TOP STORIES:

ಹಸಿದವರಿಗೆ ಅನ್ನ ನೀಡುವ ವಾರಿಯರ್‍ಸ್ ಇವರು! ಸದ್ದಿಲ್ಲದೆ ಸಾಗಿದೆ ಮಾನವೀಯ ಸೇವೆ


ಮಂಗಳೂರು: ಕೊರೋನಾ ಯಾರನ್ನು ಬಿಟ್ಟಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕಣ್ಣಿಗೆ ಕಾಣದ ಪುಟ್ಟ ವೈರಸ್ ಎಲ್ಲರನ್ನೂ ಕಾಡಿದೆ. ಕೊರೋನಾ ದಾಳಿಯಿಂದ ಲಕ್ಷಾಂತರ ಮಂದಿಯ ಬದುಕು ಧೂಳೀಪಟವಾಗಿರುವುದು ಅಷ್ಟೇ ಸತ್ಯ.

(Copyrights owned by: billavaswarriors.com )

ಕೊರೋನಾ ಮೊದಲ ಅಲೆ ಮುಗಿಯಿತು ಎನ್ನವಾಗಲೇ ಎರಡನೆಯ ಧಾಂಗುಡಿಯಿಟ್ಟಿತ್ತು. ಇದರ ದಾಳಿಗೆ ಸಿಲುಕಿದವರು ಅದೆಷ್ಟೋ ಮಂದಿ. ಈ ನಡುವೆ ಕರ್ಫ್ಯೂ, ಲಾಕ್‌ಡೌನ್‌ನಿಂದಾಗಿ ಬದುಕು ಕಳೆದುಕೊಂಡವರಿಗೆ ಲೆಕ್ಕವಿಲ್ಲ.

ಕಾಡಿದ ಕೊರೋನಾದಿಂದಾಗಿ ದಿನಗೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದೊದಗಿದೆ. ನಿರ್ಗತಿಕರು, ಭಿಕ್ಷೆ ಬೇಡಿಕೊಂಡು ದಿನ ಕಳೆಯುತ್ತಿದ್ದವರ ಸ್ಥಿತಿಯಂತೂ ಮತ್ತಷ್ಟು ಶೋಚನೀಯವಾಗಿದೆ. ಆದರೆ ಮಂಗಳೂರಿನಲ್ಲಿ ಯುವಕರ ತಂಡವೊಂದು ಇವರ ನೆರವಿಗೆ ನಿಂತಿದೆ. ಸದ್ದಿಲ್ಲದೆ ಅನ್ನದಾನದ ಕೈಂಕರ್ಯದಲ್ಲಿ ತೊಡಗಿಕೊಂಡಿರುವ ಇವರು ಕೊರೋನಾ ವಾರಿಯರ್‍ಸ್ ಆಗಿ ಕೆಲಸ ಮಾಡುತ್ತಿದ್ದಾರೆ. ಇವರು ನಿಜವಾಗಿಯೂ ಹಸಿದವರ ಪಾಲಿನ ವಾರಿಯರ್‍ಸ್!

ಸಮಾನ ಮನಸ್ಕ ಯುವಕರ ತಂಡ

ಮಂಗಳೂರಿನ ಉರ್ವದಲ್ಲಿ ಪುಟ್ಟ ಹೋಟೆಲ್ ನಡೆಸುತ್ತಿರುವ ರಕ್ಷಿತ್ ಸಾಲಿಯಾನ್ ನೇತೃತ್ವದ ತಂಡವೇ ಕೊರೋನಾ ಅವಯಲ್ಲಿ ಹಸಿದವರ ಪಾಲಿಗೆ ಸಂಜೀವಿನಿಯಾದ ತಂಡ. ಕೊರೋನಾ ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಮನೆಯಿಂದ ಹೊರಬರಲಾಗದ ಸ್ಥಿತಿಯಿದೆ. ಮನೆ ಇದ್ದವರು ಮನೆಯಲ್ಲಿ ತುತ್ತು ಅನ್ನವನ್ನಾದರೂ ತಿಂದು ದಿನ ಕಳೆಯಬಹುದು. ಆದರೆ ನಿರ್ಗತಿಕರು, ಅಂಗವಿಕಲರು, ಡೇರೆ ಹಾಕಿಕೊಂಡು ಬದುಕು ಕಟ್ಟಿಕೊಂಡವರ ಪಾಡೇನು? ಇವರ ಬಗ್ಗೆ ಯೋಚನೆ ಬಂದದ್ದೇ ತಡ ರಕ್ಷಿತ್ ಸಾಲಿಯಾನ್ ನೇತೃತ್ವದ ಸಮಾನ ಮನಸ್ಕ ಯುವಕರು ಒಂದು ತಂಡ ಕಟ್ಟಿದ್ದರು. ಈ ತಂಡದ ಶ್ರಮದಿಂದಾಗಿ ನಿತ್ಯ ಹಸಿವಿನಿಂದ ಬಳಲುತ್ತಿರುವವರ ಹಸಿವು ನೀಗುತ್ತಿದೆ.

ಯಾವುದೇ ಪ್ರಚಾರ ಬಯಸದೆ ನಿರಂತರ ನೂರಾರು ಮಂದಿಗೆ ಅನ್ನದಾನ ಮಾಡುತ್ತಿದ್ದಾರೆ. ಇವರ ಈ ರೀತಿಯ ಸೇವೆಗೆ ವ್ಯಾಪಕ ಶ್ಲಾಘನೆಯೂ ವಕ್ತವಾಗುತ್ತಿದೆ. ಸಮಾಜದಲ್ಲಿ ಯಾರೂ ಹಸಿದಿರಬಾರದು, ನಮ್ಮಿಂದಾದ ನೆರವು ನೀಡಬೇಕು ಎಂಬ ಮಾನವೀಯ ನೆಲಯಲ್ಲಿ ಯುವಕರ ತಂಡ ಕೆಲಸ ಮಾಡುತ್ತಿದೆ.

ವರುಷದಿಂದ ನಿರಂತರ ಸೇವೆ

ಕಳೆದ ವರ್ಷ ಕೊರೋನಾ ಮೊದಲ ಅಲೆಯ ಲಾಕ್‌ಡೌನ್‌ನ ಮೊದಲ ದಿನದಿಂದ ಯುವಕರ ತಂಡ ಈ ಕಾರ್ಯವನ್ನು ಪ್ರಾರಂಭಿಸಿದೆ. ಅಲ್ಲಿಂದ ಶುರುವಾದ ಈ ಕಾಯಕ ಈ ವರ್ಷ ಕೋವಿಡ್ ಎರಡನೆಯ ಅಲೆಯ ಸಂದರ್ಭದಲ್ಲಿಯೂ ಮುಂದುವರಿದಿದೆ.

(Copyrights owned by: billavaswarriors.com )

ಲಾಕ್‌ಡೌನ್‌ನಿಂದಾಗಿ ಯಾರೂ ಕೂಡ ಹಸಿವಿನಿಂದ ಕಂಗೆಡಬಾರದು. ಅದಕ್ಕಾಗಿ ನಮ್ಮಿಂದಾದ ಪ್ರಯತ್ನ ಮಾಡುತ್ತಿದ್ದೇವೆ. ಹಸಿದವರಿಗೆ ಅನ್ನ ನೀಡುವುದರಲ್ಲಿ ನಮಗೆ ಖುಷಿ ಇದೆ ಎನ್ನುತ್ತಾರೆ ತಂಡದ ಸದಸ್ಯರಲ್ಲಿ ಒಬ್ಬರಾಗಿರುವ ರಕ್ಷಿತ್ ಸಾಲಿಯಾನ್.

ಕಳೆದ ವರ್ಷ ೧೫ ಸಾವಿರಕ್ಕೂ ಅಕ ಮಂದಿಗೆ ಊಟ

ಕಳೆದ ವರ್ಷ ಲಾಕ್‌ಡೌನ್ ಅವಯಲ್ಲಿ ೧೫,೦೦೦ಕ್ಕೂ ಹೆಚ್ಚು ಆಹಾರದ ಪೊಟ್ಟಣದ ಜೊತೆಗೆ ನೀರಿನ ಬಾಟಲಿಗಳು, ೨೫೦ಕ್ಕಿಂತಲೂ ಅಕ ರೇಷನ್ ಕಿಟ್‌ಗಳನ್ನು ಹಂಚಲಾಗಿದ್ದು ಈ ಬಾರಿಯೂ ಅದೇ ರೀತಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿದಿನ ೩೦೦ರಷ್ಟು ಮಂದಿಗೆ ಆಹಾರ ಒದಗಿಸುತ್ತಿದ್ದೇವೆ. ಆಹಾರ ಪೂರೈಕೆಯಲ್ಲೂ ಗುಣಮಟ್ಟಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಬುಧವಾರ ನೂರಾರು ಮಂದಿಗೆ ಗುಣಮಟ್ಟದ ಮಾಸ್ಕ್‌ನ್ನು ಕೂಡ ಹಂಚಿದ್ದೇವೆ. ಸ್ಟೇಟ್ ಬ್ಯಾಂಕ್ ಪರಿಸದಲ್ಲಿ ಹಲವು ಮಂದಿಗೆ ಸೊಳ್ಳೆ ಪರದೆ ವಿತರಿಸುವ ಕೆಲಸವೂ ಆಗಿದೆ ಎನ್ನತ್ತಾರೆ ರಕ್ಷಿತ್ ಸಾಲಿಯಾನ್.

ತಂಡದ ವಾರಿಯರ್‍ಸ್ ಇವರು

ನಿರ್ಗತಿಕರ ನೆರವಿಗೆ ನಿಂತಿರುವ ಸಮಾನ ಮನಸ್ಕ ಯುವಕರ ತಂಡದಲ್ಲಿ ೧೦ ಮಂದಿಯಿದ್ದು, ಪ್ರತಿಯೊಬ್ಬರೂ ಆಹಾರ ವಿತರಣೆಯ ಕಾರ್ಯದಲ್ಲಿ ಕೈ ಜೋಡಿಸುತ್ತಾರೆ. ಜೋಶುವಾ ಡಿಸೋಜಾ, ಸಂಜಯ್ ಕಾಮತ್, ಚೈತನ್ಯ, ಹರಿಪ್ರಸಾದ್, ರಾಹುಲ್ ಪೈ, ಮಹೇಶ್, ನಿತಿನ್ ಮಾಡ, ಅರುಣ್ ಪೈ, ಅಜಿತ್ ಕಾಮತ್, ಸಂದೇಶ್, ಆಯುಷ್ಮಾನ್ ಅಮೀನ್, ಪುಣಿಕ್ ಶೆಟ್ಟಿ ಮುಂತಾದವರು ತಂಡದಲ್ಲಿ ವಾರಿಯರ್‍ಸ್‌ಗಳಾಗಿ ಕೆಲಸ ಮಾಡುತ್ತಿದ್ದಾರೆ.

ದಿನಕ್ಕೆ ಸುಮಾರು ೩೦೦ ಮಂದಿಗೆ ಆಹಾರ

ನಗರದ ಉರ್ವ, ಮಣ್ಣಗುಡ್ಡೆ, ಪಿವಿಎಸ್ ಸ್ಟೇಟ್‌ಬ್ಯಾಂಕ್, ಹಂಪನಕಟ್ಟೆ, ಅಳಕೆ ಹೀಗೆ ನಗರದ ವಿವಿಧೆಡೆ ಇರುವ ನಿರ್ಗತಿಕರಿಗೆ ಆಹಾರ ವಿತರಿಸುವ ಕೆಲಸವನ್ನು ಮಾಡುತ್ತಿದ್ದೇವೆ. ಕೆಲವರು ಮನೆಯಲ್ಲಿ ಯಾವ ಆಹಾರ ಪದಾರ್ಥವೂ ಇಲ್ಲ ಎಂದು ಕರೆ ಮಾಡುತ್ತಾರೆ. ಅವರಿಗೂ ಅಗತ್ಯ ದಿನಸಿಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದೇವೆ. ನಮ್ಮಿಂದ ಎಷ್ಟು ಸಾಧ್ಯವೋ ಅಷ್ಟನ್ನು ನಿತ್ಯ ಮಾಡುತ್ತಿದ್ದೇವೆ. ಈ ರೀತಿ ಕೆಲಸ ಮಾಡುವುದರಲ್ಲೂ ಒಂದು ರೀತಿಯ ಖುಷಿಯಿದೆ.

ಬರಹ – ರಕ್ಷಿತ್ ಸಾಲಿಯಾನ್.

(Copyrights owned by: billavaswarriors.com )


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »