TOP STORIES:

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ


ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ.

(Copyrights owned by: billavaswarriors.com )

ಕೊರೋನಾ ಮೊದಲ ಅಲೆ ಮುಗಿಯಿತು ಎನ್ನವಾಗಲೇ ಎರಡನೆಯ ಧಾಂಗುಡಿಯಿಟ್ಟಿತ್ತು. ಇದರ ದಾಳಿಗೆ ಸಿಲುಕಿದವರು ಅದೆಷ್ಟೋ ಮಂದಿ. ಈ ನಡುವೆ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಬದುಕು ಕಳೆದುಕೊಂಡವರಿಗೆ ಲೆಕ್ಕವಿಲ್ಲ.

ಕಾಡಿದ ಕೊರೋನಾದಿಂದಾಗಿ ದಿನಗೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ನಿರ್ಗತಿಕರು, ಭಿಕ್ಷೆ ಬೇಡಿಕೊಂಡು ದಿನ ಕಳೆಯುತ್ತಿದ್ದವರ ಸ್ಥಿತಿಯಂತೂ ಮತ್ತಷ್ಟು ಶೋಚನೀಯವಾಗಿದೆ. ಆದರೆ ಮಂಗಳೂರಿನಲ್ಲಿ ಯುವಕರ ತಂಡವೊಂದು ಇವರ ನೆರವಿಗೆ ನಿಂತಿದೆ. ಸದ್ದಿಲ್ಲದೆ ಅನ್ನದಾನದ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಇವರು ಕೊರೋನಾ ವಾರಿಯರ್‍ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ನಿಜವಾಗಿಯೂ ಹಸಿದವರ ಪಾಲಿನ ವಾರಿಯರ್‍ಸ್!

ಸಮಾನ ಮನಸ್ಕ ಯುವಕರ ತಂಡ

ಮಂಗಳೂರಿನ ಉರ್ವದಲ್ಲಿ ಪುಟ್ಟ ಹೋಟೆಲ್ ನಡೆಸುತ್ತಿರುವ ರಕ್ಷಿತ್ ಸಾಲಿಯಾನ್ ನೇತೃತ್ವದ ತಂಡವೇ ಕೊರೋನಾ ಅವಯಲ್ಲಿ ಹಸಿದವರ ಪಾಲಿಗೆ ಸಂಜೀವಿನಿಯಾದ ತಂಡ. ಕೊರೋನಾ ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಮನೆಯಿಂದ ಹೊರಬರಲಾಗದ ಸ್ಥಿತಿಯಿದೆ. ಮನೆ ಇದ್ದವರು ಮನೆಯಲ್ಲಿ ತುತ್ತು ಅನ್ನವನ್ನಾದರೂ ತಿಂದು ದಿನ ಕಳೆಯಬಹುದು. ಆದರೆ ನಿರ್ಗತಿಕರು, ಅಂಗವಿಕಲರು, ಡೇರೆ ಹಾಕಿಕೊಂಡು ಬದುಕು ಕಟ್ಟಿಕೊಂಡವರ ಪಾಡೇನು? ಇವರ ಬಗ್ಗೆ ಯೋಚನೆ ಬಂದದ್ದೇ ತಡ ರಕ್ಷಿತ್ ಸಾಲಿಯಾನ್ ನೇತೃತ್ವದ ಸಮಾನ ಮನಸ್ಕ ಯುವಕರು ಒಂದು ತಂಡ ಕಟ್ಟಿದ್ದರು. ಈ ತಂಡದ ಶ್ರಮದಿಂದಾಗಿ ನಿತ್ಯ ಹಸಿವಿನಿಂದ ಬಳಲುತ್ತಿರುವವರ ಹಸಿವು ನೀಗುತ್ತಿದೆ.

ಯಾವುದೇ ಪ್ರಚಾರ ಬಯಸದೆ ನಿರಂತರ ನೂರಾರು ಮಂದಿಗೆ ಅನ್ನದಾನ ಮಾಡುತ್ತಿದ್ದಾರೆ. ಇವರ ಈ ರೀತಿಯ ಸೇವೆಗೆ ವ್ಯಾಪಕ ಶ್ಲಾಘನೆಯೂ ವಕ್ತವಾಗುತ್ತಿದೆ. ಸಮಾಜದಲ್ಲಿ ಯಾರೂ ಹಸಿದಿರಬಾರದು, ನಮ್ಮಿಂದಾದ ನೆರವು ನೀಡಬೇಕು ಎಂಬ ಮಾನವೀಯ ನೆಲಯಲ್ಲಿ ಯುವಕರ ತಂಡ ಕೆಲಸ ಮಾಡುತ್ತಿದೆ.

ವರುಷದಿಂದ ನಿರಂತರ ಸೇವೆ

ಕಳೆದ ವರ್ಷ ಕೊರೋನಾ ಮೊದಲ ಅಲೆಯ ಲಾಕ್‌ಡೌನ್‌ನ ಮೊದಲ ದಿನದಿಂದ ಯುವಕರ ತಂಡ ಈ ಕಾರ್ಯವನ್ನು ಪ್ರಾರಂಭಿಸಿದೆ. ಅಲ್ಲಿಂದ ಶುರುವಾದ ಈ ಕಾಯಕ ಈ ವರ್ಷ ಕೋವಿಡ್ ಎರಡನೆಯ ಅಲೆಯ ಸಂದರ್ಭದಲ್ಲಿಯೂ ಮುಂದುವರಿದಿದೆ.

(Copyrights owned by: billavaswarriors.com )

ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಹಸಿವಿನಿಂದ ಕಂಗೆಡಬಾರದು. ಅದಕ್ಕಾಗಿ ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ. ಹಸಿದವರಿಗೆ ಅನ್ನ ನೀಡುವುದರಲ್ಲಿ ನಮಗೆ ಖುಷಿ ಇದೆ ಎನ್ನುತ್ತಾರೆ ತಂಡದ ಸದಸ್ಯರಲ್ಲಿ ಒಬ್ಬರಾಗಿರುವ ರಕ್ಷಿತ್ ಸಾಲಿಯಾನ್.

ಕಳೆದ ವರ್ಷ ೧೫ ಸಾವಿರಕ್ಕೂ ಅಕ ಮಂದಿಗೆ ಊಟ

ಕಳೆದ ವರ್ಷ ಲಾಕ್‌ಡೌನ್ ಅವಯಲ್ಲಿ ೧೫,೦೦೦ಕ್ಕೂ ಹೆಚ್ಚು ಆಹಾರದ ಪೊಟ್ಟಣದ ಜೊತೆಗೆ ನೀರಿನ ಬಾಟಲಿಗಳು, ೨೫೦ಕ್ಕಿಂತಲೂ ಅಕ ರೇಷನ್ ಕಿಟ್‌ಗಳನ್ನು ಹಂಚಲಾಗಿದ್ದು ಈ ಬಾರಿಯೂ ಅದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿದಿನ ೩೦೦ರಷ್ಟು ಮಂದಿಗೆ ಆಹಾರ ಒದಗಿಸುತ್ತಿದ್ದೇವೆ. ಆಹಾರ ಪೂರೈಕೆಯಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಬುಧವಾರ ನೂರಾರು ಮಂದಿಗೆ ಗುಣಮಟ್ಟದ ಮಾಸ್ಕ್‌ನ್ನು ಕೂಡ ಹಂಚಿದ್ದೇವೆ. ಸ್ಟೇಟ್ ಬ್ಯಾಂಕ್ ಪರಿಸದಲ್ಲಿ ಹಲವು ಮಂದಿಗೆ ಸೊಳ್ಳೆ ಪರದೆ ವಿತರಿಸುವ ಕೆಲಸವೂ ಆಗಿದೆ ಎನ್ನತ್ತಾರೆ ರಕ್ಷಿತ್ ಸಾಲಿಯಾನ್.

ತಂಡದ ವಾರಿಯರ್‍ಸ್ ಇವರು

ನಿರ್ಗತಿಕರ ನೆರವಿಗೆ ನಿಂತಿರುವ ಸಮಾನ ಮನಸ್ಕ ಯುವಕರ ತಂಡದಲ್ಲಿ ೧೦ ಮಂದಿಯಿದ್ದು, ಪ್ರತಿಯೊಬ್ಬರೂ ಆಹಾರ ವಿತರಣೆಯ ಕಾರ್ಯದಲ್ಲಿ ಕೈ ಜೋಡಿಸುತ್ತಾರೆ. ಜೋಶುವಾ ಡಿಸೋಜಾ, ಸಂಜಯ್ ಕಾಮತ್, ಚೈತನ್ಯ, ಹರಿಪ್ರಸಾದ್, ರಾಹುಲ್ ಪೈ, ಮಹೇಶ್, ನಿತಿನ್ ಮಾಡ, ಅರುಣ್ ಪೈ, ಅಜಿತ್ ಕಾಮತ್, ಸಂದೇಶ್, ಆಯುಷ್ಮಾನ್ ಅಮೀನ್, ಪುಣಿಕ್ ಶೆಟ್ಟಿ ಮುಂತಾದವರು ತಂಡದಲ್ಲಿ ವಾರಿಯರ್‍ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ದಿನಕ್ಕೆ ಸುಮಾರು ೩೦೦ ಮಂದಿಗೆ ಆಹಾರ

ನಗರದ ಉರ್ವ, ಮಣ್ಣಗುಡ್ಡೆ, ಪಿವಿಎಸ್ ಸ್ಟೇಟ್‌ಬ್ಯಾಂಕ್, ಹಂಪನಕಟ್ಟೆ, ಅಳಕೆ ಹೀಗೆ ನಗರದ ವಿವಿಧೆಡೆ ಇರುವ ನಿರ್ಗತಿಕರಿಗೆ ಆಹಾರ ವಿತರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಕೆಲವರು ಮನೆಯಲ್ಲಿ ಯಾವ ಆಹಾರ ಪದಾರ್ಥವೂ ಇಲ್ಲ ಎಂದು ಕರೆ ಮಾಡುತ್ತಾರೆ. ಅವರಿಗೂ ಅಗತ್ಯ ದಿನಸಿಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟನ್ನು ನಿತ್ಯ ಮಾಡುತ್ತಿದ್ದೇವೆ. ಈ ರೀತಿ ಕೆಲಸ ಮಾಡುವುದರಲ್ಲೂ ಒಂದು ರೀತಿಯ ಖುಷಿಯಿದೆ.

ಬರಹ – ರಕ್ಷಿತ್ ಸಾಲಿಯಾನ್.

(Copyrights owned by: billavaswarriors.com )


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »