ ಹಸಿವು ನೀಗುತ್ತಿದೆ.

ಯಾವುದೇ ಪ್ರಚಾರ ಬಯಸದೆ ನಿರಂತರ ನೂರಾರು ಮಂದಿಗೆ ಅನ್ನದಾನ ಮಾಡುತ್ತಿದ್ದಾರೆ. ಇವರ ಈ ರೀತಿಯ ಸೇವೆಗೆ ವ್ಯಾಪಕ ಶ್ಲಾಘನೆಯೂ ವಕ್ತವಾಗುತ್ತಿದೆ. ಸಮಾಜದಲ್ಲಿ ಯಾರೂ ಹಸಿದಿರಬಾರದು, ನಮ್ಮಿಂದಾದ ನೆರವು ನೀಡಬೇಕು ಎಂಬ ಮಾನವೀಯ ನೆಲಯಲ್ಲಿ ಯುವಕರ ತಂಡ ಕೆಲಸ ಮಾಡುತ್ತಿದೆ.

ವರುಷದಿಂದ ನಿರಂತರ ಸೇವೆ

ಕಳೆದ ವರ್ಷ ಕೊರೋನಾ ಮೊದಲ ಅಲೆಯ ಲಾಕ್‌ಡೌನ್‌ನ ಮೊದಲ ದಿನದಿಂದ ಯುವಕರ ತಂಡ ಈ ಕಾರ್ಯವನ್ನು ಪ್ರಾರಂಭಿಸಿದೆ. ಅಲ್ಲಿಂದ ಶುರುವಾದ ಈ ಕಾಯಕ ಈ ವರ್ಷ ಕೋವಿಡ್ ಎರಡನೆಯ ಅಲೆಯ ಸಂದರ್ಭದಲ್ಲಿಯೂ ಮುಂದುವರಿದಿದೆ.

(Copyrights owned by: billavaswarriors.com )

ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಹಸಿವಿನಿಂದ ಕಂಗೆಡಬಾರದು. ಅದಕ್ಕಾಗಿ ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ. ಹಸಿದವರಿಗೆ ಅನ್ನ ನೀಡುವುದರಲ್ಲಿ ನಮಗೆ ಖುಷಿ ಇದೆ ಎನ್ನುತ್ತಾರೆ ತಂಡದ ಸದಸ್ಯರಲ್ಲಿ ಒಬ್ಬರಾಗಿರುವ ರಕ್ಷಿತ್ ಸಾಲಿಯಾನ್.

ಕಳೆದ ವರ್ಷ ೧೫ ಸಾವಿರಕ್ಕೂ ಅಕ ಮಂದಿಗೆ ಊಟ

ಕಳೆದ ವರ್ಷ ಲಾಕ್‌ಡೌನ್ ಅವಯಲ್ಲಿ ೧೫,೦೦೦ಕ್ಕೂ ಹೆಚ್ಚು ಆಹಾರದ ಪೊಟ್ಟಣದ ಜೊತೆಗೆ ನೀರಿನ ಬಾಟಲಿಗಳು, ೨೫೦ಕ್ಕಿಂತಲೂ ಅಕ ರೇಷನ್ ಕಿಟ್‌ಗಳನ್ನು ಹಂಚಲಾಗಿದ್ದು ಈ ಬಾರಿಯೂ ಅದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿದಿನ ೩೦೦ರಷ್ಟು ಮಂದಿಗೆ ಆಹಾರ ಒದಗಿಸುತ್ತಿದ್ದೇವೆ. ಆಹಾರ ಪೂರೈಕೆಯಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಬುಧವಾರ ನೂರಾರು ಮಂದಿಗೆ ಗುಣಮಟ್ಟದ ಮಾಸ್ಕ್‌ನ್ನು ಕೂಡ ಹಂಚಿದ್ದೇವೆ. ಸ್ಟೇಟ್ ಬ್ಯಾಂಕ್ ಪರಿಸದಲ್ಲಿ ಹಲವು ಮಂದಿಗೆ ಸೊಳ್ಳೆ ಪರದೆ ವಿತರಿಸುವ ಕೆಲಸವೂ ಆಗಿದೆ ಎನ್ನತ್ತಾರೆ ರಕ್ಷಿತ್ ಸಾಲಿಯಾನ್.

ತಂಡದ ವಾರಿಯರ್‍ಸ್ ಇವರು

ನಿರ್ಗತಿಕರ ನೆರವಿಗೆ ನಿಂತಿರುವ ಸಮಾನ ಮನಸ್ಕ ಯುವಕರ ತಂಡದಲ್ಲಿ ೧೦ ಮಂದಿಯಿದ್ದು, ಪ್ರತಿಯೊಬ್ಬರೂ ಆಹಾರ ವಿತರಣೆಯ ಕಾರ್ಯದಲ್ಲಿ ಕೈ ಜೋಡಿಸುತ್ತಾರೆ. ಜೋಶುವಾ ಡಿಸೋಜಾ, ಸಂಜಯ್ ಕಾಮತ್, ಚೈತನ್ಯ, ಹರಿಪ್ರಸಾದ್, ರಾಹುಲ್ ಪೈ, ಮಹೇಶ್, ನಿತಿನ್ ಮಾಡ, ಅರುಣ್ ಪೈ, ಅಜಿತ್ ಕಾಮತ್, ಸಂದೇಶ್, ಆಯುಷ್ಮಾನ್ ಅಮೀನ್, ಪುಣಿಕ್ ಶೆಟ್ಟಿ ಮುಂತಾದವರು ತಂಡದಲ್ಲಿ ವಾರಿಯರ್‍ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ದಿನಕ್ಕೆ ಸುಮಾರು ೩೦೦ ಮಂದಿಗೆ ಆಹಾರ

ನಗರದ ಉರ್ವ, ಮಣ್ಣಗುಡ್ಡೆ, ಪಿವಿಎಸ್ ಸ್ಟೇಟ್‌ಬ್ಯಾಂಕ್, ಹಂಪನಕಟ್ಟೆ, ಅಳಕೆ ಹೀಗೆ ನಗರದ ವಿವಿಧೆಡೆ ಇರುವ ನಿರ್ಗತಿಕರಿಗೆ ಆಹಾರ ವಿತರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಕೆಲವರು ಮನೆಯಲ್ಲಿ ಯಾವ ಆಹಾರ ಪದಾರ್ಥವೂ ಇಲ್ಲ ಎಂದು ಕರೆ ಮಾಡುತ್ತಾರೆ. ಅವರಿಗೂ ಅಗತ್ಯ ದಿನಸಿಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟನ್ನು ನಿತ್ಯ ಮಾಡುತ್ತಿದ್ದೇವೆ. ಈ ರೀತಿ ಕೆಲಸ ಮಾಡುವುದರಲ್ಲೂ ಒಂದು ರೀತಿಯ ಖುಷಿಯಿದೆ.

ಬರಹ – ರಕ್ಷಿತ್ ಸಾಲಿಯಾನ್.

(Copyrights owned by: billavaswarriors.com )


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »