TOP STORIES:

FOLLOW US

ಹೀಗೆ ಮಾಡಿ, ಒಂದು ತಿಂಗಳು ಬರುವ ಗ್ಯಾಸ್ ಎರಡು ತಿಂಗಳು ಬರುತ್ತೆ!


ಅಡುಗೆ ಅನಿಲದ ಬೆಲೆಯು ದಿನೇ ದಿನೇ ಏರಿಕೆಯಾಗುತ್ತಲೇ ಇದ್ದು, ಇದು ಜನಸಾಮಾನ್ಯರ ಮೇಲೆ ತೀವ್ರ ಹೊಡೆತ ಹಾಕಿದೆ. ಹೀಗಾಗಿ ಅಡುಗೆ ಗ್ಯಾಸ್ ಬಳಕೆ ಮಾಡುವ ಜನರು ಅಡುಗೆ ಮನೆಯಲ್ಲಿ ಅಡುಗೆ ಮಾಡುವ ಸಂದರ್ಭ ಆದಷ್ಟು ಗ್ಯಾಸ್ ಉಳಿತಾಯ ಮಾಡಲು ಪ್ರಯತ್ನಿಸಬೇಕು.

ಗ್ಯಾಸ್ ನ್ನು ಉಳಿತಾಯ ಮಾಡಿದರೆ ಅದರಿಂದ ಹಣದ ಉಳಿತಾಯವು ಆಗುವುದು. ಹಾಗಾದರೆ ಗ್ಯಾಸ್ ಉಳಿಸುವುದು ಅಷ್ಟು ಸುಲಭವೇ ಎನ್ನುವ ಪ್ರಶ್ನೆಯು ಬರಬಹುದು. ಗ್ಯಾಸ್ ಉಳಿಸಲು ಏನು ಮಾಡಬೇಕು ಎಂದು ನೀವು ತಿಳಿಯಿರಿ.

​ಬರ್ನರ್ ಶುಚಿಯಾಗಿರಬೇಕು

ಗ್ಯಾಸ್ ನ್ನು ಉಳಿತಾಯ ಮಾಡಲು ನಿಯಮಿತವಾಗಿ ಬರ್ನರ್ ನ್ನು ಶುಚಿ ಮಾಡುತ್ತಲಿರಬೇಕು. ಬೆಂಕಿಯ ಬಣ್ಣವನ್ನು ಗಮನಿಸಿ ಮತ್ತು ಅದು ನೀಲಿ ಇದ್ದರೆ ಆಗ ಸರಿಯಾಗಿದೆ ಎಂದು ಹೇಳಬಹುದು.
ಆದರೆ ಕೆಂಪು, ಹಳದಿ ಅಥವಾ ಕಿತ್ತಳೆ ಬಣ್ಣದಲ್ಲಿದ್ದರೆ, ಆಗ ಅದು ಸರಿಯಾಗಿ ಉರಿಯುತ್ತಿಲ್ಲ ಎಂದರ್ಥ.ಬರ್ನರ್ ನ್ನು ನಿಯಮಿತವಾಗಿ ಶುಚಿ ಮಾಡುತ್ತಲಿದ್ದರೆ, ಅದರಿಂದ ಬೆಂಕಿಯ ಬಣ್ಣವು ನೀಲಿ ಆಗಿರುವುದು. ಇದರಿಂದ ಗ್ಯಾಸ್ ನಷ್ಟವಾಗುವುದು ತಪ್ಪುವುದು.

​ಪಾತ್ರೆಗಳನ್ನು ಒರೆಸಿ

ಕೆಲವರು ಕುಕ್ಕರ್, ಪಾತ್ರೆ ಇತ್ಯಾದಿಗಳನ್ನು ತೊಳೆದು ನೇರವಾಗಿ ಗ್ಯಾಸ್ ಮೇಲೆ ಇಟ್ಟುಬಿಡುವರು. ಆಧರೆ ಇದರಿಂದ ಗ್ಯಾಸ್ ವೆಚ್ಚವಾಗುವುದು.
ಇದಕ್ಕಾಗಿ ಪಾತ್ರೆಯನ್ನು ತೊಳೆದ ಬಳಿಕ ಸ್ವಲ್ಪ ಒರೆಸಿಕೊಳ್ಳಿ. ಇದರಿಂದ ಪಾತ್ರೆ ಬೇಗ ಬಿಸಿ ಆಗುವುದು ಹಾಗೂ ಗ್ಯಾಸ್ ವೆಚ್ಚವಾಗುವುದು ತಪ್ಪುವುದು.
ಮೊದಲೇ ತಯಾರಿಸಿಡಿ

ಅಡುಗೆ ಮಾಡಲು ಬೇಕಾಗಿರುವಂತಹ ಸಾಮಗ್ರಿಗಳನ್ನು ನೀವು ಮೊದಲೇ ತಯಾರು ಮಾಡಿಟ್ಟುಕೊಂಡು ಇದರ ಬಳಿಕ ಗ್ಯಾಸ್ ಉರಿಸಿ. ಗ್ಯಾಸ್ ಉರಿಸಿದ ಬಳಿಕ ತರಕಾರಿ ಕತ್ತರಿಸುವುದು ಸರಿಯಲ್ಲ. ಬೇಕಾಗುವಂತಹ ಸಾಮಗ್ರಿಗಳನ್ನು ಪಕ್ಕದಲ್ಲೇ ಇಟ್ಟುಕೊಂಡು ಅಡುಗೆ ಮಾಡಿ.

​ಪಾತ್ರೆಯ ಮುಚ್ಚಳ ಹಾಕಿಡಿ

ನೀವು ಯಾವುದೇ ಆಡುಗೆ ಮಾಡುತ್ತಲಿದ್ದರೂ ಆಗ ಪಾತ್ರೆಯ ಮುಚ್ಚಳ ಹಾಕಿಟ್ಟರೆ ಅದರಿಂದ ಬೇಗ ಬೇಯುವುದು ಹಾಗೂ ಅದರಿಂದ ಗ್ಯಾಸ್ ಕೂಡ ಉಳಿತಾಯ ಆಗುವುದು. ಪಾತ್ರೆಯ ಮುಚ್ಚಳವನ್ನು ಮುಚ್ಚಿಟ್ಟರೆ ಅದರಿಂದ ಹಬೆಯು ನಿರ್ಮಾಣವಾಗಿ ಆಹಾರ ಬೇಗ ಬೇಯುವುದು.

ಧಾನ್ಯ ಮತ್ತು ಅಕ್ಕಿ ನೆನೆಸಿಡಿ

ಕೆಲವೊಂದು ಧಾನ್ಯಗಳು ಬೇಯಲು ತುಂಬಾ ಸಮಯ ಬೇಕಾಗುವುದು. ಹೀಗಾಗಿ ಧಾನ್ಯಗಳು ಮತ್ತು ಅಕ್ಕಿಯನ್ನು ಕೆಲವು ಗಂಟೆಗಳ ಕಾಲ ನೆನೆಯಲು ಹಾಕಿ. ಇದರಿಂದ ಬೇಗನೆ ಬೇಯಲು ನೆರವಾಗುವುದು ಹಾಗೂ ಗ್ಯಾಸ್ ಉಳಿತಾಯವಾಗುವುದು.

​ಕೆಲವು ನಿಮಿಷ ಬಳಿಕ ಗ್ಯಾಸ್ ಕಡಿಮೆ ಮಾಡಿ

ಒಮ್ಮೆ ಪಾತ್ರೆಯು ಬಿಸಿಯಾದ ಬಳಿಕ ಗ್ಯಾಸ್ ಬೆಂಕಿ ಕಡಿಮೆ ಮಾಡಿ. ಆಹಾರ ಕುದಿಯಲು ಆರಂಭಿಸಿದ ವೇಳೆ ತುಂಬಾ ಕಡಿಮೆ ಮಾಡಿಕೊಳ್ಳಬಹುದು. ಇದರಿಂದ ತರಕಾರಿಗಳಲ್ಲಿ ಪೋಷಕಾಂಶಗಳು ಹಾಗೆ ಉಳಿಯುವುದು ಹಾಗೂ ಗ್ಯಾಸ್ ಬಳಕೆ ಕಡಿಮೆ ಆಗುವುದು.

​ಕುಕ್ಕರ್ ಬಳಸಿ

ಪ್ರೆಶರ್ ಕುಕ್ಕರ್ ನಲ್ಲಿ ಅಡುಗೆ ಬೇಗ ಆಗುವುದು ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಹೀಗಾಗಿ ಗ್ಯಾಸ್ ಖರ್ಚು ಕಡಿಮೆ ಮಾಡಲು ಕುಕ್ಕರ್ ನ್ನು ಬಳಸಿ. ಇದು ಸಮಯ ಹಾಗೂ ಗ್ಯಾಸ್ ಎರಡನ್ನು ಉಳಿತಾಯ ಮಾಡುವುದು.

ಅಗಲವಾದ ಪಾತ್ರೆ ಬಳಸಿ

ಕೆಲವರು ತುಂಬಾ ಸಣ್ಣ ಪಾತ್ರೆಗಳನ್ನು ಗ್ಯಾಸ್ ನಲ್ಲಿ ಇಡುವರು. ಇದರಿಂದ ಗ್ಯಾಸ್ ಹೊರಭಾಗಕ್ಕೆ ಬರುವುದು. ಗ್ಯಾಸ್ ನಲ್ಲಿ ಅಗಲವಾದ ಪಾತ್ರೆಗಳನ್ನು ಇಡಬೇಕು. ಇದರಿಂದ ಗ್ಯಾಸ್ ಹೊರಗೆ ಬರುವುದು ತಪ್ಪುವುದು ಹಾಗೂ ಗ್ಯಾಸ್ ನ ಉಳಿತಾಯ ಕೂಡ ಆಗುವುದು.

​ಲೀಕ್ ಇದೆಯಾ ಎಂದು ನೋಡಿ

ಬರ್ನರ್, ಪೈಪ್ ಮತ್ತು ರೆಗ್ಯೂಲೇಟರ್ ನಲ್ಲಿ ಗ್ಯಾಸ್ ಲೀಕ್ ಆಗುತ್ತಿದೆಯಾ ಎಂದು ನೋಡಿ. ಮೂಗಿನ ಮೂಲಕ ಸೋರಿಕೆ ಪತ್ತೆ ಮಾಡಬಹುದು. ಯಾವುದೇ ಲೀಕ್ ಇದ್ದರೆ ಆಗ ನೀವು ಬೇಗನೆ ಇದನ್ನು ಪತ್ತೆ ಮಾಡಿ.
ಗ್ಯಾಸ್ ನ ವಾಸನೆ ಬರುತ್ತಲಿದ್ದರೆ, ಆಗ ಲೀಕ್ ಇದೆ ಎಂದು ಅರ್ಥ ಮಾಡಿಕೊಳ್ಳಿ. ಕೆಲವೊಂದು ಸಲ ಇದು ಅಪಾಯಕಾರಿ ಕೂಡ ಆಗಬಹುದು. ಹೀಗಾಗಿ ಪದೇ ಪದೇ ಇದನ್ನು ಗಮನಿಸುತ್ತಿರಬೇಕು.
ಸೂಕ್ತ ಸರಬರಾಜುದಾರರಿಂದ ಪಡೆಯಿರಿ: ನೀವು ಸೂಕ್ತ ಸರಬರಾಜುದಾರರಿಂದ ಗ್ಯಾಸ್ ಖರೀದಿ ಮಾಡಿ. ಅನಧಿಕೃತ ಗ್ಯಾಸ್ ಬಳಕೆ ಮಾಡಬೇಡಿ. ಇದರ ತೂಕವನ್ನು ಸರಿಯಾಗಿ ಗಮನಿಸಿ ಪಡೆಯಿರಿ.

​ಕೊನೆ ಮಾತು

ನಿಮಗೆ ಈಗ ಗ್ಯಾಸ್ ಉಳಿತಾಯದ ಬಗ್ಗೆ ತಿಳಿದಿದೆ. ಇನ್ನು ನೀವು ಇದನ್ನು ಪಾಲಿಸಿಕೊಂಡು ಹೋಗಿ ನಿಮಗಾಗಿ ಹಾಗೂ ಕುಟುಂಬಕ್ಕಾಗಿ ಗ್ಯಾಸ್ ಉಳಿತಾಯ ಮಾಡಿ.
ಗ್ಯಾಸ್ ಉಳಿತಾಯವು ಪ್ರತಿನಿತ್ಯವೂ ಏನೂ ಬದಲಾವಣೆ ಉಂಟು ಮಾಡದು, ಆದರೆ ಇದು ತಿಂಗಳಲ್ಲಿ ಹಣ ಉಳಿತಾಯ ಮಾಡುವುದು. ಸಣ್ಣ ಸಣ್ಣ ಪ್ರಮಾಣದಲ್ಲಿನ ಉಳಿತಾಯವು ದೊಡ್ಡದಾಗುವುದು.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »