TOP STORIES:

FOLLOW US

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿಯುತ್ತಿತ್ತು: ಶ್ರುತಿ ಆರ್ ಪೂಜಾರಿ


ಯಾವುದೇ ಕಲೆಯ ಬಗ್ಗೆ ಆಸಕ್ತಿಯಿದ್ದಾಗ ಅದನ್ನು ತಿಳಿಯಬೇಕು, ನಾನೂ ಹಾಗೆ ಆಗಬೇಕು, ಎನ್ನುವುದು ಮಾನವ ಸಹಜ ಗುಣ. ಆದರೆ ನಾನೂ ಅದರಲ್ಲಿ ತೊಡಗಬೇಕೆಂದರೆ ಅನುಭವದ ಪ್ರಶ್ನೆ ಕಾಡದಿರದು. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಹಿಂದೇಟು ಹಾಕುವುದನ್ನು ಪ್ರತಿ ರಂಗದಲ್ಲೂ ಕಾಣಸಿಗುತ್ತದೆ. ಕಿರುತೆರೆ, ಸಿನಿಮಾ ರಂಗದಲ್ಲಿ ರಂಗಭೂಮಿ, ನಟನೆ, ಮಾಡೆಲಿಂಗ್ ಕ್ಷೇತ್ರದ ಪರಿಚಯವಿದೆಯೇ ಎಂಬ ಪ್ರಶ್ನೆ ಮಾಮೂಲು.

ಅಂತೆಯೇ ಮನದ ಮೂಲೆಯಲ್ಲಿದ್ದ ನಟಿಯಾಗಬೇಕೆಂಬ ಸಣ್ಣ ಕನಸು ಕೋಸ್ಟಲ್ ವುಡ್ನ ‘ಎನ್ನ’ ಎಂಬ ತುಳು ಚಿತ್ರದ ನಾಯಕಿಯಾಗಿ ಆಯ್ಕೆಯಾಗುವುದರೊಂದಿಗೆ ನನಸಾಗಿ ಜನರಿಂದ ಪ್ರಶಂಸೆಗೆ ಪಾತ್ರರಾದವರೇ ಶ್ರುತಿ ಆರ್. ಪೂಜಾರಿ.

ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಅವರಾಲು ಮಟ್ಟು ಎಂಬ ಸಣ್ಣ ಗ್ರಾಮದ ರಮೇಶ್ ಪೂಜಾರಿ ಮತ್ತು ರೇವತಿ ಪೂಜಾರಿ ದಂಪತಿಗಳ ಪುತ್ರಿಯಾದ ಶ್ರುತಿಯವರು ಹುಟ್ಟೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪೂರೈಸಿ, ಪದವಿ ಶಿಕ್ಷಣವನ್ನು ಮುಲ್ಕಿಯ ವಿಜಯ ಕಾಲೇಜಿನಲ್ಲಿ ಮುಗಿಸಿದರು. ತದನಂತರ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭ ಬಿಡುವಿನ ವೇಳೆಯಲ್ಲಿ ತನ್ನದೇ ಫೋಟೋ ಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆ ಮೂಲಕ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ತನ್ನ ಹೊಸ ತುಳು ಚಿತ್ರದಲ್ಲಿ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಹಂಬಲದಲ್ಲಿದ್ದ ನಿರ್ದೇಶಕ ವಿಶ್ವನಾಥ ಕೋಡಿಕಲ್ ರ ‘ಎನ್ನ’ ಚಿತ್ರದ ಅಡಿಷನ್ ನಡೆಯುತ್ತಿತ್ತು. ಅದರಲ್ಲಿ ಶ್ರುತಿಯವರು ಭಾಗವಹಿಸಿ ಕೊಟ್ಟ ಸಂಭಾಷಣೆಯನ್ನು ನಟನೆಯೊಂದಿಗೆ ಒಪ್ಪಿಸಿ ಚಿತ್ರದ ನಾಯಕಿಯಾಗಿ ಆಯ್ಕೆಯಾಗುತ್ತಾರೆ. ಅಲ್ಲಿ ಒಂದಷ್ಟು ಧೈರ್ಯ ಬಂದರೂ ನಟನೆ, ಸಂಭಾಷಣೆ, ಕ್ಯಾಮರ ಇದರ ಬಗೆಗೆ ಸರಿಯಾದ ಅನುಭವ ಇರದೆ ಭಯವಿತ್ತು. ಮುಂದೆ ಚಿತ್ರದ ಪೂರ್ವ ತಯಾರಿಯ ಹಂತದಲ್ಲಿ ಸಾಕಷ್ಟು ತರಬೇತಿ ಪಡೆದೆ ಜೊತೆಗೆ ಹೆಚ್ಚಿನವರು ಹೊಸಬರೇ ಆಗಿದ್ದರಿಂದ ಯಾವುದೇ ರೀತಿಯ ತೊಂದರೆಯಾಗದೆ ಉತ್ತಮವಾಗಿ ಅಭಿನಯಿಸಿದೆ ಎನ್ನುತ್ತಾರೆ‌.

ಹಿಂಜರಿಕೆಯಿಂದ ನಾನು ಹಿಂದೆ ಸರಿದಿದ್ದರೆ ಬಹುಷ: ನಟಿಯಾಗಬೇಕೆಂಬ ಆಸೆ ಆಸೆಯಾಗಿಯೇ ಉಳಿದಿತ್ತೇನೋ ಎನ್ನುವ ಅವರು ತನ್ನ ಬದುಕಿನಲ್ಲಿ ಬಂದ ಒಂದೊಳ್ಳೆ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದೇನೆ ಎನ್ನುವ ತೃಪ್ತಿ ನನಗಿದೆ. ಮುಂದೆ ಉತ್ತಮ ಅವಕಾಶದ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ. ಇನ್ನಷ್ಟು ಅವಕಾಶಗಳು ಇವರಿಗೆ ಲಭಿಸಲಿ ಎಂದು ಹಾರೈಸುವ.

 


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »