TOP STORIES:

” ಹಿಂದು ಮತ್ತು ಕ್ರೈಸ್ತರ ಸಾಮರಸ್ಯದ ಸಂಕೇತ ಶ್ರಿ ಮಂಗ್ಲಿಮಾರ್ ಅಣ್ಣಪ್ಪಪಂಜುರ್ಲಿ ದೈವಸ್ಥಾನ “


ಬಂಟ್ವಾಳ ತಾಲೂಕಿನ ಅಮ್ಟಾಡಿ ಗ್ರಾಮದ ಮಂಗ್ಲಿಮಾರ್ ಶ್ರಿ ಅಣ್ಣಪ್ಪಪಂಜುರ್ಲಿ ದೈವಸ್ತಾನ ಹಿಂದು ಮತ್ತೂ ಕ್ರೈಸ್ತರ ನಡುವಿನ ಸಾಮರಸ್ಯದ ಕೊಂಡಿ ಯಾಗಿದೆ. ಹೌದು ಅಮ್ಟಾಡಿ ಗ್ರಾಮದ ಗ್ರಾಮ ದೈವ ಅಣ್ಣಪ್ಪ ಪಂಜುರ್ಲಿಯ ಗುಡಿ (ಸಾನ) ಕಟ್ಟಿಸಿದವರು ಅಗತ್ತಿಮಾರು ಸಾಲ್ವದೊರ್ ಕಾಮತ್ (ಸಾಲು ಕಂಬತ್ತಿ)ಮೂಲತಃ ಕ್ರೈಸ್ತಧರ್ಮದವರಾದ ಇವರು ಅಣ್ಣಪ್ಪ ಪಂಜುರ್ಲಿ ದೈವದ ಪರಮಭಕ್ತರು,ಇವರು ಆ ಕಾಲದಲ್ಲಿ ಆಗರ್ಭ ಶ್ರಿಮಂತರಗಿದ್ದರು, ವರ್ಷದಲ್ಲಿ 12 ಪೂಜೆಗಳನ್ನು ಇಗರ್ಜಿಯಲ್ಲಿ ಸಲ್ಲಿಸಿದರೆ ಅದಕ್ಕೂ ಮಿಗಿಲಾಗಿ 13 ನೇಮಗಳನ್ನು ಅಣ್ಣಪ್ಪನಿಗೆ ನೀಡುತಿದ್ದರು. ಇವರಿಗೆ ತುಳುನಾಡಿನ ಸತ್ಯ ದೈವವಾದ ಅಣ್ಣಪ್ಪ ಪಂಜುರ್ಲಿಯ ಮೇಲೆ ಈ ರೀತಿಯಾದ ನಂಬಿಕೆ, ಭಕ್ತಿ ಬರಲು ಒಂದು ಕಾರಣವಿದೆ.


ಬಹಳ ವರ್ಷಗಳ ಹಿಂದೆ ಇದೆ ಸಾಲು ಕಂಬತ್ತಿ ತನ್ನ ಗೆಳೆಯರೊಂದಿಗೆ ನಲ್ಕೆಮಾರ್ ಗೆ ಬಂದು ಸಾರಾಯಿ ಸೇವಿಸಿ,ಅಮಲೆರಿಸಿಕೊಂಡು ದೈವಸ್ತಾನದ ಕಡೆ ಬರುವುದು ವಾಡಿಕೆಯಾಗಿತ್ತು, ಅಪ್ಪಟ ಕ್ರೈಸ್ತನಾಗಿದ್ದ ಇವನಿಗೆ ಸ್ವಲ್ಪ ಸ್ವಧರ್ಮದ ಮೇಲೆ ಪ್ರೀತಿ, ಊರಿನಲ್ಲಿ ಶ್ರಿಮಂತನೆಂಬ ಅಹಂಕಾರ ಹಾಗೂ ಮದಿರೆಯ ಅಮಲಿನಲ್ಲಿ ದೈವಸ್ತಾನವನ್ನು ಅದರ ಸುತ್ತಮುತ್ತಲಿನ ಪ್ರದೇಶವನ್ನು ಅಶೌಚಗೊಳಿಸುತಿದ್ದನು, ಇದರಿಂದ ಬೇಸರಗೊಂಡ ಗ್ರಾಮಸ್ತರು ವರ್ಷದ ನೇಮದ ಸಮಯದಲ್ಲಿ ನೇರವಾಗಿ ಅಣ್ಣಪ್ಪನ ಬಳಿ ದೂರು ಕೊಟ್ಟರು ಅದಕ್ಕೆ ದೈವವು “ನಾನು ನಿಮಗೊಂದು ಉಪಾಯ ಹೇಳುತ್ತೇನೆ ಮುಂದಿನ ಅಮಾವಾಸ್ಯೆಯ ದಿನ ರಾತ್ರಿ ನೀವೆಲ್ಲರೂ ಒಟ್ಟು ಸೇರಿ ದೈವಸ್ತಾನ ಪ್ರಾಂಗಣದ ತುಂಬಾ ನೆಲ್ಲಿಕಾಯಿಯನ್ನು ಹರಡಿಬಿಡಿ ಮುಂದಿನದ್ದು ನಾನು ನೋಡಿಕೊಳ್ಳುತ್ತೆನೆ “ಎಂದು ಅಭಯದ ನುಡಿಯನ್ನು ಕೊಟ್ಟಿತು.

@beautyoftulunad
ಹಾಗೆ ಗ್ರಾಮಸ್ತರು ದೈವ ಹೇಳಿದಂತೆಯೆ ನಡೆದುಕೊಂಡರು, ಆ ಅಮಾವಾಸ್ಯೆಯ ದಿನ ಸಾಲು ಕಂಬತ್ತಿ ಸಾರಾಯಿಯ ನಶೆಯಲ್ಲಿ ದೈವಸ್ತಾನದ ಪ್ರಾಂಗಣಕ್ಕೆ ಬಂದಾಗ ಚೆಲ್ಲಿದ್ದ ನೆಲ್ಲಿಕಾಯಿಯ ಅರಿವಿಲ್ಲದೆ ಅದರ ಮೇಲೆ ಕಾಲಿಟ್ಟು ಜಾರಿ ಬಿಳುತ್ತಾನೆ, ಅವನು ನೆಲಕ್ಕೆ ಬಿಳುತಿದ್ದಂತೆಯೆ ಅಣ್ಣಪ್ಪ ಪಂಜುರ್ಲಿಯು ಆತನ ಕೊರಳನ್ನು ಅಮುಕಿ ಹಿಡಿಯುತ್ತದೆ ಇದನ್ನು ನೋಡಿದ ಆತನ ಹಿಂಬಾಲಕರು ಹೆದರಿ ಓಡಿ ಹೋಗುತ್ತಾರೆ, ಆಗ ಸಾಲು ಕಂಬತ್ತಿಯು “ಯಾರು ನೀನು ಎಂದು ಕೇಳುತ್ತಾನೆ, ನನಗೆ ಏನೂ ಮಾಡಬೇಡ, ನನ್ನನ್ನೂ ಬಿಟ್ಟುಬಿಡು ಎಂದು ಕೇಳಿಕೊಳ್ಳು ತ್ತಾನೆ ಆಗ ದೈವವು “ನಾನು ಅಣ್ಣಪ್ಪ ದೈವ, ನೀನು ನನ್ನ ಸನ್ನಿಧಾನವನ್ನು ಹಾಳುಮಾಡುತಿದ್ದಿ ಎಂದು ಕೋಪದಿಂದ ನುಡಿಯಿತು ಆಗ ಭಯಗೊಂಡ ಸಾಲು ಕಂಬತ್ತಿ “ನನ್ನನ್ನೂ ಬಿಟ್ಟುಬಿಡು, ನಿನಗೆ ಏನು ಬೇಕೆಂದು ಕೇಳು ನಾನು ಕೊಡುತ್ತೇನೆ, ನನ್ನ ಜೀವನ ಪರಿಯಂತ ನಿನ್ನ ಆರಾಧನೆಯನ್ನು ಮಾಡಿಕೊಂಡು ಬರುತ್ತೇನೆ, ನನ್ನನ್ನು ನಂಬು” ಎಂದು ಕೇಳಿಕೊಂಡ ನಂತರ ಆತನನ್ನು ಬಿಟ್ಟು ಮಾಯವಾಗಿ ಹೋಯಿತು.

@beautyoftulunad
ನಂತರ ಸಾಲು ಕಂಬತ್ತಿಯು ಚರ್ಚಿನ ಸ್ತಳದಲ್ಲಿ ಅಣ್ಣಪ್ಪನಿಗೆ ಗುಡಿಯನ್ನು ಕಟ್ಟಿ, ವರ್ಷಂಪ್ರತಿ ಅದ್ದೂರಿಯಿಂದ ನೇಮೊತ್ಸವವನ್ನು ಮಾಡಿ ಅಣ್ಣಪ್ಪನನ್ನು ಭಕ್ತಿಪೂರ್ವಕವಾಗಿ
ಆರಾಧಿಸಿಕೊಂಡು ಬಂದ, ಇದ್ದಕ್ಕೆಯೆ “ಭಯವೆ ಭಕ್ತಿಯ ಮೂಲವೆಂದು ಹಿರಿಯರು ಹೇಳಿರಬೇಕು. ಈ ವಿಷಯವು ಮೊಡಂಕಾಪು ಇಗರ್ಜಿಯವರಿಗೆ ತಲುಪಿತು, ಆದರೆ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದರು, ಒಂದು ದಿನ ವಂದನಿಯ ಧರ್ಮ ಗುರುಗಳಾದ ಬಲ್ತಾಜಾರ್ ಅರಾನ್ಹಾ ಅವರು ಸಾಲು ಕಂಬತ್ತಿಯನ್ನು ಕರೆದು ದೇವರ ಸಮ್ಮುಖದಲ್ಲಿ ತಪ್ಪಿತಸ್ಥ, ಧರ್ಮ ಬಾಹಿರ ಕೆಲಸ ಮಾಡಿದವನು ಎಂದು ಹೇಳಿ ಒಂದು ಮಾತನ್ನು ಹೇಳಿದರು “ನೀನು ಸತ್ತರೆ ನರಕಕ್ಕೆ ಹೋಗುತ್ತಿ, ನಿನಗೆ ಸ್ವರ್ಗ ಸಿಗುವುದಿಲ್ಲ ಎಂದು ಹೇಳುತ್ತಾರೆ ಆಗ ಸಾಲು ಕಂಬತಿ ನಾನು ದೈವವನ್ನು ನಂಬುತ್ತೆನೆ, ಏಸುಸ್ವಾಮಿಯನ್ನು ನಂಬುತ್ತೆನೆ ನನ್ನ ಭಕ್ತಿ ಅಚಲ ಹಾಗಾಗಿ ನಾನು ಸತ್ತರೆ ಖಂಡಿತವಾಗಿ ಸ್ವರ್ಗಕ್ಕೆಹೋಗುತ್ತೇನೆ, ಇದರ ಗುರುತಾಗಿ ನಾನು ಸತ್ತದಿನ ಇಗರ್ಜಿಯ ಮುಖ್ಯದ್ವಾರದಲ್ಲಿ ನನ್ನ ಕೈಯ ಪಡಿಯಚ್ಚು ಮೂಡುತ್ತದೆ ಎಂದು ಹೇಳಿ ಹೋಗುತ್ತಾರೆ. @beautyoftulunad

“ಹಾಗೆಯೆ ಸಾಲು ಕಂಬತ್ತಿ ಸತ್ತ ದಿನ ಆತನ ಕೈಯ ಪಡಿಯಚ್ಚು ಮುಖ್ಯದ್ವಾರದಲ್ಲಿ ಇದ್ದದನ್ನು ಕಂಡ ಗುರುಗಳು ಅಚ್ಛರಿಗೊಂಡು ಸಾಲುಕಂಬತ್ತಿಗಾಗಿ ವಿಶೇಷ ಪೂಜೆ ಮಾಡಿದರು ಕೆಲವು ವರ್ಷಗಳ ಹಿಂದೆ ಆತನ ಕೈಯ ಗುರುತು ಮುಖ್ಯದ್ವಾರದಲ್ಲಿ ಕಾಣಸಿಗುತ್ತಿತ್ತು, ಇಗರ್ಜಿಯ ಪುನರ್ ನವೀಕರಣದ ನಂತರ ಈ ದ್ವಾರವನ್ನು ತೆರವುಗೊಳಿಸಿದ್ದಾರೆ. ಹಾಗಾಗಿ ಸಾಲು ಕಂಬತ್ತಿಯನ್ನು ಈಗಲೂ ದೈವ ವಲಸರಿ ನೇಮದ ಸಂಧರ್ಬ “ಸಾಲ್ ಕಂಬತ್ತಿ ಮಲ್ತಿನ ಕಟ್ಟ್ ಯನ್ನ “ಎಂದು ಆತನ ಭಕ್ತಿಯನ್ನು ಸ್ಮರಿಸುತ್ತದೆ. ಆಧಾರ ಗ್ರಂಥ: ” ಮಂಗ್ಲಿಮಾರ್ ಶ್ರಿ ಅಣ್ಣಪ್ಪ ಸ್ವಾಮಿ, ಜುಮಾದಿ ಬಂಟ ಪರಿವಾರ ದೈವಗಳು ನಡೆದು ಬಂದ ದಾರಿ ” ಬರಹ : ಫನಿಷ್ ಅಮ್ಟಾಡಿ

inputs: beauty of tulunad


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »