TOP STORIES:

ಹಾಸ್ಯ ಎಂದರೆ ಬೋಳಾರ್ – ಬೋಳಾರ್ ಎಂದರೆ ಹಾಸ್ಯ, ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ


ಅಭಿಪ್ರಾಯ ಸಂಗ್ರಹ

ದೈಜಿವರ್ಲ್ಡ್ ಟಿವಿಯ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮ ಟಿವಿ ಮುಖ್ಯಸ್ಥ, ಜನಪ್ರಿಯ ಪತ್ರಕರ್ತ ವಾಲ್ಟರ್ ನಂದಳಿಕೆ ಹಾಗೂ ತುಳುನಾಡ ತಲೈವ ಅರವಿಂದ್ ಬೋಳಾರ್ ನಡೆಸಿಕೊಡುವ ಕಾರ್ಯಕ್ರಮ. ನಟನೆಯ ಬಗ್ಗೆ ಮಾತನಾಡುವುದಾರೆ ತುಳುನಾಡಿನಲ್ಲಿ ಅರವಿಂದ್ ಬೋಳಾರ್ ಅವರನ್ನು ಮೀರಿಸುವ ನಟರು ಸದ್ಯಕ್ಕೆ ಯಾರೂ ಇಲ್ಲ. ತುಳುನಾಡಿನಲ್ಲಿ ಇದೀಗ ಹಾಸ್ಯ ಎಂದರೆ ಬೋಳಾರ್ ಹಾಗೂ ಬೋಳಾರ್ ಎಂದರೆ ಹಾಸ್ಯ ಎಂಬ ಸ್ಥಿತಿಯುಂಟಾಗಿದೆ.

ಅರವಿಂದ್ ಬೋಳಾರ್ ಇಷ್ಟೊಂದು ಮಟ್ಟಕ್ಕೆ ಬೆಳೆಯಲು ಕಾರಣ ಅವರ ಪ್ರತಿಭೆ ಹಾಗೂ ಲಕ್ಷಾಂತರ ಅಭಿಮಾನಿಗಳ ಆಶೀರ್ವಾದ. ಇದೀಗ ಪ್ರೈವೇಟ್ ಚಾಲೆಂಜ್ ಕಾರ್ಯಕ್ರಮಕ್ಕೆ ಬರೋಣ. ಕಾರ್ಯಕ್ರಮದ ಹದಿನಾಲ್ಕು ಸಂಚಿಕೆಗಳು ಈಗಾಗಲೇ ಮುಗಿದಿವೆ. ಈ ಸರಣಿಯಲ್ಲಿ ಇನ್ನು ಎಷ್ಟು ಸಂಚಿಕೆಗಳು ಬಾಕಿ ಇವೆ ಎಂಬ ಬಗ್ಗೆ ಮಾಹಿತಿಯಿಲ್ಲ. ಆದರೆ ಹದಿನಾಲ್ಕು ಸಂಚಿಕೆಗಳಲ್ಲೂ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡ ಬೋಳಾರರು ತನ್ನನ್ನು ಯಾಕೆ ತುಳುನಾಡ ಮಾಣಿಕ್ಯ ಅಥವಾ ತುಳುನಾಡ ತಲೈವ ಎಂಬ ಎಂದು ವೀಕ್ಷಕರು ಕರೆಯುತ್ತಾರೆ ಎಂದು ಸಾಬೀತುಪಡಿಸಿದ್ದಾರೆ. ಫಿಲೋಸಫಿ ಹಾಗೂ ಉತ್ತಮ ಸಂದೇಶಗಳೊಂದಿಗಿನ ಸ್ಕ್ರಿಪ್ಟ್ ಹೊಂದಿದ ಈ ಕಾರ್ಯಕ್ರಮದಲ್ಲಿ ಬೋಳಾರರು ನೂರಕ್ಕೆ ನೂರು ಶತಮಾನ ಹೊಸತನವನ್ನು ನೀಡುವಲ್ಲಿ ಸಫಲರಾಗಿದ್ದಾರೆ. ಕಳೆದ ವಾರ ಅವರು ಮಾಡಿದ Double Act ಅಂತೂ ಸ್ಥಳೀಯ ವಾಹಿನಿಗಳ ಇತಿಹಾಸದಲ್ಲಿ ಹೊಸ ಧಾಕಲೆಯನ್ನೇ ರಚಿಸಿದೆ. ಆಷ್ಟೊಂದು Perfection ಅದರಲ್ಲಿ ಇತ್ತು.

ಹಳೆ ಮಧ್ಯವನ್ನು ಹೊಸ ಬಾಟ್ಲಿಯಲ್ಲಿ ತುಂಬಿಸಿಕೊಟ್ಟಂತೆ ಪದೇ ಪದೇ ಹಳೆಯ ಹಾಸ್ಯ ಸಂಭಾಷಣೆ, ಕಲಾವಿದರ ಪೋಷಕರ ಹೆಸರು ಉಲ್ಲೇಖಿಸಿ “ ನಿನ್ನ ಅಮ್ಮೆ..ಎನ್ನ ಅಮ್ಮೆ” ಎಂದು ಅವರ ತೇಜೋವಧೆ ಮಾಡಿ, ಅಶ್ಲೀಲ ಮಾತುಗಳೊಂದಿಗೆ, ಸ್ಕ್ರಿಪ್ಟಿ ಬಗ್ಗೆ ಏನೆಂದು ಗೊತ್ತಿರದ, ಇನ್ನೂ Update ಆಗದ ಕೆಲವರು ಮಾಡುವ ಹಾಸ್ಯ ಕಾರ್ಯಕ್ರಮಗಳು ಜನರಿಂದ ತಿರಸ್ಕಾರಗೊಳ್ಳಲು ಆರಂಭವಾಗಿವೆ. ಕೆಲ ಕಾರ್ಯಕ್ರಮಗಳಿಗೆ ವೀಕ್ಷಕರಿಂದ ದೊರಕುವ ನೀರಸ ಪ್ರತಿಕ್ರಿಯೆಯೇ ಇದನ್ನು ತೋರಿಸುತ್ತದೆ. ಆದರೆ ಬೋಳಾರ್ ಕಾರ್ಯಕ್ರಮಗಳು ಮಾತ್ರ ವೀಕ್ಷಕರನ್ನು ಹಿಡಿದು ನಿಲ್ಲಿಸುವಲ್ಲಿ ಸಫಲವಾಗುತ್ತಿವೆ. ಕಾರಣ ಬೋಳಾರರು ಹೊಸತನವನ್ನು ನೀಡುತ್ತಿದಾರೆ. ಅವರ ಹಾಸ್ಯಗಳಲ್ಲಿ ಪ್ರಸ್ತುತ ವಿದ್ಯಾಮಾನಗಳ ಆಗುಹೋಗುಗಳು ನೇರವಾಗಿ ಪ್ರತಿಫಲಿಸುತ್ತಿವೆ.

ಉತ್ತಮ ಸ್ಕ್ರಿಪ್ಟ್ ಹಾಗೂ ತಾಂತ್ರಿಕ ವರ್ಗವನ್ನು ಅವರು ಬಳಸುತ್ತಿದ್ದಾರೆ. ಫತಿಫಲವೆಂಬಂತೆ ದಿನೇ ದಿನೇ ವೀಕ್ಷಕರನ್ನು ಮನಬಿಚ್ಚಿ ನಗಿಸುವ ಜೊತೆಗೆ , ಸಮಾಜಿಕವಾಗಿ ಚಿಂತಿಸಲೂ ಅವರು ಪ್ರೇರೇಪಿಸುತ್ತಾರೆ. ಸಮಾಜದಲ್ಲಿ ಓರ್ವ ಜವಬ್ದಾರಿಯುತ ಕಲಾವಿದನಾಗಿ ಬೋಳಾರ್ ಮಿಂಚಲು ಇದು ಕಾರಣವಾಗಿರಬಹುದು. ಚಿಂತನೆಯೊಂದಿಗೆ ನಮ್ಮನ್ನು ನಗಿಸುವ ಬೋಳಾರ್ ಅವರಿಗೆ ಧನ್ಯವಾದಗಳು.

ತುಳುನಾಡಿನ Updated ಕಲಾಭಿಮಾನಿಗಳ ಪರವಾಗಿ,


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »