TOP STORIES:

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ


ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು ಹಾಕುವುದನ್ನು ಪ್ರತಿ ರಂಗದಲ್ಲೂ ಕಾಣಸಿಗುತ್ತದೆ. ಕಿರುತೆರೆ, ಸಿನಿಮಾ ರಂಗದಲ್ಲಿ ರಂಗಭೂಮಿ, ನಟನೆ, ಮಾಡೆಲಿಂಗ್ ಕ್ಷೇತ್ರದ ಪರಿಚಯವಿದೆಯೇ ಎಂಬ ಪ್ರಶ್ನೆ ಮಾಮೂಲು.

ಅಂತೆಯೇ ಮನದ ಮೂಲೆಯಲ್ಲಿದ್ದ ನಟಿಯಾಗಬೇಕೆಂಬ ಸಣ್ಣ ಕನಸು ಕೋಸ್ಟಲ್ ವುಡ್ನ ‘ಎನ್ನ’ ಎಂಬ ತುಳು ಚಿತ್ರದ ನಾಯಕಿಯಾಗಿ ಆಯ್ಕೆಯಾಗುವುದರೊಂದಿಗೆ ನನಸಾಗಿ ಜನರಿಂದ ಪ್ರಶಂಸೆಗೆ ಪಾತ್ರರಾದವರೇ ಶ್ರುತಿ ಆರ್. ಪೂಜಾರಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಅವರಾಲು ಮಟ್ಟು ಎಂಬ ಸಣ್ಣ ಗ್ರಾಮದ ರಮೇಶ್ ಪೂಜಾರಿ ಮತ್ತು ರೇವತಿ ಪೂಜಾರಿ ದಂಪತಿಗಳ ಪುತ್ರಿಯಾದ ಶ್ರುತಿಯವರು ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರೈಸಿ, ಪದವಿ ಶಿಕ್ಷಣವನ್ನು ಮುಲ್ಕಿಯ ವಿಜಯ ಕಾಲೇಜಿನಲ್ಲಿ ಮುಗಿಸಿದರು. ತದನಂತರ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಬಿಡುವಿನ ವೇಳೆಯಲ್ಲಿ ತನ್ನದೇ ಫೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆ ಮೂಲಕ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ತನ್ನ ಹೊಸ ತುಳು ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಹಂಬಲದಲ್ಲಿದ್ದ ನಿರ್ದೇಶಕ ವಿಶ್ವನಾಥ ಕೋಡಿಕಲ್ ರ ‘ಎನ್ನ’ ಚಿತ್ರದ ಅಡಿಷನ್ ನಡೆಯುತ್ತಿತ್ತು. ಅದರಲ್ಲಿ ಶ್ರುತಿಯವರು ಭಾಗವಹಿಸಿ ಕೊಟ್ಟ ಸಂಭಾಷಣೆಯನ್ನು ನಟನೆಯೊಂದಿಗೆ ಒಪ್ಪಿಸಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗುತ್ತಾರೆ. ಅಲ್ಲಿ ಒಂದಷ್ಟು ಧೈರ್ಯ ಬಂದರೂ ನಟನೆ, ಸಂಭಾಷಣೆ, ಕ್ಯಾಮರ ಇದರ ಬಗೆಗೆ ಸರಿಯಾದ ಅನುಭವ ಇರದೆ ಭಯವಿತ್ತು. ಮುಂದೆ ಚಿತ್ರದ ಪೂರ್ವ ತಯಾರಿಯ ಹಂತದಲ್ಲಿ ಸಾಕಷ್ಟು ತರಬೇತಿ ಪಡೆದೆ ಜೊತೆಗೆ ಹೆಚ್ಚಿನವರು ಹೊಸಬರೇ ಆಗಿದ್ದರಿಂದ ಯಾವುದೇ ರೀತಿಯ ತೊಂದರೆಯಾಗದೆ ಉತ್ತಮವಾಗಿ ಅಭಿನಯಿಸಿದೆ ಎನ್ನುತ್ತಾರೆ‌.

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ಬಹುಷ: ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿದಿತ್ತೇನೋ ಎನ್ನುವ ಅವರು ತನ್ನ ಬದುಕಿನಲ್ಲಿ ಬಂದ ಒಂದೊಳ್ಳೆ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ಮುಂದೆ ಉತ್ತಮ ಅವಕಾಶದ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ. ಇನ್ನಷ್ಟು ಅವಕಾಶಗಳು ಇವರಿಗೆ ಲಭಿಸಲಿ ಎಂದು ಹಾರೈಸುವ.

 


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »